ಮೌಲ್ಯಾಧಾರಿತ ರಾಜಕೀಯ ಮುಕುಟ ಹೆಗಡೆ


Team Udayavani, Aug 31, 2018, 3:30 PM IST

vij-5.jpg

ವಿಜಯಪುರ: ಇಂದಿನ ಕಲುಷಿತ ರಾಜಕಾರಣಿದ ಮಧ್ಯೆಯೂ ಪರಿಶುದ್ಧ ರಾಜಕೀಯ ಜೀವನ ನಡೆಸಿದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು, ದೇಶಕ್ಕೆ ಮಾದರಿಯಾದ ಸಾರ್ವಕಾಲಿಕ ಅತ್ಯುತ್ತಮ ರಾಜ್ಯಾಡಳಿತ ನಡೆಸಿ ಮೌಲ್ಯಾಧಾರಿತ ರಾಜಕೀಯ ಎಂಬ ಹೊಸ ಶಕೆಯನ್ನೇ ಆರಂಭಿಸಿದ್ದ ರಾಜಕೀಯ ಆದರ್ಶ ಎಂದು ಎ.ಬಿ. ಜತ್ತಿ ಪ.ಪೂ ಕಾಲೇಜಿನ ಉಪನ್ಯಾಸಕ ಅಮರೇಶ ಸಾಲಕ್ಕಿ ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ 93ನೇ ಜನ್ಮದಿನ ಅಂಗವಾಗಿ ನಗರದ ಕೆ.ಎಚ್‌.ಬಿ ಕಾಲೋನಿಯಲ್ಲಿ ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಹಮ್ಮಿಕೊಂಡಿದ್ದ ಹೆಗಡೆ ಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ದೇಶ ಕಂಡ ಅಪರೂಪದ ರಾಜಕೀಯ ನಾಯಕರಾಗಿದ್ದ ರಾಮಕೃಷ್ಣ ಹೆಗಡೆ ಅವರ ವ್ಯಕ್ತಿತ್ವ ಮೇರುಗಿರಿಯಾಗಿದ್ದರೂ ಅಧಿಕಾರದ ಸಂದರ್ಭದಲ್ಲಿ ಹಲವು ಏಳು-ಬೀಳು ಕಂಡವರು. ರಾಜಕೀಯ ನೈತಿಕ ಮೌಲ್ಯಗಳಿಗೆ
ಮತ್ತೂಂದು ನಿದರ್ಶನ ಎಂಬಂತಿದ್ದ ಅವರು, ದೂರದೃಷ್ಟಿತ್ವದ ಮಹತ್ವಾಕಾಂಕ್ಷೆಯ ನಾಯಕರಾಗಿದ್ದರು ಎಂದರು.

ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಪ್ರಧಾನ ಕಾರ್ಯದರ್ಶಿ ಸಂತೋಕುಮಾರ ನಿಗಡಿ ಮಾತನಾಡಿ, ಅಧಿ ಕಾರಕ್ಕಾಗಿ ಜೋತುಬಿದ್ದು ಕೊರಗಿದ ರಾಮಕೃಷ್ಣ ಹೆಗಡೆ ಅವರು, ಅಧಿಕಾರ ಸಿಕ್ಕಾಗ ಜನಪರ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದವರು. ಸ್ಥಳೀಯ ಆಡಳಿತ ಬಲವರ್ಧನೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿ ರಾಜ್ಯದಲ್ಲಿ ಪಂಚಾಯತ ರಾಜ್ಯ ವ್ಯವಸ್ಥೆ ಜಾರಿಗೆ ತಂದರು ಎಂದರು.

ಮಹಾಂತೇಶ ಅಲೆಗಾವಿ ಮಾತನಾಡಿ, ಭಾರತ ಕಂಡ ಚತುರ ರಾಜಕೀಯ ನಾಯಕ ಎನಿಸಿಕೊಂಡಿದ್ದ ಹೆಗಡೆ ಅವರ ವ್ಯಕ್ತಿತ್ವ ತೀರಾ ವಿಭಿನ್ನವಾಗಿತ್ತು. ಅದ್ಭುತ ವಾಕಚಾತುರ್ಯದ ವಾಗ್ಮಿಯಾಗಿದ್ದರು. ಆಡು ಪ್ರತಿ ಮಾತಿನಲ್ಲೂ ಹೊಣೆಗಾರಿಕೆ ಇರುತ್ತಿತ್ತು. ಕರ್ನಾಟಕದ ಭವಿಷ್ಯ ಅಡಗಿರುತ್ತಿತ್ತು. ಭವಿಷ್ಯಕ್ಕೆ ದೊಡ್ಡ ಮಟ್ಟದ ರಾಜಕೀಯ ನಾಯಕರ ಕೊಡುಗೆ ನೀಡುವ ಉದ್ಧಾತ್ತ ಧ್ಯೇಯದೊಂದಿಗೆ ರಾಜಕೀಯ ನಡೆಸಿದರು ಎಂದರು. 

ಪಿ.ವಿ.ಕುಲಕರ್ಣಿ, ಮಾರುತಿ ಹುಲ್ಲನ್ನವರ, ಅಮೋಘ ಗವಳಿ, ಬಸವರಾಜ ಜುಮನಗೋಳ, ಸಚಿನ ಒಳಸಂಗ, ಮುತ್ತು ಅಥರ್ಗಾ, ಶಿವಾನಂದ ಕಟಾಯಿ, ಅಶೋಕ ಅಂಬಾಜಿ ಇತರರು ಹಾಜರಿದ್ದರು. ರವಿ ಕುರ್ಲೆ ಸ್ವಾಗತಿಸಿದರು.
ಸತೀಶ ಆಹೇರಿ ನಿರೂಪಿಸಿದರು. ರುದ್ರೇಶ ಜತ್ತಿ ವಂದಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.