ಮೌಲ್ಯಾಧಾರಿತ ರಾಜಕೀಯ ಮುಕುಟ ಹೆಗಡೆ


Team Udayavani, Aug 31, 2018, 3:30 PM IST

vij-5.jpg

ವಿಜಯಪುರ: ಇಂದಿನ ಕಲುಷಿತ ರಾಜಕಾರಣಿದ ಮಧ್ಯೆಯೂ ಪರಿಶುದ್ಧ ರಾಜಕೀಯ ಜೀವನ ನಡೆಸಿದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು, ದೇಶಕ್ಕೆ ಮಾದರಿಯಾದ ಸಾರ್ವಕಾಲಿಕ ಅತ್ಯುತ್ತಮ ರಾಜ್ಯಾಡಳಿತ ನಡೆಸಿ ಮೌಲ್ಯಾಧಾರಿತ ರಾಜಕೀಯ ಎಂಬ ಹೊಸ ಶಕೆಯನ್ನೇ ಆರಂಭಿಸಿದ್ದ ರಾಜಕೀಯ ಆದರ್ಶ ಎಂದು ಎ.ಬಿ. ಜತ್ತಿ ಪ.ಪೂ ಕಾಲೇಜಿನ ಉಪನ್ಯಾಸಕ ಅಮರೇಶ ಸಾಲಕ್ಕಿ ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ 93ನೇ ಜನ್ಮದಿನ ಅಂಗವಾಗಿ ನಗರದ ಕೆ.ಎಚ್‌.ಬಿ ಕಾಲೋನಿಯಲ್ಲಿ ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಹಮ್ಮಿಕೊಂಡಿದ್ದ ಹೆಗಡೆ ಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ದೇಶ ಕಂಡ ಅಪರೂಪದ ರಾಜಕೀಯ ನಾಯಕರಾಗಿದ್ದ ರಾಮಕೃಷ್ಣ ಹೆಗಡೆ ಅವರ ವ್ಯಕ್ತಿತ್ವ ಮೇರುಗಿರಿಯಾಗಿದ್ದರೂ ಅಧಿಕಾರದ ಸಂದರ್ಭದಲ್ಲಿ ಹಲವು ಏಳು-ಬೀಳು ಕಂಡವರು. ರಾಜಕೀಯ ನೈತಿಕ ಮೌಲ್ಯಗಳಿಗೆ
ಮತ್ತೂಂದು ನಿದರ್ಶನ ಎಂಬಂತಿದ್ದ ಅವರು, ದೂರದೃಷ್ಟಿತ್ವದ ಮಹತ್ವಾಕಾಂಕ್ಷೆಯ ನಾಯಕರಾಗಿದ್ದರು ಎಂದರು.

ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಪ್ರಧಾನ ಕಾರ್ಯದರ್ಶಿ ಸಂತೋಕುಮಾರ ನಿಗಡಿ ಮಾತನಾಡಿ, ಅಧಿ ಕಾರಕ್ಕಾಗಿ ಜೋತುಬಿದ್ದು ಕೊರಗಿದ ರಾಮಕೃಷ್ಣ ಹೆಗಡೆ ಅವರು, ಅಧಿಕಾರ ಸಿಕ್ಕಾಗ ಜನಪರ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದವರು. ಸ್ಥಳೀಯ ಆಡಳಿತ ಬಲವರ್ಧನೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿ ರಾಜ್ಯದಲ್ಲಿ ಪಂಚಾಯತ ರಾಜ್ಯ ವ್ಯವಸ್ಥೆ ಜಾರಿಗೆ ತಂದರು ಎಂದರು.

ಮಹಾಂತೇಶ ಅಲೆಗಾವಿ ಮಾತನಾಡಿ, ಭಾರತ ಕಂಡ ಚತುರ ರಾಜಕೀಯ ನಾಯಕ ಎನಿಸಿಕೊಂಡಿದ್ದ ಹೆಗಡೆ ಅವರ ವ್ಯಕ್ತಿತ್ವ ತೀರಾ ವಿಭಿನ್ನವಾಗಿತ್ತು. ಅದ್ಭುತ ವಾಕಚಾತುರ್ಯದ ವಾಗ್ಮಿಯಾಗಿದ್ದರು. ಆಡು ಪ್ರತಿ ಮಾತಿನಲ್ಲೂ ಹೊಣೆಗಾರಿಕೆ ಇರುತ್ತಿತ್ತು. ಕರ್ನಾಟಕದ ಭವಿಷ್ಯ ಅಡಗಿರುತ್ತಿತ್ತು. ಭವಿಷ್ಯಕ್ಕೆ ದೊಡ್ಡ ಮಟ್ಟದ ರಾಜಕೀಯ ನಾಯಕರ ಕೊಡುಗೆ ನೀಡುವ ಉದ್ಧಾತ್ತ ಧ್ಯೇಯದೊಂದಿಗೆ ರಾಜಕೀಯ ನಡೆಸಿದರು ಎಂದರು. 

ಪಿ.ವಿ.ಕುಲಕರ್ಣಿ, ಮಾರುತಿ ಹುಲ್ಲನ್ನವರ, ಅಮೋಘ ಗವಳಿ, ಬಸವರಾಜ ಜುಮನಗೋಳ, ಸಚಿನ ಒಳಸಂಗ, ಮುತ್ತು ಅಥರ್ಗಾ, ಶಿವಾನಂದ ಕಟಾಯಿ, ಅಶೋಕ ಅಂಬಾಜಿ ಇತರರು ಹಾಜರಿದ್ದರು. ರವಿ ಕುರ್ಲೆ ಸ್ವಾಗತಿಸಿದರು.
ಸತೀಶ ಆಹೇರಿ ನಿರೂಪಿಸಿದರು. ರುದ್ರೇಶ ಜತ್ತಿ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.