ಮಳೆಯಲ್ಲೂ ನಿಲ್ಲದ ಮತ ಬೇಟ


Team Udayavani, Aug 28, 2018, 3:37 PM IST

ray-1.jpg

ಮುದ್ದೇಬಿಹಾಳ: ಕನಿಷ್ಠ 18 ಸ್ಥಾನ ಗೆಲ್ಲುವ ಗುರಿ ಇಟ್ಟು ಬಿಜೆಪಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಸೋಮವಾರವೂ ಬಿರುಸಿನ ಪ್ರಚಾರ ಮುಂದುವರಿಸಿದರು. ಈ ವೇಳೆ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಳೆಯಲ್ಲಿ ನೆನೆದೇ ಬೆಂಬಲಿಗರೊಂದಿಗೆ ಪ್ರಚಾರ ನಡೆಸಿ ಗಮನ ಸೆಳೆದರು.

ಮಹಾಂತೇಶ ನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 4ನೇ ವಾರ್ಡ್‌ ಅಭ್ಯರ್ಥಿ ಬಸವರಾಜ ಮುರಾಳ, ವಾಲ್ಮೀಕಿ ಸರ್ಕಲ್‌ನಿಂದ 5ನೇ ವಾರ್ಡ್‌ ಅಭ್ಯರ್ಥಿ ಹುಲಗಪ್ಪ ನಾಯಕಮಕ್ಕಳ, ರಾಘವೇಂದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 6ನೇ ವಾರ್ಡ್‌ ಅಭ್ಯರ್ಥಿ ಲಕ್ಷ್ಮೀಬಾಯಿ ವಾಲೀಕಾರ, ಯಮನೂರಪ್ಪ ಕಟ್ಟೆಯ ಬಳಿಯಿಂದ 16ನೇ ವಾರ್ಡ್‌ ಅಭ್ಯರ್ಥಿ ಬೀಬಿಜಾನ ಬೀಳಗಿ ಪರ ರೋಡ್‌ಶೋ ನಡೆಸಿ, ಮನೆಮನೆಗೆ ತೆರಳಿ ಕರಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸುವಂತೆ ಮನವಿ ಮಾಡಿದರು. ಸೋಮನಗೌಡ ಬಿರಾದಾರ ಕವಡಿಮಟ್ಟಿ, ಶರಣು ಬೂದಿಹಾಳಮಠ,
ಬಸವರಾಜ ಗುಳಬಾಳ, ಸಂಗಮೇಶ ವಾಲೀಕಾರ, ಮೋಹನ ಹಂಚಾಟೆ, ಸುಭಾಷ್‌ ಬಿದರಕುಂದಿ, ಹನುಮಂತ ನಲವಡೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಜೆಡಿಎಸ್‌ ಪ್ರಚಾರ: ಜೆಡಿಎಸ್‌ ಧುರೀಣೆ ಮಂಗಳಾದೇವಿ ಬಿರಾದಾರ ಸೋಮವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಮತಯಾಚಿಸಿದರು.

ಈ ಹಿಂದಿನ ಪುರಸಭೆ ಆಡಳಿತದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡಿದ್ದರು. ಅದೇ ಲೆಕ್ಕಾಚಾರದಲ್ಲಿ ಈ ಬಾರಿಯೂ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಆಯ್ಕೆಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ. ರಾಜ್ಯದಲ್ಲಿ ನಮ್ಮದೇ ಪಕ್ಷದ ಆಡಳಿತ ಇದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜನಪರ ಆಡಳಿತ ನೀಡುತ್ತಿದ್ದಾರೆ. ಅವರ ಕೈ ಬಲಪಡಿಸಲು, ಪುರಸಭೆಗೆ ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಬಿಜೆಪಿಗೆ ಅಸಾಧ್ಯ. ಜೆಡಿಎಸ್‌ಗೆ ಅಧಿಕಾರ ಕೊಟ್ಟಲ್ಲಿ ಮಾತ್ರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ನಡೆಯಲಿದೆ. ಇದಕ್ಕಾಗಿ ಜೆಡಿಎಸ್‌ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು ಎಂದು ಮಂಗಳಾದೇವಿ ಮನವಿ ಮಾಡಿಕೊಂಡರು.

ಧುರೀಣರಾದ ಶಾಂತಗೌಡ ಬಿರಾದಾರ, ಹಿರಿಯ ನ್ಯಾಯವಾದಿ ಜೆ.ಎ. ಚಿನಿವಾರ, ಅರವಿಂದ ಕಾಶಿನಕುಂಟಿ, ರಮೇಶ ಕಮತ, ರವಿ ಬಡಿಗೇರ, ಲಕ್ಷ್ಮಣ ದಾಸರ, ಬಿ.ಎಚ್‌.ಹಾಲಣ್ಣವರ್‌, ಜೆಡಿಎಸ್‌ ಅಭ್ಯರ್ಥಿ ಹರೀಶ ನಾಟೀಕಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
 
ಕಾಂಗ್ರೆಸ್‌ ಪ್ರಚಾರ: ಕಾಂಗ್ರೆಸ್‌ ಅಭ್ಯರ್ಥಿಗಳು ಕೂಡಾ ತಮ್ಮ ಮುಖಂಡರ ಸಮ್ಮುಖದಲ್ಲಿ ಆಯಾ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ದು ಅಲ್ಲಲ್ಲಿ ಕಂಡು ಬಂತು. ಕೆಲವು ಬಡಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು
ಯಾವುದೇ ನಾಯಕರ ಉಪಸ್ಥಿತಿ ಇಲ್ಲದೆ ಸ್ವತಃ ತಾವೇ, ತಮ್ಮ ಬೆಂಬಲಿಗರೊಂದಿಗೆ ಸ್ವಂತ ಶಕ್ತಿಯ ಬಲದ ಮೇಲೆ ತಿರುಗಾಡಿ ಕರಪತ್ರ ಹಂಚಿ ಮತಯಾಚಿಸುತ್ತಿರುವುದು ಕಂಡುಬಂತು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.