ಸಮಾನತೆಗೆ ಶ್ರಮಿಸಿದ ಶರಣ ಹಡಪದ ಅಪ್ಪಣ್ಣ: ಸ್ವಾಮೀಜಿ


Team Udayavani, Aug 28, 2018, 3:53 PM IST

vij-3.jpg

ಆಲಮೇಲ: ಕಲ್ಯಾಣ ಕ್ರಾಂತಿಗೆ, ಸಮಾನತೆಗೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡ ಮಹಾನ್‌ ಶರಣ ಹಡಪದ ಅಪ್ಪಣ ಎಂದು ಗೋಕಾಕ ತಾಲೂಕಿನ ಕುಂದರ್ಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಹಡಪದ ಅಪ್ಪಣನವರ 884ನೇ ಜಯಂತ್ಯುತ್ಸವ ನಿಮಿತ್ತ ಸೋಮವಾರ ಹಮ್ಮಿಕೊಂಡ ಜನಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಾನತೆ ಸಮಾಜ ನಿರ್ಮಾಣಕ್ಕೆ ಬಸವಣ್ಣವರ ಜೊತೆಯಾಗಿ ಹೋರಾಡಿದ ಮಹಾನ್‌ ಶರಣ ಅಪ್ಪಣನವರು. ಬಸವಣ್ಣನವರ ಸಮಾನಾಂತರ ಶರಣರಲ್ಲಿ ಹಡಪದ ಅಪ್ಪಣನವರು ಒಬ್ಬರು ಎಂದ ಅವರು, ಸಮಾಜದ ಜನರು ಶೈಕ್ಷಣಿಕವಾಗಿ ಮುಂದೆ ಬಂದರೆ ಮಾತ್ರ ಎಲ್ಲ ರಂಗದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.

ಮಕ್ಕಳಿಗೆ ಸಂಸ್ಕಾರ, ನೈತಿಕ ಮೌಲ್ಯ ಮುಖ್ಯವೆಂದು ಅವರು, ತಂದೆ-ತಾಯಿ, ಗುರುವಿನ ಮಾರ್ಗದರ್ಶನದಲ್ಲಿ ನಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ರೈತರ ಒಳಿತನ್ನು ಬಯಸಿದರೆ ನಾವೆಲ್ಲ ನೆಮ್ಮದಿಯಿಂದ ಬಾಳುತ್ತವೆ ಎಂದು ಹೇಳಿದರು. 

ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಜಿ ಮಾತನಾಡಿ, ಮಾಡುವ ಕೆಲಸದಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಇರಬೇಕು. ಹಡಪದ ಅಪ್ಪಣನವರ ಕಾಯಕ ಮೆಚ್ಚಿ ಬಸವಣ್ಣನವರು ಅವರನ್ನು ಆಪ್ತರನ್ನಾಗಿಸಿಕೊಂಡರು. ಎಲ್ಲರೂ ಒಂದಾಗಿ ಶರಣರ ತತ್ವದಲ್ಲಿ ಮುನ್ನಡೆಯುವಂತೆ ಸಲಹೆ ನೀಡಿದರು.

ತಂಗಡಗಿ ಹಡಪದ ಅಪ್ಪಣ್ಣನವರ ಮಹಾಸಂಸ್ಥಾನ ಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ಹಡಪದ ಸಮಾಜ ಎಲ್ಲ ರಂಗದಲ್ಲಿ ಹಿಂದುಳಿದ್ದು ನಾವೆಲ್ಲ ಮುಂದೆ ಬರಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ನಮ್ಮ ಸಮಾಜ ಲಿಂಗಾಯತ ಹಡಪದ ಸಮಾಜವಾಗಿಯೇ ಇರಬೇಕಾದರೆ ಈ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಾಜಿ ಶಾಸಕರ ರಮೇಶ ಭೂಸನೂರ ಮಾತನಾಡಿ, ಸಣ್ಣ ಸಣ್ಣ ಸಮಾಜಗಳು ಸೂಚಿತ ಅನ್ಯಾಯಕ್ಕೆ ಒಳಗಾಗಿರುವ ಸಮಾಜಗಳಲ್ಲಿ ಒಗ್ಗಟ್ಟಾಗಿ ಜಾಗೃತರಾಗುತ್ತಿದ್ದು, ಅವರಿಗೆ ಪ್ರೋತ್ಸಾಹಿಸಬೇಕು. ನನ್ನ ಅವಧಿಯಲ್ಲಿ ಸಮಾಜಕ್ಕೆ ಸಾಕಷ್ಟು ಸಹಾಯ ಮಾಡಿರುವುದಾಗಿ ತಿಳಿಸಿದ ಅವರು, ಕೆಂದ್ರ ಸಚಿವ ರಮೇಶ ಜಿಗಜಿಣಗಿ ತಮ್ಮ ಸಂಸದರ ಅನುದಾನದಲ್ಲಿ 3 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು. 

ಅಶೋಕ ಮನಗೂಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಡಪದ ಸಮಾಜಕ್ಕೆ 10 ಲಕ್ಷ ಅನುದಾನವನ್ನು ಸಚಿವರ ಅನುದಾನದಿಂದ ಕೊಡಿಸುವುದಾಗಿ ಭರವಸೆ ನೀಡಿದರು. ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು,
ಪ್ರಜಾಪಿತ ಬ್ರಹ್ಮಕುಮಾರಿ ರೇಣುಕಾ ಅಕ್ಕನವರು, ಶಿವುಕುಮಾರ ಗುಂದಗಿ, ರಮೇಶ ಬಂಟನೂರ ಮುಂತಾದವರು ಮಾತನಾಡಿದರು. ಬಸವರಾಜ ಧನಶ್ರೀ, ಪಿಎಸ್‌ಐ ಸಿ.ಬಿ. ಚಿಕ್ಕೋಡಿ, ಮಲ್ಲಪ್ಪ ತೋಡಕರ, ದೇವಪ್ಪ ಗುಣಾರಿ, ನಾನಾಗೌಡ ಪಾಟೀಲ, ಡಾ| ಶ್ರೀಶೈಲ ಪಾಟೀಲ, ಮಹಿಬೂಬ ಮಸಳಿ, ಅಶೋಕ ಕೋಳಾರಿ, ಪ್ರಭು ವಾಲೀಕಾರ, ಬಸವರಾಜ ತೆಲ್ಲೂರ, ಮಲ್ಲು ಅಚಲೇರಿ, ಹನುಮಂತ ಹೂಗಾರ, ಶ್ರೀಶೈಲ ಅಗಸರ, ಹಿರಗಪ್ಪ ಕಟ್ಟಿಮನಿ, ಸಮಾಜ ಅಧ್ಯಕ್ಷ ಶಂಕರ ಹಡಪದ, ಕಾರ್ಯದರ್ಶಿ ಸತೀಶ ಹಪಡದ, ತಾಲೂಕಾಧ್ಯಕ್ಷ ಮಹಾಂತೇಶ ಮೇಲಿನಮನಿ, ಸಿಂದಗಿ ಪುರಸಭೆ ಸದಸ್ಯ ಚಂದ್ರಶೇಖರ ಅಮಲಿಹಾಳ, ಶಿವಾನಂದ ಹಡಪದ ಇತರರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.