ಭಾರತಕ್ಕೆ ಬಂಡವಾಳಶಾಹಿ ವ್ಯವಸ್ಥೆ ಮರಣಾಸ್ತ್ರ


Team Udayavani, Aug 13, 2018, 2:00 PM IST

vij-2.jpg

ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಡವಾಳಶಾಹಿ ವ್ಯವಸ್ಥೆ ಪ್ರತಿಗಾಮಿಯಾಗಿ ಸಾಮ್ರಾಜ್ಯಸಾಹಿ ಹಂತಕ್ಕೆ ತಲುಪಿದಾಗ ಭಾರತ ಸ್ವತಂತ್ರಗೊಂಡಿತು. ಆಗ ಉದಯೋನ್ಮುಖವಾಗಿ ಬೆಳೆದ ಬಂಡವಾಳಶಾಹಿ ವ್ಯವಸ್ಥೆ ಇದೀಗ ಭಾರತದ ಪಾಲಿಗೆ ಬಂಡವಾಳವಾದ ಮರಣಾಸ್ತ್ರ ಹಂತಕ್ಕೆ ತಲುಪಿದೆ ಎಂದು ಎಸ್‌ಯುಸಿಐ ಮುಖಂಡ ಕೆ.ಸೋಮಶೇಖರ ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ ಜರುಗಿದ ಎಸ್‌ಯುಸಿಐ ಕಮ್ಯೂನಿಷ್ಟ ಪಕ್ಷದ ವಿಜಯಪುರ ಜಿಲ್ಲಾ ಎರಡನೇ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ವ್ಯವಸ್ಥೆ ಬದಲಾವಣೆಗಳು ಪ್ರಾರಂಭದಲ್ಲಿ ಪ್ರಗತಿಪರವಾಗಿ ವರ್ತಿಸುತ್ತವೆ. ಪ್ರಜಾಪ್ರಭುತ್ವ ವ್ಯವಸ್ಥೆ ವ್ಯಕ್ತಿ ಸ್ವಾತಂತ್ರ್ಯಾ ಸಮಾನತೆ, ಬ್ರಾತೃತ್ವ ಎನ್ನುವ ಪ್ರಗತಿಪರ ಘೋಷಣೆಯೊಂದಿಗೆ ಬಂದಿದ್ದು, ಆ ಸಂದರ್ಭದಲ್ಲಿ ಮಾನವ ಕುಲದ ಉತ್ತಮ ಬೆಳವಣಿಗೆಯಾಗಿತ್ತು. ಭಾರತದಲ್ಲಿ ಪ್ರಜಾಪ್ರಭುತ್ವ ಪೂರ್ಣಾಧಿಕಾರ ಬಂಡವಾಳಶಾಹಿಗಳ ಕೈಗೆ ಸಿಕ್ಕು ನಲುಗುತ್ತಿದೆ ಎಂದು ಕಿಡಿ ಕಾರಿದರು.

ಪ್ರಜೆಗಳಿಂದ ಆಯ್ಕೆಯಾದ ಇಂದಿನ ನಮ್ಮ ಸರಕಾರಗಳು ಜಾಗತೀಕರಣ, ಉದಾರೀಕರಣ, ಖಾಸಗೀಕರಣ ಹಾಗೂ ಇನ್ನಿತರ ಹಲವಾರು ಜನ ವಿರೋಧಿ ನೀತಿಗಳು ಜಾರಿಗೊಳಿಸಿ ಬಂಡವಾಳ ಶಾಹಿ ಹಿತಾಸಕ್ತಿ ಕಾಪಾಡುತ್ತಿವೆ. ಇದರಿಂದ
ನಿರುದ್ಯೋಗ, ಬೆಲೆ ಏರಿಕೆ, ಬಡತನ, ಭ್ರಷ್ಟಾಚಾರ, ಅಭದ್ರತೆ, ಅಸಹಿಷ್ಣುತೆ, ಕೋಮುವಾದ, ಮೂಢನಂಬಿಕೆ, ಅವೈಜ್ಞಾನಿಕತೆ, ಅತ್ಯಾಚಾರ, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳು ರೈತರು, ಕಾರ್ಮಿಕರು ವಿದ್ಯಾರ್ಥಿ-ಯುವಕರನ್ನು, ಮಹಿಳೆಯರನ್ನು ಒಟ್ಟಾರೆ ಜನಸಾಮಾನ್ಯರನ್ನು ಪೆಡಂಭೂತವಾಗಿ ಕಾಡುತ್ತಿವೆ. ಹಾಗಾಗಿ ಇಂದು ಜನತೆ ಇದೆಲ್ಲದರ ವಿರುದ್ದ ಒಗ್ಗಟ್ಟಾಗಿ ಹೋರಾಟ ಕಟ್ಟಬೇಕಾಗಿದೆ. ಈ ಹೋರಾಟ ಅಂತಿಮವಾಗಿ ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಹೋಗಬೇಕಾಗಿದೆ ಎಂದರು.

ಸಮಾವೇಶದ ಕೊನೆಯಲ್ಲಿ ನೇಮಕವಾದ ನೂತನ ಜಿಲ್ಲಾ ಸಮಿತಿಗೆ ಪ್ರಗತಿಪರ ಹೋರಾಟ ಕಟ್ಟಲು ಪಕ್ಷದ ಸಂಘಟನೆ ವಿಸ್ತರಿಸಲು ಉತ್ಸಾಹಭರಿತರಾಗಿರಬೇಕು. ಜಿಲ್ಲೆಯಲ್ಲಿ ಎಡಪಂಥಿಯ ವಿಚಾರಗಳು ಗಟ್ಟಗೊಳ್ಳುವಲ್ಲಿ ಅನುಮಾನವಿಲ್ಲ. ವ್ಯವಸ್ಥೆಯಲ್ಲಿರುವ ಹಳೆ ವಿಚಾರಗಳು, ವ್ಯಕ್ತಿವಾದ, ಅಹಂ, ಇವುಗಳನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಪಕ್ಷದ ಆಂತರಿಕ ಹೋರಾಟ ಬೆಳೆಸಲು ಯಾವತ್ತೂ ಜಾಗರೂಕತೆ ವಹಿಸಬೇಕು ಎಂದರು.

ಎಸ್‌ಯುಸಿಐ ನೂತನ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ರಂಗದ ಸಮಸ್ಯೆ ಗುರುತಿಸಿ ವಿದ್ಯಾರ್ಥಿ-ಯುವಕರನ್ನು-ಮಹಿಳೆಯರನ್ನು-ರೈತರನ್ನು-ಕಾರ್ಮಿಕರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ಭವಿಷ್ಯದ ದಿನಗಳಲ್ಲಿ ಜಿಲ್ಲೆಯಲ್ಲಿ ವೈಚಾರಿಕವಾಗಿ ಸಾಂಸ್ಕೃತಿಕವಾಗಿ ಸಂಘಟನಾತ್ಮಕವಾದ ಬಲಿಷ್ಠ ಹೋರಾಟ ಕಟ್ಟಲು ಪಣ ತೊಡಲಾಗುವುದು ಎಂದರು. 

ಜಿಲ್ಲಾ ಸಮಿತಿ ಸದಸ್ಯ ಮಲ್ಲಿಕಾರ್ಜುನ, ಭರತಕುಮಾರ, ಸಿದ್ದಲಿಂಗ ಬಾಗೇವಾಡಿ, ಬಾಳು ಜೇವೂರ, ಎಚ್‌.ಗೀತಾ, ಸುನೀಲ ಸಿದ್ರಾಮಶೆಟ್ಟಿ, ಶೋಭಾ ಯರಗುದ್ರಿ, ಶಿವಬಾಳಮ್ಮ ಕೊಂಡಗೂಳಿ, ಕಾಶೀಬಾಯಿ ತಳವಾರ, ಸುಮಾ ಜೇವೋರ, ಸುರೇಖಾ, ಆಕಾಶ್‌, ಕಾವೇರಿ ರಜಪೂತ, ಸಂಗೀತಾ, ದ್ಯಾಮಣ್ಣ ಬಿರಾದರ, ಪ್ರೇಮಾ ಸಿದ್ರಾಮಶೆಟ್ಟಿ, ಅಂಜನಾ ಕುಂಬಾರ, ಮಾಹಾದೇವಿ ಧರ್ಮಶೆಟ್ಟಿ, ಮಹಾದೇವಿ ತೇಲಿ, ಶ್ರೀಕಾಂತ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.