ಯುವಕರು ಕೃಷಿ ವಿಮುಖರಾಗಿದ್ದು ದೇಶಕ್ಕೆ ಸಮಸ್ಯೆ: ಬಾಲಗೊಂಡ


Team Udayavani, Aug 28, 2018, 3:24 PM IST

vij-2.jpg

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ದೇಶದ ಯುವ ಸಮೂಹ ಕೃಷಿ ವ್ಯವಸ್ಥೆಯಿಂದ ವಿಮುಖರಾಗುತ್ತಿದ್ದು ಭವಿಷ್ಯದ ಭಾರತಕ್ಕೆ ಸಮಸ್ಯೆ ತಂದೊಡ್ಡಲಿದೆ ಪ್ರಗತಿಪರ ರೈತ ಸಿದ್ದು ಬಾಲಗೊಂಡ ಆತಂಕ ವ್ಯಕ್ತಪಡಿಸಿದರು.

ಕೊಲ್ಹಾರ ತಾಲೂಕು ಕೇಂದ್ರದಲ್ಲಿ ಉಪ್ಪಾಶೆಪ್ಪ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ರೈತ ಜಾಗೃತಿ ಜಾತ್ರೆ ಸಾವಯವ ಕೃಷಿ ಸಮಾರಂಭದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನ ಶೈಲಿಗೆ ಆದ್ಯತೆ ನೀಡುತ್ತಿರುವ ಕಾರಣ ಭಾರತೀಯ ಮೂಲ ಕೃಷಿ ಅಪಾಯಕ್ಕೆ ಸಿಲುಕಿದೆ ಎಂದರು. 

ರೈತ ಜಾಗೃತಿ ಜಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹರ್ಷಗೌಡ ಪಾಟೀಲ, ಸರ್ಕಾರ ಮಾಡುವಂತಹ ಕೃಷಿ ಮೇಳ, ಅರಣ್ಯ ಕೃಷಿ, ಅರಣ್ಯ ಸಂರಕ್ಷಣೆಯಂತಹ ಕಾರ್ಯಕ್ರಮಗಳನ್ನು ರೈತರು ತಮ್ಮ ಸ್ವಂತ ಖರ್ಚಿನಿಂದ ಹಮ್ಮಿಕೊಂಡಿದ್ದು ಸಂತೋಷದಾಯಕ ವಿಷಯ ಎಂದರು.

ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮಾತನಾಡಿ, ಕೃಷಿ ಜಾತ್ರೆಯನ್ನು ಶ್ರಾವಣ ಮಾಸದಲ್ಲಿ ನಡೆಸಿದರೆ ಈ ರೀತಿ ಮಳೆ ಸುರಿಯುವ ಕಾರಣ ರೈತರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಜನವರಿ ತಿಂಗಳಲ್ಲಿ ನಡೆಸಿದರೆ ರೈತರಿಗೆ ಕೃಷಿ ತಜ್ಞರಿಂದ ಅನುಕೂಲ ಮಾಹಿತಿ ಸಿಗುತ್ತದೆ ಎಂದು ಸಲಹೆ ನೀಡಿದರು.

ಜೆಡಿಎಸ್‌ ಧುರೀಣ ಅಪ್ಪುಗೌಡ ಪಾಟೀಲ ಮಾತನಾಡಿ, ಇಂದಿನ ಯುವಕರು ದುಶ್ಚಟಗಳಿಂದ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಅನೇಕ ರೈತರು ಅಧಿಕ ಇಳುವರಿ ಪಡೆಯಲು ಅತಿಯಾದ ರಾಸಾಯನಿಕ ಗೊಬ್ಬರಗಳನ್ನು ಬಳಸಿ ವಿಷಯುಕ್ತ ಆಹಾರವನ್ನು ಬೆಳೆಯುತ್ತಿದ್ದಾರೆ. ಆದ್ದರಿಂದ ರೈತರು ಸಾವಯವ ಕೃಷಿಯತ್ತ ಗಮನ ಹರಿಸಿ ವಿಷಮುಕ್ತ ಬೆಳೆಯನ್ನು ಬೆಳೆಯಬೇಕು
ಎಂದರು.

ಅಖೀಲ ಭಾರತ ಸಾವಯವ ಕೃಷಿ ದೃಢೀಕರಣ ಮತ್ತು ಮಾರುಕಟ್ಟೆ ಸಲಹೆಗಾರ ಯೋಗೇಶ ಅಪ್ಪಯ್ಯಜ್ಜ ಮಾತನಾಡಿ, ರೈತರು ಸಾವಯವ ಕೃಷಿ ಬೆಳೆ ಬೆಳೆದರೆ ಸಾಲದು. ಸಾವಯವ ಬೆಳೆಗಳಿಗೆ ಹೆಚ್ಚಿನ ಬೆಲೆ ಸಿಗಬೇಕಾದರೆ ಸಾವಯವ ದೃಢೀಕರಣ ಅಗತ್ಯ ಎಂದರು.
 
ರೋಹಿಣಿ ಬಯೋಟೆಕ್‌ ಕಂಪನಿ ವ್ಯವಸ್ಥಾಪಕ ಎಂ.ವೈ. ಕಟ್ಟಿ ಮಾತನಾಡಿ, ರೈತರು ಮಣ್ಣನ್ನು ಪರೀಕ್ಷಿಸಿಕೊಳ್ಳಿ, ಆಮಣ್ಣಿನಲ್ಲಿ ಹೆಚ್ಚಿನ ಫಲವತ್ತತೆ ಕಾಯ್ದುಕೊಳ್ಳಲು ರೈತರು ಯಾವ ಬೆಳೆ, ಭೂಮಿಗೆ ಎಷ್ಟೆಷ್ಟು ಪ್ರಮಾಣದಲ್ಲಿ ರಾಸಾಯನಿಕ ಬಳಸಬೇಕು ಎಂದು ತಜ್ಞರ ಸಲಹೆ ಮೇರೆಗೆ ಬಳಸಬೇಕು ಎಂದು ಸಲಹೆ ನೀಡಿದರು; ನಾಗಲದಿನ್ನಿಯ ಸದ್ಗುರು ಸದಾನಂದ ಶಿವಯೋಗಿಗಳ ಆಶ್ರಮ ಮಲ್ಲಿಕಾರ್ಜುನ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಈರಪ್ಪ ಬಾಲಗೊಂಡ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಸ್ತರಣಾಧಿಕಾರಿ ಡಾ| ಆರ್‌.ಬಿ.ಬೆಳ್ಳಿ, ಶಿವಾನಂದ ಮಂಗಾನವರ ಇದ್ದರು.

ಕಾವ್ಯಾ ದೇಸಾಯಿ ಮತ್ತು ಸಂಗಡಿಗರು ರೈತ ಗೀತೆ ಹಾಡಿದರು. ಶಿಕ್ಷಕಿ ಆರ್‌.ಎಸ್‌. ಗಿಡ್ಡಪ್ಪಗೋಳ ನಿರೂಪಿಸಿದರು. ಕೆ.ಎಸ್‌. ಬಾಲಗೊಂಡ ವಂದಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.