ಪುನರ್ವಸತಿಗೆ ಆಗ್ರಹಿಸಿ ಸಂತ್ರಸ್ತರ ಅನಿರ್ದಿಷ್ಟ ಧರಣಿ


Team Udayavani, Aug 31, 2018, 2:59 PM IST

vij-2.jpg

ವಿಜಯಪುರ: ಸಿಂದಗಿ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ನೆರೆ ಸಂತ್ರಸ್ತರಾದ ಜನರು ಪುನರ್ವಸತಿ ಹಕ್ಕುಪತ್ರ ವಿತರಣೆಯಲ್ಲಿ ಅಕ್ರಮ ಸರಿಪಡಿಸಲು ಆಗ್ರಹಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

2009 ರಲ್ಲಿ ಅತಿವೃಷ್ಟಿಯಿಂದಾಗಿ ಸಿಂದಗಿ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಮುಳುಗಡೆ ಆಗಿತ್ತು. ಪರಿಣಾಮ ಇಡೀ
ಗ್ರಾಮವನ್ನೇ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಪುನರ್ವಸತಿ ಕೇಂದ್ರಲ್ಲಿ ನೈಜ ಅರ್ಹ ಸಂತ್ರಸ್ತ
ಫಲಾನುಭವಿಗಳಿಗೆ ನೀಡುವ ಹಕ್ಕುಪತ್ರಗಳನ್ನು ಅಕ್ರಮವಾಗಿ ಅನ್ಯರಿಗೆ ನೀಡಲಾಗಿದೆ. ಈ ಬಗ್ಗೆ ಹಲವು ಬಾರಿ ಅಗತ್ಯ
ದಾಖಲೆ ಸಮೇತ ದೂರು ನೀಡಿದರೂ ಆಡಳಿತಗಾರರು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಕಳೆದೊಂದು ದಶಕದಿಂದ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಎಲ್ಲರಿಗೂ ಮನವಿ ಮಾಡಿಕೊಂಡು ಬಂದು ತನಿಖೆ ನಡೆಸಿ, ಅಕ್ರಮ ಎಸಗಿದವ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ. ಸಂತ್ರಸ್ತರಿಗೆ ಪರಿಹಾರ ಸೌಲಭ್ಯಗಳನ್ನೂ ನೀಡಿಲ್ಲ. ಕೂಡಲೇ ಇಡೀ ಅಕ್ರಮ ಪ್ರಕರಣದಲ್ಲಿ ಬಾಗಿಯಾಗಿರುವ ಎಲ್ಲರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಕ್ರಮವಾಗಿ ಹಂಚಿರುವ ಹಕ್ಕುಪತ್ರ ರದ್ದುಪಡಿಸಿ ಅರ್ಹರಿಗೆ ಹಕ್ಕುಪತ್ರ ವಿತರಿಸಬೇಕು.

ಅಕ್ರಮವಾಗಿ ಪುನರ್ವಸತಿ ಕೇಂದ್ರದಲ್ಲಿ ವಾಸವಿರುವ ಜನರನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಪುನರ್ವಸತಿ ಕೇಂದ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲ ಅಕ್ರಮ ಕಟ್ಟಡಗಳನ್ನು
ತೆರವುಗೊಳಿಸಬೇಕು. ಸಂತ್ರಸ್ತರಿಗೆ ಹಕ್ಕುಪತ್ರ, ವಿವಿಧ ವಸತಿ ಯೋಜನೆಗಳಲ್ಲಿ ಮನೆ ನಿರ್ಮಿಸಿಕೊಡಬೇಕು. ಅಂಗನವಾಡಿ, ಪ್ರಾಥಮಿಕ ಶಾಲೆ, ಗ್ರಂಥಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಸಲೀಂ ಅಲ್ದಿ, ರೋಹನ ಐನಾಪುರ, ಶಬ್ಬೀರ ಪಟೇಲ ಬಿರಾದಾರ, ನಜೀರಅಹ್ಮದ ಪಡೇಕನೂರ, ಅಲ್ತಾಫ್‌ ಮರ್ತೂರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಪ್ರಸನ್ನ ಅವರಿಗೆ ಮನವಿ ಸಲ್ಲಿಸಿದರು.

ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಚನ್ನಮ್ಮ ಮಲ್ಲಪ್ಪ ನಾವಿ, ಕಮಾಲಮಾ ರಜಾಕಸಾಬ ಮುಲ್ಲಾ, ಕಬೀರ ಮುರ್ತುಜಸಾಬ ಮುಜಾವರ, ಚಾಂದಸಾಬ ಮದಾರಸಾಬ ಅಲ್ದಿ, ಅಶೋಕ ಮಹಾದೇವಪ್ಪ ವಾಲೀಕಾರ, ಮೌಲಾಸಾಹೇಬ ಸಾಹೇಬಲಾಲ ಆಗಲೂರ, ರಹಿಮಾನಸಾಬ ನಬಿಸಾಬ ಮುಲ್ಲಾ, ಜೈನಾಬಿ ಹುಸೇನಸಾಬ ಮುಲ್ಲಾ, ಹುಸೇನಬಿ ಲಾಲಸಾಬ ಅವಟಿ, ಜಮಾಲಮಾ ಸುಲ್ತಾನಮಾ ನದಾಫ್‌, ರಂಜಾನಬಿ ಸಾಹೇಬಲಾಲ ಆಲಗೂರ, ಜುಬೇದಾ ದಾವಲಸಾಬ ಅವಟಿ, ದವಲತಖಾನ ಗಿರಗಾಂವ, ಕುತುಬುದ್ದೀನ್‌ ಸೈಫನಸಾಬ ಮುಲ್ಲಾ, ದೌಲ ಸಾಬ ಜೈನಾಬಿ ಮುಲ್ಲಾ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.