ದುಸ್ಥಿತಿಯಲ್ಲಿ ಗರಸಂಗಿ ಸರ್ಕಾರಿ ಶಾಲೆ


Team Udayavani, Jul 9, 2018, 12:19 PM IST

vij-2.jpg

ನಾಲತವಾಡ: ಸುತ್ತಲೂ ಬಿರುಕು ಬಿಟ್ಟ ಗೋಡೆಗಳು, ಜೀವ ಭಯ ಉಂಟು ಮಾಡಿದ ಶಿಥಿಲ ಛಾವಣಿ, ಭಯಾನಕ ರೀತಿಯಲ್ಲಿ ಕಾಣಿಸಿಕೊಂಡ ಕಬ್ಬಿಣದ ಸರಳುಗಳು, ಶಾಲಾ ಮುಂಭಾಗದ ಪಡಸಾಲೆಯ ಕಂಬಗಳು ಸಂಪೂರ್ಣ ಬಿರುಕುಗೊಂಡು ಮುರಿದು ಬೀಳುವ ಸ್ಥಿತಿ. ಇದು ಆಲೂರ ಕ್ಲಸ್ಟರ್‌ ವ್ಯಾಪ್ತಿಯ ಗರಸಂಗಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ.

62 ಮಕ್ಕಳು ಕಲಿಯುತ್ತಿರುವ ಶಾಲೆಯಲ್ಲಿ ಮೂವರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಲಾದ ಗರಸಂಗಿ ಗ್ರಾಮದಲ್ಲಿ ಅಡುಗೆ ಕೋಣೆ ಸೇರಿದಂತೆ ಶಾಲೆ ಸುತ್ತಲೂ ಗೋಡೆಗಳು ಬಿರುಕುಗೊಂಡಿವೆ. ಛಾವಣಿಯ ಸಿಮೆಂಟ್‌ ಮೇಲಿಂದ ಮೇಲೆ ಉದುರುತ್ತಿದ್ದು ಕಬ್ಬಿಣದ ಸರಳುಗಳು ಕಾಣಿಸಿಕೊಂಡು ಭಯ ಉಂಟು ಮಾಡಿದೆ. 

ಅಡುಗೆಯ ಕೋಣೆಯೂ ಸಂಪೂರ್ಣ ಬಿರುಕುಗೊಂಡಿದ್ದು ಅಡುಗೆಯವರೂ ಸಹ ಜೀವ ಕೈಯಲ್ಲಿ ಹಿಡಿದೇ ಅಡುಗೆ ಮಾಡಬೇಕಿದೆ. ನಿತ್ಯ ಅಕ್ಕಿ ಹಾಗೂ ಇತರೆ ಆಹಾರ ಸಾಮಗ್ರಿಗಳನ್ನು ಹೊರಗಡೆ ಕುಳಿತೆ ಸಿದ್ಧಪಡಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಭಯ ಹುಟ್ಟಿಸಿದ ಛಾವಣಿಗಳು: ಶಾಲೆಯ ಎಲ್ಲ ಕೊಠಡಿಗಳ ಛಾವಣಿಯ ಸಿಮೆಂಟ್‌ ಉದುರಿದ ಪರಿಣಾಮ ಕಬ್ಬಿಣದ ಸರಳುಗಳು ಕಾಣಿಸಿಕೊಂಡಿದ್ದು, ಮಕ್ಕಳು ಜೀವ ಕೈಯಲ್ಲಿ ಹಿಡಿದೇ ಕಲಿಯಬೇಕಿದೆ. 

ಮಳೆಗಾಲದಲ್ಲೂ ಸಹ ಸೋರುತ್ತಿದೆ ಎನ್ನಲಾಗಿದೆ. ಶಾಲಾ ದಾಖಲಾತಿ ನಿರ್ವಹಣೆಯ ಮುಖ್ಯಗುರುಗಳ ಕೊಠಡಿ ಛಾವಣಿಯ ಕಬ್ಬಿಣದ ಸರಳುಗಳು ಕಾಣಿಸಿಕೊಂಡಿದ್ದು ಮೇಲಿಂದ ಮೇಲೆ ಈಗಲೂ ಸಿಮೆಂಟ್‌ ಹಾಗೂ ಜಲ್ಲೆ ಉದುರುತ್ತಿದ್ದು ಮುಖ್ಯಗುರುಗಳು ಮೈಯಲ್ಲ ಕಣ್ಣಾಗಿಸಿಕೊಂಡೇ ಕರ್ತವ್ಯ ನಿರ್ವಹಿಸಬೇಕಿದೆ.

ಹದಗೆಟ್ಟ ಶೌಚಾಲಯಗಳು: ಮಕ್ಕಳ ಹಿತದೃಷ್ಟಿಯಿಂದ ಶಾಲಾ ಪಕ್ಕದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಅಧಿಕಾರಿಗಳ ಹಾಗೂ ಶಾಲಾ ಮುಖ್ಯ ಗುರುಗಳ ನಿರ್ಲಕ್ಷ್ಯದಿಂದ ಇಂದಿಗೂ ಶೌಚಾಲಯಗಳ ಸುತ್ತ ಆವರಿಸಿದ ಜೀನಿ ಗಿಡ ಗಂಟಿಗಳನ್ನು ತೆರವುಗೊಳಿಸಿಲ್ಲ. ಇನ್ನೊಂದೆಡೆ ಶೌಚಾಲಯಗಳು, ಛಾವಣಿ ಹಾಗೂ ಬಾಗಿಲು ಕಂಡಿಲ್ಲ, ಶಿಕ್ಷಣ ಇಲಾಖೆ ಬೇಜವಾಬ್ದಾರಿಯಿಂದ ಮಕ್ಕಳಿಗೆ ಶೌಚಾಲಯ ಸೌಲಭ್ಯವಿಲ್ಲದ ಪರಿಣಾಮ ಬಯಲನ್ನೇ ಅವಲಂಬಿಸಿದ್ದಾರೆ.

ಭಯದಲ್ಲಿ ಪಾಲಕರು: ಗರಸಂಗಿ ಗ್ರಾಮಕ್ಕಿಗ ಸದ್ಯ ಇರುವ ಶಿಥಿಲಗೊಂಡ ಶಾಲೆಯನ್ನು ತೆರುವುಗೊಳಿಸಿ ನೂತನ ಕೊಠಡಿಗಳನ್ನು ನಿರ್ಮಿಸಿ ಮಕ್ಕಳ ಕುರಿತು ಪಾಲಕರಲ್ಲಿ ಜೀವ ಭಯವನ್ನು ನಿವಾರಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು ಎಂದು ಗ್ರಾಮಸ್ಥರ ಬೇಡಿಕೆಯಾಗಿದೆ.

ಬೇಕಿದೆ ಕಾಳಜಿ: ಶಿಕ್ಷಣ ಕ್ಷೇತ್ರದಲ್ಲಿ ನಾನಾ ಯೋಜನೆಗಳು ಜಾರಿಗೆ ತರುತ್ತಲೇ ಇರುವ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಶಾಲಾ ಕೊಠಡಿಗಳು ಶಿಥಿಲಗೊಂಡು ಅಧೋಗತಿ ತಲುಪಿವೆ. ಜೀವ ಭಯದಲ್ಲೇ ಮಕ್ಕಳು ಕಲಿಯುತ್ತಿದ್ದು ಶೈಕ್ಷಣಿಕ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವುದರ ಮೂಲಕ ಇಡಿ ರಾಜ್ಯಾದ್ಯಂತಹ ದುರಸ್ಥಿಯಲ್ಲಿರುವ ಶಾಲೆಗಳಿಗೆ ಕಾಯಕಲ್ಪ ಕಲ್ಪಿಸಲು ಸರಕಾರ ಮುಂದಾಗಬೇಕಿದೆ.

ಮುದ್ದೇಬಿಹಾಳ ತಾಲೂಕಿನಾದ್ಯಂಹ ಒಟ್ಟು 120 ಶಾಲೆಗಳು ಶಿಥಿಲಗೊಂಡು ದುರಸ್ತಿಗೆ ಕಾಯ್ದಿವೆ. ಈಗಾಗಲೇ ಶಾಸಕರ ಆದೇಶದನ್ವಯ ತಾಲೂಕಿನ ಎಲ್ಲ ಶಾಲೆಗಳಿಗೆ ನಮ್ಮ ಸಿಆರ್‌ಪಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದು ಶೀಘ್ರವೇ ದುರಸ್ತಿಗೆ ಇಲಾಖೆಗೆ ಹಾಗೂ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. 
 ಎಸ್‌.ಡಿ. ಗಾಂಜಿ, ಬಿಇಒ ಮುದ್ದೇಬಿಹಾಳ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.