ಪೌರ ಕಾರ್ಮಿಕರ ಗೋಳು ಕೇಳ್ಳೋರ್ಯಾರು?


Team Udayavani, Jul 30, 2018, 11:52 AM IST

vij-1.jpg

ವಿಜಯಪುರ: ನಿತ್ಯವೂ ನಾವೆಲ್ಲ ಮನೆ ಮುಂದಿನ ಕಸವನ್ನೂ ಗುಡಿಸದೇ ಮನೆಯಲ್ಲಿ ಬೆಚ್ಚಗೆ ಮಲಗಿದ್ದರೆ, ಪೌರಕಾರ್ಮಿಕರು ಮಾತ್ರ ಛಳಿ, ಮಳೆ, ಬಿಸಿಲೆನ್ನದೇ ನಸುಕಿನಲ್ಲೇ ಬೀದಿಗೆ ಬಂದು ಸ್ವತ್ಛತೆಯಲ್ಲಿ ತೊಡಗಿರುತ್ತಾರೆ. ಇಷ್ಟಾಗಿ ಬೆವರಿಗೆ ತಕ್ಕ ಫಲವಾಗಿ ನಾಲ್ಕಾರು ತಿಂಗಳಾದರೂ ಸಂಬಳ ಬರುವುದಿಲ್ಲ. ಹೋರಾಟ ಮಾಡದೇ ಇಲ್ಲಿ ಕೂಲಿ ಸಿಗುವುದಿಲ್ಲ, ಆಧುನಿಕ ಜೀತ ವ್ಯವಸ್ಥೆಯ ಶೋಷಣೆ ಎಂದು ನೋವಿಂದ ಹೇಳುತ್ತಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ನಗರಸಭೆ ಹಂತದಿಂದ ಮಹಾನಗರ ಪಾಲಿಕೆಯಾಗಿ ವಿಜಯಪುರ ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ ಏರಿದ ಬಳಿಕವೂ ಮಹಾನಗರ ನಗರದಲ್ಲಿ ಜನತೆಯಂತೆ ಮಹಾನಗರದ ಪಾಲಿಕೆಯ ಪೌರ ಕಾರ್ಮಿಕರು ಕೂಡ ಇಲ್ಲದ ಸಮಸ್ಯೆ ಹಾಗೂ ಶೋಷಣೆ ಅನುಭವಿಸುತ್ತಿದ್ದಾರೆ. ಮಹಾನಗರ ಪಾಲಿಕೆಯಲ್ಲಿ ಈ ಮೊದಲು ಕಾಯಂ ಸೇವೆಯ 80 ಪೌರ ಕಾರ್ಮಿಕರಿದ್ದಾರೆ. ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುವ ನೌಕರರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ 185 ಹುದ್ದೆಗೆ ಅರ್ಜಿ ಕರೆದರೂ ವಿವಿಧ ಮೀಸಲು ಸೇರಿದಂತೆ ಷರತ್ತಿನ ವ್ಯಾಪ್ತಿಯಲ್ಲಿ ಕಾಯಂ ನೇಮಕವಾದವರು 75 ಕಾರ್ಮಿಕರು ಮಾತ್ರ.
 
ಇದರ ಹೊರತಾಗಿಯೂ ಮಹಾನಗರ ಪಾಲಿಕೆಯಲ್ಲಿ ನಾಲ್ಕು ಖಾಸಗಿ ಸಂಸ್ಥೆಗಳ ಮೂಲಕ 450ಕ್ಕೂ ಅಧಿಕ ಪೌರ ಕಾರ್ಮಿಕರು ಹೊರ ಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅದರಲ್ಲಿ 300ಕ್ಕೂ ಅಧಿಕ ಪೌರ ಕಾರ್ಮಿಕರ ವಯೋಮಿತಿ ಮೀರಿದೆ. ಇದೀಗ ಸರ್ಕಾರ ಹೊರಗುತ್ತಿಗೆ ವ್ಯಸ್ಥೆಯನ್ನು ರದ್ದು ಪಡಿಸಿದ್ದು, ಮಹಾನಗರ ಪಾಲಿಕೆಯ ತಾತ್ಕಾಲಿಕ ನೌಕರರಾಗಿ ಪರಿವರ್ತನೆ ಆಗಲಿದ್ದಾರೆ. ಹೊಸ ಸ್ವರೂಪದ ಶೋಷಣೆ ಆರಂಭವಾಗಲಿದೆ ಎಂಬ ಆತಂಕ ತೋಡಿಕೊಳ್ಳುತ್ತಾರೆ.
 
ಇನ್ನು ಕಳೆದ ಒಂದೂವರೆ ದಶಕದಿಂದ ಹೊರ ಗುತ್ತಿಗೆ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು ಪ್ರತಿ ತಿಂಗಳು ಸಂಬಳ ಪಡೆದ ದಾಖಲೆಯೇ ಇಲ್ಲ. ಕರ್ತವ್ಯ ನಿರ್ವಹಿಸಿದರೂ ಬಲವಂತವಾಗಿ ಗೈರು ಹಾಜರಿ ಎಂದು ದಾಖಲಿಸಿ ಸಂಬಳ ನೀಡದೇ ವಂಚಿಸಲಾಗುತ್ತಿದೆ. ದುಡಿದ ಕಾರ್ಮಿಕರಿಗೆ ನಾಲ್ಕಾರು ತಿಂಗಳಾದರೂ ಸಂಬಳ ದೊರೆಯುವುದಿಲ್ಲ. ಸಂಬಳಕ್ಕಾಗಿ ಬೀದಿಗಿಳಿದು ಹೋರಾಟ ಮಾಡುವುದು, ಈ ಹಂತದಲ್ಲಿ ಒಂದೆರಡು ತಿಂಗಳ ಸಂಬಳ ನೀಡುವುದು ವಾಡಿಕೆಯಾಗಿದೆ. ಕಳೆದ ಐದು ದಿನಗಳ ಹಿಂದಷ್ಟೇ ನಾವು ಸಂಬಳಕ್ಕಾಗಿ ಬೀದಿಗಿಳಿದಿದ್ದೆವು ಎಂದು ಪೌರ ಕಾರ್ಮಿಕರು ದೂರುತ್ತಾರೆ.

ನಮ್ಮ ಮನೆಯ ಮುಂದಿನ ಕಸವನ್ನು ನಾವೇ ಗೂಡಿಸದ ಪರಿಸ್ಥಿತಿಯಲ್ಲಿ ಪೌರ ಕಾರ್ಮಿಕರು ಮಾತ್ರ ಬೀದಿ ಬೀದಿಗಳಲ್ಲಿ ಕಸ ಹಾಗೂ ಒಳಚರಂಡಿ ಸ್ವತ್ಛಗೊಳಿಸುವ ಕಾರ್ಮಿಕರಿಗೆ ಸಂಬಳದ ವಿಷಯದಲ್ಲಿ ಮಾತ್ರವಲ್ಲ, ಇತರೆ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಶೋಷಣೆ ಮುಂದುವರಿದೆ. ಒಳಚರಂಡಿ ಹಾಗೂ ಇತರೆ ಅಪಾಯಕಾರಿ ಕೆಲಸ ಮಾಡು ಪರ ಕಾರ್ಮಿಕರಿಗೆ ಜೀವ ರಕ್ಷಣೆ ಅಗತ್ಯವಾದ ಪೂರಕ ಆಧುನಿಕ ಪರಿಕರಗಳನ್ನು ಒದಗಿಸುತ್ತಿಲ್ಲ. ವರ್ಷಕ್ಕೆ ಬಣ್ಣದ ಒಂದು ಅಂಗಿಯನ್ನು ಕೊಡುವುದನ್ನೇ ಸೌಲಭ್ಯಗಳ ಪೂರೈಕೆ ಎಂದು ಬಿಂಬಿಸಲಾಗುತ್ತದೆ.

ಧೂಳು ಹಾಗೂ ಅಪಾಯಕಾರಿ ವಾತಾವರಣದಿಂದ ರಕ್ಷಿಸಿಕೊಳ್ಳಲು ನೀಡುವ ಮಾಸ್ಕ್ಗಳು ಗುಣಮಟ್ಟದಿಂದ ಕೂಡಿರದ ಕಾರಣ ಒಂದು ವಾರಕ್ಕೆ ಹಾಳಾಗುತ್ತವೆ. ಕೈ ಕವಚಗಳು, ಕಾಲಿನ ರಕಣೆಗೆ ಬಲಿಷ್ಠ ಬೂಟುಗಳು ನಮ್ಮ
ಪಾಲಿಗೆ ಗಗನ ಕುಸುಮ. ಎಷ್ಟೋ ಸಂದರ್ಭದಲ್ಲಿ ಪೌರ ಕಾರ್ಮಿಕರೇ ನೇರವಾಗಿ ಒಳಚರಂಡಿಗೆ ಇಳಿದು ಸ್ವತ್ಛಗೊಳಿಸುವ ದುಸ್ಥಿತಿ ಇದೆ. ಪೌರ ಕಾರ್ಮಿಕರ ಸಧ್ಯದ ಸ್ಥಿತಿ ಆಧುನಿಕ ಶೋಷಿತ ಜೀತ ವ್ಯವಸ್ಥೆಯಲ್ಲದೇ ಬೇರಿನ್ನೇನೂ ಅಲ್ಲ. ಪೌರ ಕಾರ್ಮಿಕರ ಸಮಸ್ಯೆ ಗಂಭೀರ ಸ್ವರೂಪದಲ್ಲಿದ್ದರೂ ಸರ್ಕಾರ ಕಣ್ತೆರೆದು ನೋಡುವುದಿಲ್ಲ.
ನಗರದ ಸ್ವತ್ಛತೆ ಕೆಲಸ ಮಾಡುವ ನಮ್ಮನ್ನು ಸಾರ್ವಜನಿಕರು ತಮ್ಮ ಸೇವಕರೆಂದು ನಮ್ಮ ನೋವಿಗೆ ಧ್ವನಿ ಎತ್ತುವುದಿಲ್ಲ ಎಂದು ದೂರುತ್ತಾರೆ.

ಆದರೆ ಪೌರ ಕಾರ್ಮಿಕರ ಈ ದೂರನ್ನು ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಒಪ್ಪುವುದಿಲ್ಲ. ಪೌರ ಕಾರ್ಮಿಕರಿಗೆ ಇದೀಗ ಹೊರ ಗುತ್ತಿಗೆ ವ್ಯವಸ್ಥೆರದ್ದಾಗಿದೆ. ಒಳಚರಂಡಿ ಸ್ವತ್ಛತೆಗಾಗಿ 4 ಡಿ-ಸಿಲ್ಟಿಂಗ್‌ ಹಾಗೂ 2 ಸಕ್ಕಿಂಗ್‌ ಯಂತ್ರಗಳಿವೆ. ಇದರ ಹೊರತಾಗಿ ಕಾರ್ಮಿಕರ ಹಿತ ರಕ್ಷಣೆಗಾಗಿ ವಿಮಾ ಸೌಲಭ್ಯ ಕಲ್ಪಿಸುವ ಜೊತೆಗೆ ನಿಯಮಿತವಾಗಿ ಆರೋಗ್ಯ ಪರೀಕ್ಷೆಯನ್ನೂ ಮಾಡಿಸಲಾಗುತ್ತದೆ. ಹೀಗೆ ಎಲ್ಲ  ವಸ್ಥೆಯನ್ನೂ ಆಡಲಾಗುತ್ತಿದೆ ಎಂದು ವಿವರಿಸುತ್ತಾರೆ

ಪೌರ ಕಾರ್ಮಿಕರು ಹೊರ ಗುತ್ತಿಗೆ ವ್ಯವಸ್ಥೆ ಇದ್ದಾಗ ಸಂಬಳ ವಿತರಣೆಯಲ್ಲಿ ಕೊಂಚ ಸಮಸ್ಯೆ ಆಗಿತ್ತು. ಹೊರಗುತ್ತಿಗೆ
ವ್ಯವಸ್ಥೆ ರದ್ದಾಗಿರುವ ಕಾರಣವ ಈ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಇದರ ಹೊರತಾಗಿ ಉಳಿದಂತೆ ಎಲ್ಲ
ಸೌಲಭ್ಯಗಳನ್ನೂ ಪಾಲಿಕೆ ಕೈಗೊಂಡಿದೆ. ನಿರ್ಮಾಣ ಹಂತದ ಹಾಗೂ ಮುಖ್ಯ ಚರಂಡಿಗೆ ಸಂಪರ್ಕ ಕಲ್ಪಿಸದ ಹೊಸ
ಒಳಚರಂಡಿಯಲ್ಲಿ ಬಿದ್ದ ಸಿಮೆಂಟ್‌ ತೆಗೆಯಲು ಕಾರ್ಮಿಕರು ಇಳಿದುದನ್ನೇ ಮಾನವ ಬಳಕೆ ಎಂದು ದೂರುವುದು
ಸಲ್ಲದ ಕ್ರಮ. 
 ಹರ್ಷಾ ಶೆಟ್ಟಿ, ಪೌರಾಯುಕ್ತರು, ಮಹಾನಗರ ಪಾಲಿಕೆ, ವಿಜಯಪುರ

ಪೌರ ಕಾರ್ಮಿಕರು ಎಂದರೆ ಆಧುನಿಕ ಜೀತ ವ್ಯವೆಸ್ಥೆ ಹಾಗೂ ಶೋಷಣೆಯ ಹೊಸ ಸ್ವರೂಪದ ದುರವಸ್ಥೆ ಅಷ್ಟೇ. ನಗರವನ್ನು ಸ್ವತ್ಛವಾಗಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಪೌರ ಕಾರ್ಮಿಕರ ಹಿತ ರಕ್ಷಗೆ ವಿಷಯದಲ್ಲಿ ಸರ್ಕಾರ, ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ ಸಹಿಲಸಾಧ್ಯ. ದುಡಿಮೆಗೆ ಪ್ರತಿಫಲ ಪಡೆಯಲು ಕೂಡ ಬೀದಿಗಿಳಿದು ಹೋರಾಡಬೇಕಾದ
ದುಸ್ಥಿತಿ ಇರುವುದೇ ಇದಕ್ಕೆ ಸಾಕ್ಷಿ. 
 ಲಕ್ಷ್ಮಣ ಹಂದ್ರಾಳ, ಪೌರ ಕಾರ್ಮಿಕರ ಮುಖಂಡ, ವಿಜಯಪುರ

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.