ಸಮಾನತೆಗೆ ಶ್ರಮಿಸಿದ ಶರಣ ಹಡಪದ ಅಪ್ಪಣ್ಣ: ಸ್ವಾಮೀಜಿ


Team Udayavani, Aug 28, 2018, 3:53 PM IST

vij-3.jpg

ಆಲಮೇಲ: ಕಲ್ಯಾಣ ಕ್ರಾಂತಿಗೆ, ಸಮಾನತೆಗೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡ ಮಹಾನ್‌ ಶರಣ ಹಡಪದ ಅಪ್ಪಣ ಎಂದು ಗೋಕಾಕ ತಾಲೂಕಿನ ಕುಂದರ್ಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಹಡಪದ ಅಪ್ಪಣನವರ 884ನೇ ಜಯಂತ್ಯುತ್ಸವ ನಿಮಿತ್ತ ಸೋಮವಾರ ಹಮ್ಮಿಕೊಂಡ ಜನಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಾನತೆ ಸಮಾಜ ನಿರ್ಮಾಣಕ್ಕೆ ಬಸವಣ್ಣವರ ಜೊತೆಯಾಗಿ ಹೋರಾಡಿದ ಮಹಾನ್‌ ಶರಣ ಅಪ್ಪಣನವರು. ಬಸವಣ್ಣನವರ ಸಮಾನಾಂತರ ಶರಣರಲ್ಲಿ ಹಡಪದ ಅಪ್ಪಣನವರು ಒಬ್ಬರು ಎಂದ ಅವರು, ಸಮಾಜದ ಜನರು ಶೈಕ್ಷಣಿಕವಾಗಿ ಮುಂದೆ ಬಂದರೆ ಮಾತ್ರ ಎಲ್ಲ ರಂಗದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.

ಮಕ್ಕಳಿಗೆ ಸಂಸ್ಕಾರ, ನೈತಿಕ ಮೌಲ್ಯ ಮುಖ್ಯವೆಂದು ಅವರು, ತಂದೆ-ತಾಯಿ, ಗುರುವಿನ ಮಾರ್ಗದರ್ಶನದಲ್ಲಿ ನಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ರೈತರ ಒಳಿತನ್ನು ಬಯಸಿದರೆ ನಾವೆಲ್ಲ ನೆಮ್ಮದಿಯಿಂದ ಬಾಳುತ್ತವೆ ಎಂದು ಹೇಳಿದರು. 

ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಜಿ ಮಾತನಾಡಿ, ಮಾಡುವ ಕೆಲಸದಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಇರಬೇಕು. ಹಡಪದ ಅಪ್ಪಣನವರ ಕಾಯಕ ಮೆಚ್ಚಿ ಬಸವಣ್ಣನವರು ಅವರನ್ನು ಆಪ್ತರನ್ನಾಗಿಸಿಕೊಂಡರು. ಎಲ್ಲರೂ ಒಂದಾಗಿ ಶರಣರ ತತ್ವದಲ್ಲಿ ಮುನ್ನಡೆಯುವಂತೆ ಸಲಹೆ ನೀಡಿದರು.

ತಂಗಡಗಿ ಹಡಪದ ಅಪ್ಪಣ್ಣನವರ ಮಹಾಸಂಸ್ಥಾನ ಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ಹಡಪದ ಸಮಾಜ ಎಲ್ಲ ರಂಗದಲ್ಲಿ ಹಿಂದುಳಿದ್ದು ನಾವೆಲ್ಲ ಮುಂದೆ ಬರಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ನಮ್ಮ ಸಮಾಜ ಲಿಂಗಾಯತ ಹಡಪದ ಸಮಾಜವಾಗಿಯೇ ಇರಬೇಕಾದರೆ ಈ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಾಜಿ ಶಾಸಕರ ರಮೇಶ ಭೂಸನೂರ ಮಾತನಾಡಿ, ಸಣ್ಣ ಸಣ್ಣ ಸಮಾಜಗಳು ಸೂಚಿತ ಅನ್ಯಾಯಕ್ಕೆ ಒಳಗಾಗಿರುವ ಸಮಾಜಗಳಲ್ಲಿ ಒಗ್ಗಟ್ಟಾಗಿ ಜಾಗೃತರಾಗುತ್ತಿದ್ದು, ಅವರಿಗೆ ಪ್ರೋತ್ಸಾಹಿಸಬೇಕು. ನನ್ನ ಅವಧಿಯಲ್ಲಿ ಸಮಾಜಕ್ಕೆ ಸಾಕಷ್ಟು ಸಹಾಯ ಮಾಡಿರುವುದಾಗಿ ತಿಳಿಸಿದ ಅವರು, ಕೆಂದ್ರ ಸಚಿವ ರಮೇಶ ಜಿಗಜಿಣಗಿ ತಮ್ಮ ಸಂಸದರ ಅನುದಾನದಲ್ಲಿ 3 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು. 

ಅಶೋಕ ಮನಗೂಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಡಪದ ಸಮಾಜಕ್ಕೆ 10 ಲಕ್ಷ ಅನುದಾನವನ್ನು ಸಚಿವರ ಅನುದಾನದಿಂದ ಕೊಡಿಸುವುದಾಗಿ ಭರವಸೆ ನೀಡಿದರು. ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು,
ಪ್ರಜಾಪಿತ ಬ್ರಹ್ಮಕುಮಾರಿ ರೇಣುಕಾ ಅಕ್ಕನವರು, ಶಿವುಕುಮಾರ ಗುಂದಗಿ, ರಮೇಶ ಬಂಟನೂರ ಮುಂತಾದವರು ಮಾತನಾಡಿದರು. ಬಸವರಾಜ ಧನಶ್ರೀ, ಪಿಎಸ್‌ಐ ಸಿ.ಬಿ. ಚಿಕ್ಕೋಡಿ, ಮಲ್ಲಪ್ಪ ತೋಡಕರ, ದೇವಪ್ಪ ಗುಣಾರಿ, ನಾನಾಗೌಡ ಪಾಟೀಲ, ಡಾ| ಶ್ರೀಶೈಲ ಪಾಟೀಲ, ಮಹಿಬೂಬ ಮಸಳಿ, ಅಶೋಕ ಕೋಳಾರಿ, ಪ್ರಭು ವಾಲೀಕಾರ, ಬಸವರಾಜ ತೆಲ್ಲೂರ, ಮಲ್ಲು ಅಚಲೇರಿ, ಹನುಮಂತ ಹೂಗಾರ, ಶ್ರೀಶೈಲ ಅಗಸರ, ಹಿರಗಪ್ಪ ಕಟ್ಟಿಮನಿ, ಸಮಾಜ ಅಧ್ಯಕ್ಷ ಶಂಕರ ಹಡಪದ, ಕಾರ್ಯದರ್ಶಿ ಸತೀಶ ಹಪಡದ, ತಾಲೂಕಾಧ್ಯಕ್ಷ ಮಹಾಂತೇಶ ಮೇಲಿನಮನಿ, ಸಿಂದಗಿ ಪುರಸಭೆ ಸದಸ್ಯ ಚಂದ್ರಶೇಖರ ಅಮಲಿಹಾಳ, ಶಿವಾನಂದ ಹಡಪದ ಇತರರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.