ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ವಾರದ ಪೆನಲ್‌ ಪುನರಾಯ್ಕೆ


Team Udayavani, Aug 27, 2018, 3:31 PM IST

vij-4.jpg

ಸಿಂದಗಿ: ಪ್ರತಿಷ್ಠಿತ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಯ ಸಾಮಾನ್ಯ ವರ್ಗದ ಒಂಬತ್ತು, ಹಿಂದುಳಿದ ವರ್ಗದ ಎರಡು ಸ್ಥಾನಗಳ ಸದಸ್ಯರ ಆಯ್ಕೆಗೆ ರವಿವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಶರಣಪ್ಪ ವಾರದ ಅವರ ಪೆನಲ್‌ನ ಎಲ್ಲ ಸದಸ್ಯರು ಪುನರಾಯ್ಕೆಯಾಗಿದ್ದಾರೆ. ಮಹಿಳಾ ಮೀಸಲಾತಿಯ ಎರಡು, ಪರಿಶಿಷ್ಟ ಜಾತಿ ಮೀಸಲಾತಿಯ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಎಂ.ಎಸ್‌. ರಾಠೊಡ ಅವರು ಚುನಾವಣೆ
ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

470 ಸದಸ್ಯರಲ್ಲಿ 444 ಸದಸ್ಯರು ಮತ ಚಲಾಯಿಸಿದ್ದು ಶೇ. 94.47 ಮತದಾನವಾಗಿದೆ. 444 ಮತಗಳಲ್ಲಿ ಸಾಮಾನ್ಯ ವರ್ಗದ 9 ಸ್ಥಾನಗಳಿಗೆ ಚಲಾಯಿಸಿದ ಮತಗಳಲ್ಲಿ 11 ಮತಗಳು, ಹಿಂದುಳಿದ ವರ್ಗದ ಎರಡು ಸ್ಥಾನಗಳಿಗೆ ಚಲಾಯಿಸಿದ ಮತಗಳಲ್ಲಿ 15 ಮತಗಳು ತಿರಸ್ಕೃತಗೊಂಡಿವೆ. 

ಸಾಮಾನ್ಯ ವರ್ಗದ ಒಂಬತ್ತು ಸ್ಥಾನಗಳಿಗೆ ಸ್ಪರ್ಧಿಸಿ ನಿಹಾಲಚಂದ ಪೋರವಾಲ (379), ಷಣ್ಮುಖಪ್ಪ ಸಂಗಮ (379), ಸುರೇಶಬಾಬು ಜೋಗೂರ (376), ಸಿದ್ದಲಿಂಗಪ್ಪ ವಡೋxಡಗಿ (360), ರವಿ ನಾಗೂರ (356), ಡಾ| ವಿಜಯಕುಮಾರ ವಾರದ (345), ಶರಣಪ್ಪ ವಾರದ (338), ಪ್ರಕಾಶ ಕೋರಿ (330), ಬಸವರಾಜ ಶಹಾಪುರ (330) ಮತ್ತು ದುಂಡಪ್ಪ ಸೊನ್ನದ (171) ಮತ ಪಡೆದಿದ್ದಾರೆ. ಈ 10 ಅಭ್ಯರ್ಥಿಗಳಲ್ಲಿ ಹೆಚ್ಚು ಮತ ಪಡೆದ 9 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಹಿಂದುಳಿದ ವರ್ಗದ ಎರಡು ಸ್ಥಾನಗಳಿಗೆ ಸ್ಪರ್ಧಿಸಿದ್ದ ಮಹಾದೇವಪ್ಪ ಸಿಂದಗಿ (359), ನೀಲಕಂಠ ಗುಣಾರಿ (351) ಮತ್ತು ಜುಲೀಕರ್‌ ಅಂಗಡಿ (88) ಮತ ಪಡೆದಿದ್ದಾರೆ. ಈ ಮೂವರು ಅಭ್ಯರ್ಥಿಗಳಲ್ಲಿ ಹೆಚ್ಚು ಮತಗಳನ್ನು ಪಡೆದ ಇಬ್ಬರು
ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲಾತಿಯ ಎರಡು ಸ್ಥಾನಗಳಿಗೆ ಮಹಾದೇವಿ ಗುರುಬಸಪ್ಪ ಬಮ್ಮಣ್ಣಿ, ಮಹಾದೇವಿ ಚನ್ನಬಸಪ್ಪ ಪಟ್ಟಣಶೆಟ್ಟಿ ಮತ್ತು ಪರಿಶಿಷ್ಟ ಜಾತಿ ಮೀಸಲಾತಿಯ ಒಂದು ಸ್ಥಾನಕ್ಕೆ ಲಕ್ಷ್ಮಣ ದೊಡಮನಿ ಅವಿರೋಧ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಾಷಾಸಾಬ ತಾಂಬೋಳಿ ಅವರು ಎಲ್ಲ ಸದಸ್ಯರಿಗೆ ಸನ್ಮಾನಿಸಿದರು. ನಂತರ ವಿಜೇತ ಅಭ್ಯರ್ಥಿಗಳ ಬೆಂಬಲಿಗರು ಬ್ಯಾಂಕ್‌ ಆವರಣದಲ್ಲಿ ಪರಸ್ಪರ ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು. ಅಧ್ಯಕ್ಷ ಶರಣಪ್ಪ ವಾರದ ಮಾತನಾಡಿ, 54 ವರ್ಷ ಇತಿಹಾಸದ ಬ್ಯಾಂಕಿಗೆ ಪುನಃ ನಮ್ಮ ಪೆನಲ್‌ ಆಯ್ಕೆ ಮಾಡಿದ ಎಲ್ಲ ಸದಸ್ಯರಿಗೆ ಅಭಿನಂದನೆಗಳು. ಬ್ಯಾಂಕಿನ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡುತ್ತೇನೆ ಎಂದರು.

ಆಡಳಿತ ಮಂಡಳಿಯ ಸದಸ್ಯ ಡಾ| ವಿಜಯಕುಮಾರ ವಾರದ ಮಾತನಾಡಿ, ಸದಸ್ಯರು ನಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಹೊಸ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಬ್ಯಾಂಕಿನ ಗ್ರಾಹಕರ ಮತ್ತು ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು.

ನವೀನ ಶಹಾಪುರ, ಡಾ| ಸೋಮೇಶ ಶಹಾಪುರ, ಸಂತೋಷ ಬಮ್ಮಣ್ಣಿ, ಸಂಜೀವ ವಡ್ಡೋಡಗಿ, ಪ್ರಕಾಶ ಕೋರಿ, ಕಿರಣ ಕೋರಿ, ರಾಜೇಂದ್ರ ಕಿಣಗಿ, ರಾಜು ಕಮತಗಿ, ಶರಣು ಶ್ರೀಗಿರಿ, ಸಿದ್ದು ಪಟ್ಟಣಶೆಟ್ಟಿ, ಬೋಜಪ್ಪ ಸಂಗಮ, ಕುಮಾರ ಸಂಗಮ, ಪ್ರಶಾಂತ ಪಟ್ಟಣಶೆಟ್ಟಿ, ಸೈಫನ್‌ ಯಂಕಂಚಿ, ಕಾಳಪ್ಪ ಶಹಾಪುರ, ಸೈಫನ್‌ ಖೇಡ, ಮುಗಲಿ ಬುಡ್ಡಾ, ಮಂದೇವಾಲಿ ಸೇರಿದಂತೆ ನೂರಾರು ಜನರು ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.