ಕಾಯಿ ಪಲ್ಲೆಗಿಲ್ಲ ಕಿಮ್ಮತ್ತು


Team Udayavani, Aug 18, 2018, 12:51 PM IST

vij-3.jpg

ಸಿಂದಗಿ: ಸತತ ಬರಗಾಲ ಒಂದು ಕಡೆಯಾದರೆ ಇನ್ನೊಂದು ಕಡೆ ರೈತ ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ ಹೀಗಾಗಿ ರೈತ ಸಂಕಷ್ಟದಲ್ಲಿದ್ದಾನೆ. ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಕಾಲುವೆ ನೀರು, ತೆರೆದ ಮತ್ತು ಕೊಳವೆ ಬಾವಿ ನೀರಿನಿಂದ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ.

ಜೀವನ ನಡೆಸುವುದು ಕಷ್ಟಕರವಾಗಿರುವ ತುಟ್ಟಿ ದಿನಮಾನಗಳಲ್ಲಿ ರೈತ ತನ್ನ ಆರ್ಥಿಕ ಜೀವನ ಸುಧಾರಿಸಿಕೊಳ್ಳಲು ತೋಟಗಾರಿಕೆಯ ಅಲ್ಪಾವಧಿ ಕಾಯಿಪಲ್ಲೆ ಬೆಳೆಗಳನ್ನು ಬೆಳೆಯಲು ಮುಂದಾಗುತ್ತಿದ್ದಾನೆ. ಮಾರುಕಟ್ಟೆಯಲ್ಲಿ ಯಾವ ತರಕಾರಿಗೆ ಬೆಳೆಗೆ ಧಾರಣಿ ಇದೆಯೋ ಆ ಬೆಳೆಯನ್ನು ತನ್ನ ಜಮೀನಿನಲ್ಲಿ ಹೆಚ್ಚಾಗಿ ಬೆಳೆಯುತ್ತಾನೆ. ಅದೇ ರೀತಿ ಸಾಕಷ್ಟು ರೈತರು ಏಕ ಕಾಲಕ್ಕೆ ಬೆಳೆಯುವುದರಿಂದ ಏಕ ಕಾಲಕ್ಕೆ ಕಾಯಿಪಲ್ಲೆ ಫಸಲು ಬರುತ್ತದೆ. ಆಗ ಮಾರುಕಟ್ಟೆಗೆ ಮಾರಾಟ ಮಾಡಲು ಬಂದಾಗ ಕಾಯಿಪಲ್ಲೆ ಧಾರಣಿ ಇಳಿದಿರುತ್ತದೆ. ಆಗ ರೈತನಿಗೆ ನಿರಾಶೆ ಎದುರಾಗುತ್ತದೆ. 

ಸಿಂದಗಿ ತಾಲೂಕಿನಲ್ಲಿ ತೋಟಗಾರಿಗೆ ಅಲ್ಪಾವಧಿ ಬೆಳೆ ಕಾಯಿಪಲ್ಲೆ ಬೆಳೆಯುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವರ್ಷ ತೋಟಗಾರಿಕೆ ಇಲಾಖೆಯ ನಿರಿಕ್ಷೆಗಿಂತಲು ಹೆಚ್ಚು ಕೃಷಿ ಭೂಮಿಯಲ್ಲಿ ಬೆಳೆ ಬಿತ್ತನೆಯಾಗಿದೆ. ಟೋಮೆಟೋ ಬೆಳೆಯುವ ಗುರಿ 86 ಹೆಕ್ಟೇರ್‌ ಇದ್ದರೆ 102 ಹೆಕ್ಟೇರ್‌ ಬಿತ್ತನೆಯಾಗಿದೆ. ಉಳ್ಳಾಗಡ್ಡಿ ಬೆಳೆಯುವ ಗುರಿ 374 ಹೆಕ್ಟೇರ್‌ ಇದ್ದರೆ 376 ಹೆಕ್ಟೇರ್‌ ಬಿತ್ತನೆಯಾಗಿದೆ. ಮೆಣಸಿನಕಾಯಿ ಬೆಳೆಯುವ ಗುರಿ 464 ಹೆಕ್ಟೇರ್‌ ಇದ್ದರೆ 469 ಹೆಕ್ಟೇರ್‌ ಬಿತ್ತನೆಯಾಗಿದೆ. ಜೊತೆಗೆ ಇದರಂತೆ ಕಾಯಿಪಲ್ಲೆ ಬೆಳೆಯುವವರ ಸಂಖ್ಯೆ ಹೆಚ್ಚುತ್ತಿದೆ.

ತೋಟಗಾರಿಕೆ ಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳ ಸದುಪಯೋಗ ಪಡೆಸಿಕೊಳ್ಳಲು ಕಳೆದ ವರ್ಷ 250ಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದರೆ ಪ್ರಸಕ್ತ ವರ್ಷದಲ್ಲಿ 500ಕ್ಕೂ ಹೆಚ್ಚು ರೈತರು ಅರ್ಜಿ ಹಾಕಿದ್ದಾರೆ. ಇವರಲ್ಲಿ ಕೆಲವರು ಬಹುವಾರ್ಷಿಕ ಬೆಳೆ ಬೆಳೆದರೆ ಇನ್ನುಳಿದ ಶೇ. 25ಕ್ಕೂ ಹೆಚ್ಚು ರೈತರು ಕಾಯಿಪಲ್ಲೆ ಬೆಳೆಯುತ್ತಾರೆ. ಅಲ್ಪಾವಧಿ ಬೆಳೆ ಬೆಳೆಯುವಲ್ಲಿ ಜಿಲ್ಲೆಯಲ್ಲಿ ಸಿಂದಗಿ ತಾಲೂಕು ದ್ವಿತೀಯ ಸ್ಥಾನದಲ್ಲಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕಾಯಿಪಲ್ಲೆ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳೆದ ಕಾಯಿಪಲ್ಲೆ
ಗೋವಾ ರಾಜ್ಯಕ್ಕೆ ರಫ್ತಾಗುತ್ತದೆ. ಹೆಚ್ಚಿನ ಒಂದು ಭಾಗ ವಿಜಯಪುರ ಜಿಲ್ಲೆಯ ವಿವಿಧ ತಾಲೂಕಿಗೆ ರಫ್ತಾಗುತ್ತದೆ. ತಾಲೂಕಿನ ರೈತರು ಬೆಳೆದ ಕಾಯಿಪಲ್ಲೆ, ಬೆರೆ ಜಿಲ್ಲೆಯಿಂದ ಬಂದ ಕಾಯಿಪಲ್ಲೆ ಏಕ ಕಾಲಕ್ಕೆ ಮಾರುಕಟ್ಟೆಗೆ ಬಂದಿರುವ ಕಾರಣ ಕಾಯಿಪಲ್ಲೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ.

ಧೀರ್ಘಾವಧಿ ಬೆಳೆ ನಿಂಬೆ, ದಾಳಿಂಬರ ಬೆಳೆದರೂ 2-3 ವರ್ಷಗಳಿಂದ ಬೆಲೆ ಇಲ್ಲ. ಆರ್ಥಿಕತೆ ಹೆಚ್ಚಿಸಿಕೊಳ್ಳಲು ಅಲ್ಪಾವಧಿ ತೋಟಗಾರಿಕೆ ಬೆಳೆ ಕಾಯಿಪಲ್ಲೆ ಮಾಡಿದರೂ ರೈತನ ಕೈ ತುಂಬುತ್ತಿಲ್ಲ. ಕನಿಷ್ಠ 5-10 ರೂ.ಗೆ ಮಾರಾಟವಾಗಬೇಕಾದ ಮೆಂತೆ ಪಲ್ಲೆ, ಕೊತ್ತಂಬರಿ, ಕೆರಬೇವು, ರಾಜಗಿರಿ ಪಲ್ಲೆ, ಹುಣಸಿ ಪಲ್ಲೆ, ಮೂಲಂಗಿ, ಸಬ್ಬಸಿಗೆ, ತಪ್ಪಲ ಉಳ್ಳಾಗಡ್ಡಿ ಮುಂತಾದ ಕಾಯಿಪಲ್ಲೆಗಳು
5 ರೂ.ಗೆ 3 ಸುಡು, 10 ರೂ.ಗೆ 8 ಸೂಡು ಮಾರಾಟವಾದರೆ ರೈತರ ಗತಿಯೇನು 

„ರಮೇಶ ಪೂಜಾರ

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.