ದುಸ್ಥಿತಿಯಲ್ಲಿ ಗರಸಂಗಿ ಸರ್ಕಾರಿ ಶಾಲೆ


Team Udayavani, Jul 9, 2018, 12:19 PM IST

vij-2.jpg

ನಾಲತವಾಡ: ಸುತ್ತಲೂ ಬಿರುಕು ಬಿಟ್ಟ ಗೋಡೆಗಳು, ಜೀವ ಭಯ ಉಂಟು ಮಾಡಿದ ಶಿಥಿಲ ಛಾವಣಿ, ಭಯಾನಕ ರೀತಿಯಲ್ಲಿ ಕಾಣಿಸಿಕೊಂಡ ಕಬ್ಬಿಣದ ಸರಳುಗಳು, ಶಾಲಾ ಮುಂಭಾಗದ ಪಡಸಾಲೆಯ ಕಂಬಗಳು ಸಂಪೂರ್ಣ ಬಿರುಕುಗೊಂಡು ಮುರಿದು ಬೀಳುವ ಸ್ಥಿತಿ. ಇದು ಆಲೂರ ಕ್ಲಸ್ಟರ್‌ ವ್ಯಾಪ್ತಿಯ ಗರಸಂಗಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ.

62 ಮಕ್ಕಳು ಕಲಿಯುತ್ತಿರುವ ಶಾಲೆಯಲ್ಲಿ ಮೂವರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಲಾದ ಗರಸಂಗಿ ಗ್ರಾಮದಲ್ಲಿ ಅಡುಗೆ ಕೋಣೆ ಸೇರಿದಂತೆ ಶಾಲೆ ಸುತ್ತಲೂ ಗೋಡೆಗಳು ಬಿರುಕುಗೊಂಡಿವೆ. ಛಾವಣಿಯ ಸಿಮೆಂಟ್‌ ಮೇಲಿಂದ ಮೇಲೆ ಉದುರುತ್ತಿದ್ದು ಕಬ್ಬಿಣದ ಸರಳುಗಳು ಕಾಣಿಸಿಕೊಂಡು ಭಯ ಉಂಟು ಮಾಡಿದೆ. 

ಅಡುಗೆಯ ಕೋಣೆಯೂ ಸಂಪೂರ್ಣ ಬಿರುಕುಗೊಂಡಿದ್ದು ಅಡುಗೆಯವರೂ ಸಹ ಜೀವ ಕೈಯಲ್ಲಿ ಹಿಡಿದೇ ಅಡುಗೆ ಮಾಡಬೇಕಿದೆ. ನಿತ್ಯ ಅಕ್ಕಿ ಹಾಗೂ ಇತರೆ ಆಹಾರ ಸಾಮಗ್ರಿಗಳನ್ನು ಹೊರಗಡೆ ಕುಳಿತೆ ಸಿದ್ಧಪಡಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಭಯ ಹುಟ್ಟಿಸಿದ ಛಾವಣಿಗಳು: ಶಾಲೆಯ ಎಲ್ಲ ಕೊಠಡಿಗಳ ಛಾವಣಿಯ ಸಿಮೆಂಟ್‌ ಉದುರಿದ ಪರಿಣಾಮ ಕಬ್ಬಿಣದ ಸರಳುಗಳು ಕಾಣಿಸಿಕೊಂಡಿದ್ದು, ಮಕ್ಕಳು ಜೀವ ಕೈಯಲ್ಲಿ ಹಿಡಿದೇ ಕಲಿಯಬೇಕಿದೆ. 

ಮಳೆಗಾಲದಲ್ಲೂ ಸಹ ಸೋರುತ್ತಿದೆ ಎನ್ನಲಾಗಿದೆ. ಶಾಲಾ ದಾಖಲಾತಿ ನಿರ್ವಹಣೆಯ ಮುಖ್ಯಗುರುಗಳ ಕೊಠಡಿ ಛಾವಣಿಯ ಕಬ್ಬಿಣದ ಸರಳುಗಳು ಕಾಣಿಸಿಕೊಂಡಿದ್ದು ಮೇಲಿಂದ ಮೇಲೆ ಈಗಲೂ ಸಿಮೆಂಟ್‌ ಹಾಗೂ ಜಲ್ಲೆ ಉದುರುತ್ತಿದ್ದು ಮುಖ್ಯಗುರುಗಳು ಮೈಯಲ್ಲ ಕಣ್ಣಾಗಿಸಿಕೊಂಡೇ ಕರ್ತವ್ಯ ನಿರ್ವಹಿಸಬೇಕಿದೆ.

ಹದಗೆಟ್ಟ ಶೌಚಾಲಯಗಳು: ಮಕ್ಕಳ ಹಿತದೃಷ್ಟಿಯಿಂದ ಶಾಲಾ ಪಕ್ಕದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಅಧಿಕಾರಿಗಳ ಹಾಗೂ ಶಾಲಾ ಮುಖ್ಯ ಗುರುಗಳ ನಿರ್ಲಕ್ಷ್ಯದಿಂದ ಇಂದಿಗೂ ಶೌಚಾಲಯಗಳ ಸುತ್ತ ಆವರಿಸಿದ ಜೀನಿ ಗಿಡ ಗಂಟಿಗಳನ್ನು ತೆರವುಗೊಳಿಸಿಲ್ಲ. ಇನ್ನೊಂದೆಡೆ ಶೌಚಾಲಯಗಳು, ಛಾವಣಿ ಹಾಗೂ ಬಾಗಿಲು ಕಂಡಿಲ್ಲ, ಶಿಕ್ಷಣ ಇಲಾಖೆ ಬೇಜವಾಬ್ದಾರಿಯಿಂದ ಮಕ್ಕಳಿಗೆ ಶೌಚಾಲಯ ಸೌಲಭ್ಯವಿಲ್ಲದ ಪರಿಣಾಮ ಬಯಲನ್ನೇ ಅವಲಂಬಿಸಿದ್ದಾರೆ.

ಭಯದಲ್ಲಿ ಪಾಲಕರು: ಗರಸಂಗಿ ಗ್ರಾಮಕ್ಕಿಗ ಸದ್ಯ ಇರುವ ಶಿಥಿಲಗೊಂಡ ಶಾಲೆಯನ್ನು ತೆರುವುಗೊಳಿಸಿ ನೂತನ ಕೊಠಡಿಗಳನ್ನು ನಿರ್ಮಿಸಿ ಮಕ್ಕಳ ಕುರಿತು ಪಾಲಕರಲ್ಲಿ ಜೀವ ಭಯವನ್ನು ನಿವಾರಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು ಎಂದು ಗ್ರಾಮಸ್ಥರ ಬೇಡಿಕೆಯಾಗಿದೆ.

ಬೇಕಿದೆ ಕಾಳಜಿ: ಶಿಕ್ಷಣ ಕ್ಷೇತ್ರದಲ್ಲಿ ನಾನಾ ಯೋಜನೆಗಳು ಜಾರಿಗೆ ತರುತ್ತಲೇ ಇರುವ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಶಾಲಾ ಕೊಠಡಿಗಳು ಶಿಥಿಲಗೊಂಡು ಅಧೋಗತಿ ತಲುಪಿವೆ. ಜೀವ ಭಯದಲ್ಲೇ ಮಕ್ಕಳು ಕಲಿಯುತ್ತಿದ್ದು ಶೈಕ್ಷಣಿಕ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವುದರ ಮೂಲಕ ಇಡಿ ರಾಜ್ಯಾದ್ಯಂತಹ ದುರಸ್ಥಿಯಲ್ಲಿರುವ ಶಾಲೆಗಳಿಗೆ ಕಾಯಕಲ್ಪ ಕಲ್ಪಿಸಲು ಸರಕಾರ ಮುಂದಾಗಬೇಕಿದೆ.

ಮುದ್ದೇಬಿಹಾಳ ತಾಲೂಕಿನಾದ್ಯಂಹ ಒಟ್ಟು 120 ಶಾಲೆಗಳು ಶಿಥಿಲಗೊಂಡು ದುರಸ್ತಿಗೆ ಕಾಯ್ದಿವೆ. ಈಗಾಗಲೇ ಶಾಸಕರ ಆದೇಶದನ್ವಯ ತಾಲೂಕಿನ ಎಲ್ಲ ಶಾಲೆಗಳಿಗೆ ನಮ್ಮ ಸಿಆರ್‌ಪಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದು ಶೀಘ್ರವೇ ದುರಸ್ತಿಗೆ ಇಲಾಖೆಗೆ ಹಾಗೂ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. 
 ಎಸ್‌.ಡಿ. ಗಾಂಜಿ, ಬಿಇಒ ಮುದ್ದೇಬಿಹಾಳ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.