ಇಂದು ಮುದ್ದೇಬಿಹಾಳ ಪುರಸಭೆಗೆ ಮತದಾನ


Team Udayavani, Aug 31, 2018, 2:25 PM IST

vij-1.jpg

ಮುದ್ದೇಬಿಹಾಳ: ಇಲ್ಲಿನ ಪುರಸಭೆಯ 22 ವಾರ್ಡ್‌ಗಳಿಗೆ ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಒಟ್ಟು 24 ಮತಗಟ್ಟೆಗಳನ್ನು ರಚಿಸಲಾಗಿದೆ. ಗುರುವಾರ ಮಸ್ಟ್‌ರಿಂಗ್‌ ಕೇಂದ್ರ ಎಂಜಿವಿಸಿ ಕಾಲೇಜಿನಿಂದ ಮತದಾನ ಸಿಬ್ಬಂದಿ ಸಾಮಗ್ರಿ ಪಡೆದುಕೊಂಡು ತಮಗೆ ನಿಗದಿಪಡಿಸಿದ ಮತಗಟ್ಟೆಗಳಿಗೆ
ತೆರಳಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ.

12,397 ಪುರುಷ, 12,336 ಮಹಿಳೆ, 10 ಇತರರು ಸೇರಿ ಒಟ್ಟು 24,743 ಮತದಾರರು ಮತ ಚಲಾಯಿಸುವ ಹಕ್ಕು ಪಡೆದುಕೊಂಡಿದ್ದಾರೆ. 22 ವಾರ್ಡ್‌ ಪೈಕಿ 15 ವಾರ್ಡ್‌ಗಳನ್ನು ಸಾಧಾರಣ, 11, 13, 14, 20 ಸೇರಿ 4 ವಾರ್ಡ್‌ಗಳನ್ನು
ಸೂಕ್ಷ್ಮ ಹಾಗೂ 5, 10, 21 (2 ಮತಗಟ್ಟೆಗಳು), 22 ಸೇರಿ 5 ವಾರ್ಡ್‌ಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.
ಇಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮತದಾನ ಕರ್ತವ್ಯ ನಿರ್ವಹಿಸಲು 104 ಮತದಾನ ಸಿಬ್ಬಂದಿ ನಿಯೋಜಿಸಲಾಗಿದೆ. ಮತಗಟ್ಟೆಗಳಿಗೆ ಭದ್ರತೆ ಒದಗಿಸಲು
ಮತ್ತು ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಒಬ್ಬ ಸಿಪಿಐ, 5 ಪಿಎಸೈ, 13 ಎಸೈ, 26 ಹೆಡ್‌ಕಾನ್ಸಟೇಬಲ್‌, 48 ಕಾನ್ಸಟೇಬಲ್‌, 3 ಡಿಎಆರ್‌ ಹಾಗೂ 1 ಐಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಮತದಾನ ಮುಗಿದ ಮೇಲೆ ಎಂಜಿವಿಸಿ ಕಾಲೇಜಿನಲ್ಲೇ ಡಿಮಸ್ಟರಿಂಗ್‌ ಕೇಂದ್ರ ಆರಂಭಿಸಿದ್ದು, ಇಲ್ಲೇ ಮತದಾನ ಸಾಮಗ್ರಿ ಸ್ವೀಕರಿಸುವ ಮತ್ತು ಮತಯಂತ್ರಗಳನ್ನು ಸ್ಟ್ರಾಂಗ್‌ ರೂಂನಲ್ಲಿ ಭದ್ರಪಡಿಸಲು ಕ್ರಮ ಕೈಕೊಳ್ಳಲಾಗಿದೆ. ಮತದಾನ ಸಾಮಗ್ರಿ ಸಾಗಿಸುವ ವೇಳೆ ಚುನಾವಣಾ ವೀಕ್ಷಕರೂ ಆಗಿರುವ ಆಲಮಟ್ಟಿ ಕೆಬಿಜೆಎನ್ನೆಲ್‌ ನ ವಿಶೇಷ ಭೂಸ್ವಾಧೀನಾಧಿ ಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ಪ್ರೊಬೇಶನರಿ ಗ್ರೇಡ್‌ -2 ತಹಶೀಲ್ದಾರ್‌ ಡಾ.ಎಚ್‌.ಎಸ್‌.ಸಜ್ಜನ, ತಾಳಿಕೋಟೆ ತಹಶೀಲ್ದಾರ್‌ ಸುಭಾಶ ಅರಕೇರಿ, ಚುನಾವಣಾಧಿ ಕಾರಿಗಳು, ಸೆಕ್ಟರ್‌ ಅಧಿಕಾರಿಗಳು, ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಇದ್ದರು.

ಹಣಾಹಣಿ ತೀವ್ರ: ಅವಿರೋಧ ಆಯ್ಕೆಗೊಂಡಿರುವ 18ನೇ ವಾರ್ಡ್‌ ಹೊರತುಪಡಿಸಿ ಉಳಿದ 22 ವಾರ್ಡ್‌ಗಳಲ್ಲಿ ಬಿಜೆಪಿಯ 20, ಕಾಂಗ್ರೆಸ್‌ನ 19, ಜೆಡಿಎಸ್‌ನ 15 ಹಾಗೂ ಪಕ್ಷೇತರರು 21 ಸೇರಿ ಒಟ್ಟು 75 ಅಭ್ಯರ್ಥಿಗಳ ಭವಿಷ್ಯ
ಮತಯಂತ್ರದಲ್ಲಿ ಭದ್ರಗೊಳ್ಳಲಿದೆ. 2, 8, 14ನೇ ವಾರ್ಡನಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ, 17ನೇ ವಾರ್ಡ್‌ನಲ್ಲಿ
ಬಿಜೆಪಿ ಪಕ್ಷೇತರ ನಡುವೆ ನೇರ ಹಣಾಹಣಿ ಇದೆ. 3, 7, 13, 15, 23ನೇ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ 4,
22ನೇ ವಾರ್ಡ್‌ನಲ್ಲಿ ಬಿಜೆಪಿ, ಜೆಡಿಎಸ್‌, ಪಕ್ಷೇತರ ಮತ್ತು 5, 6, 19ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ, ಪಕ್ಷೇತರರ
ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇನ್ನುಳಿದ 1, 9, 10, 11, 12, 16, 20, 21ನೇ ವಾರ್ಡ್‌ಗಳಲ್ಲಿ 3ಕ್ಕಿಂತ ಹೆಚ್ಚು
ಅಭ್ಯರ್ಥಿಗಳಿದ್ದು ಬಹುಮುಖ ಸ್ಪರ್ಧೆ ಕಂಡು ಬಂದಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.