ಕೆರೆಗಳಿಗೆ ನೀರು ತುಂಬಿಸಲು ಮನವಿ


Team Udayavani, Sep 1, 2018, 11:05 AM IST

vij-2.jpg

ಆಲಮಟ್ಟಿ: ಚಿಮ್ಮಲಗಿ ಹಾಗೂ ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ದೇವರಹಿಪ್ಪರಗಿ ತಾಲೂಕಿಗೊಳಪಟ್ಟಿರುವ ಎಲ್ಲ ಕೆರೆಗಳನ್ನು ಕಾಲುವೆಗಳ ಮೂಲಕ ತುಂಬಿಸಬೇಕೆಂದು ಒತ್ತಾಯಿಸಿ ದೇವರಹಿಪ್ಪರಗಿ ತಾಲೂಕು ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಕೆಬಿಜೆಎನ್‌ಎಲ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶುಕ್ರವಾರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ರೈತರ ಮುಖಂಡರು ಸ್ಥಳೀಯ ಕೃಷ್ಣಾಭಾಗ್ಯಜಲನಿಗಮದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಲಕ್ಷಾಂತರ ಎಕರೆ ಜಮೀನುಗಳನ್ನು ಕಳೆದುಕೊಂಡು ಲಕ್ಷಾಂತರ ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಆದರೆ ಇದೇ ಜಿಲ್ಲೆಯ ದೇವರಹಿಪ್ಪರಗಿ ಭಾಗದಲ್ಲಿನ ವಿವಿಧ ಕೆರೆಗಳನ್ನು, ಚಿಮ್ಮಲಗಿ ಏತ ನೀರಾವರಿ ಹಾಗೂ ಮುಳವಾಡ ಏತ ನೀರಾವರಿಯ ಮುಖ್ಯ ಕಾಲುವೆಯ ಮೂಲಕ ದೇವರಹಿಪ್ಪರಗಿ ಪಟ್ಟಣ ಹಾಗೂ ತಾಲೂಕಿನ ದೇವೂರ, ಮಣೂರ, ಜಾಲವಾದ, ಇಬ್ರಾಹಿಂಪುರ, ಬೊಮ್ಮನಜೋಗಿ, ಕೊಕಟನೂರ, ಕನ್ನೊಳ್ಳಿ, ಪಡಗಾನೂರ, ಇಂಗಳಗಿ, ಹರನಾಳ, ನಿವಾಳಖೇಡ, ಮುಳಸಾವಳಗಿ, ಕಡ್ಲೆವಾಡ, ಚಿಕ್ಕರೂಗಿ ಸೇರಿದಂತೆ ಸುಮಾರು 50ಕ್ಕೂ ಅಧಿಕ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸಬೇಕಿದೆ. ಈ ಯೋಜನೆ ರೂಪಗೊಂಡರೂ ಕಳೆದ ನಾಲ್ಕೈದು ತಿಂಗಳಿಂದ ಕಾಮಗಾರಿ ಕಾರ್ಯಗತಗೊಳ್ಳದೇ ನನೆಗುದಿಗೆ ಬಿದ್ದಿದೆ ಎಂದು ಆರೋಪಿಸಿದರು.

ಕೆಬಿಜೆಎನ್‌ಎಲ್‌ ಅಣೆಕಟ್ಟು ವಲಯದ ಮುಖ್ಯ ಅಭಿಯಂತರ ಎಸ್‌.ಎಚ್‌. ಮಂಜಪ್ಪ ಮನವಿ ಸ್ವೀಕರಿಸಿ ಮಾತನಾಡಿ, ಯೋಜನೆ ಯಶಸ್ವಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅದರನ್ವಯ ಈಗಾಗಲೇ ಚಿಮ್ಮಲಗಿ ಏತ ನೀರಾವರಿ ಯೋಜನೆಯ 137 ಕಿ.ಮೀ.ವರೆಗೂ ಪ್ರಾಯೋಗಿಕ ನೀರು ಹರಿದಿದೆ. ಆದರೆ ಆ ಕಾಲುವೆಯಿಂದ ಕೆರೆ ತುಂಬಿಸಲು ಭೂಸ್ವಾಧೀನಕ್ಕೆ ಅಲ್ಲಿಯ ರೈತರು ಅಡ್ಡಿಪಡಿಸಿದ್ದರ ಪರಿಣಾಮ ತೊಂದರೆಯಾಗಿದೆ. ರೈತರು ಸಹಕರಿಸಿದರೆ ಎರಡೇ ತಿಂಗಳಲ್ಲಿ ಆ ಎಲ್ಲ ಕೆರೆಗಳಿಗೂ ಸಮೀಪದ ಕಾಲುವೆಯಿಂದ ವಿತರಣಾ ಕಾಲುವೆ ನಿರ್ಮಿಸಿ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

ಮುಳವಾಡ ಏತ ನೀರಾವರಿ ಯೋಜನೆಯಲ್ಲಿ ವಿಜಯಪುರ, ಗದಗ ಮಾರ್ಗದ ರೈಲ್ವೆ ಹಳಿ ದಾಟಿಸುವ ಕಾಮಗಾರಿ ಭರದಿಂದ ಸಾಗಿದೆ. ಪೂರ್ಣಗೊಂಡ ನಂತರ ಅಲ್ಲಿಂದಲೂ ನೀರು ಹರಿಸಲಾಗುವುದು ಎಂದರು.

ಎಸ್‌.ಎ. ಮಸಬಿನಾಳ, ಎ.ಎಸ್‌.ಪಾಟೀಲ, ಎಂ.ಡಿ. ಕೋನಸಿರಸಗಿ, ಸಿದ್ದಪ್ಪ, ಶರಣಗೌಡ ಕೊಲ್ಹಾರ, ಬಿ.ಬಿ. ಪಾಟೀಲ, ಫಯಾಜ್‌ ಯಲಗಾರ, ಡಾ.ಎಂ. ರಾಮಚಂದ್ರ, ಸಂತೋಷ ಬಿರಾದಾರ, ಮಂಜುನಾಥ ಕೊಕಟನೂರ, ಶ್ರೀಶೈಲ ಇಂಡಿ, ಬಸವರಾಜ ಮಂಗಳೂರ, ಬಾಬುಸಾಬ್‌ ಬೇವೂರ, ಸಿದ್ದು ಪಡಗಾನೂರ, ದೇಸು ಚವ್ಹಾಣ ಇದ್ದರು. 

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.