ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ


Team Udayavani, Sep 1, 2018, 10:58 AM IST

vij-1.jpg

ವಿಜಯಪುರ: ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಪ್ರಮುಖ ಬಾಳು ಜೇವೂರ, ವಿಜಯಪುರ ಜಿಲ್ಲೆಯ ರೈತರು ಪ್ರತಿವರ್ಷ ಒಂದಿಲ್ಲೊಂದು ಬರದಲ್ಲಿ ಬೆಂದು ಬಳಲುತ್ತಿದ್ದಾರೆ.

ಒಂದು ವರ್ಷ ಅನಾವೃಷ್ಟಿ; ಇನ್ನೊಂದು ವರ್ಷ ಅತಿವೃಷ್ಟಿಯಿಂದ ರೈತರು ಕಂಗಾಲಾಗುತ್ತಿದ್ದಾರೆ. ಈ ವರ್ಷ
ಮುಂಗಾರು ಅಲ್ಪಸ್ವಲ್ಪ ಮಳೆಯಾದ ನಂತರ ರೈತರು ಹೆಸರು, ತೊಗರಿ ಇನ್ನಿತರ ಬೀಜ ಬಿತ್ತನೆ ಮಾಡಿದರು. ಆದರೆ
ಬಹುತೇಕ ಬೀಜ ಮೊಳಕೆಯೊಡೆಯಲು ಸಾಧ್ಯವಾಗಿಲ್ಲ. ಆದರೆ ಕೆಲವೆಡೆ ಮೊಳಕೆಯೊಡೆದ ಬೆಳೆ ಇಂದು ಕಮರುವ ಸ್ಥಿತಿಯಲ್ಲಿದ್ದು, ಈ ಹಂತದಲ್ಲಿ ಮಳೆಯಾಗದೆ ಬೆಳೆಹಾನಿಯಾಗಿದೆ ಎಂದರು.

ಆದರೆ ರೈತರಿಗೆ ಇದುವರೆಗೆ ಯಾವುದೇ ಸಹಾಯ, ಸಹಕಾರ, ಪರಿಹಾರ ಒದಗಿಸದಿರುವುದು ರೈತ ಸಮುದಾಯಕ್ಕೆ ಆಕ್ರೋಶವನ್ನುಂಟು ಮಾಡಿದೆ. ನೀರಿನ ಅಭಾವದಿಂದ ದಾಳಿಂಬೆ, ನಿಂಬೆ, ಬಾರೆಹಣ್ಣು ಹಾನಿಯಾಗಿವೆ. ಇವೆಲ್ಲ ಸಮಸ್ಯೆಗಳಿಂದ ರೈತ ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾನೆ ಎಂದು ಕಳವಳ ವ್ಯಕ್ತಪಡಿಸಿದರು.

ಗ್ರಾಮಗಳಲ್ಲಿ ನೀರಿನ ಅಂತರ್ಜಲ ಬತ್ತಿ ಹೋಗಿ ಬಾವಿ, ಬೋರ್‌ ವೆಲ್‌ಗ‌ಳಲ್ಲಿ ನೀರಿಲ್ಲದಂತಾಗುತ್ತಿವೆ. ಮುಂದಿನ ದಿನಗಳಲ್ಲಿ ಹಲವಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತದೆ. ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ಎದುರಾಗುತ್ತದೆ. ಅದಕ್ಕಾಗಿ ಸರಕಾರ ಈಗಲೇ ಎಚ್ಚೆತ್ತು ಎಲ್ಲ ತಯಾರಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರೈತರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಮುಂಗಾರು ಬರಗಾಲವೆಂದು ಘೋಷಿಸಿ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು, ಉದ್ಯೋಗ ಖಾತ್ರಿ
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿಪಡಿಸುವುದು, ರೈತರ ಆತ್ಮಹತ್ಯೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು, ಪಡಿತರ ಅಂಗಡಿಗಳಲ್ಲಿ ಜೀವನಾವಶ್ಯಕತೆಗೆ ಅನುಗುಣವಾಗಿ ಎಲ್ಲ ರೀತಿಯ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸಮಪರ್ಕವಾಗಿ ಪೂರೈಸುವುದು, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ನಿಂಬೆ ಇತ್ಯಾದಿ ಬೆಳೆ ಬದುಕಿಸಲು ಟ್ಯಾಂಕರ್‌ ಮೂಲಕ ನೀರು ಹಾಯಿಸುವ ರೈತರಿಗೆ ಆರ್ಥಿಕ ಸಹಾಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಸಂಘಟನೆ ಪ್ರಮುಖ ಭಿ. ಭಗವಾನರೆಡ್ಡಿ ಮಾತನಾಡಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.