ಕೆರೆ ತುಂಬಿಸಲು ಆಗ್ರಹಿಸಿ ರೈತರ ಧರಣಿ


Team Udayavani, Sep 8, 2018, 11:53 AM IST

vij-1.jpg

ದೇವರ ಹಿಪ್ಪರಗಿ: ಸಮಗ್ರ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ನೀರು ಹರಿಸುವ ಹಾಗೂ ಮುಳವಾಡ ಏತ ನೀರಾವರಿ ಮೂಲಕ ಕೆರೆಗಳನ್ನು ತುಂಬಿಸುವಂತೆ ಆಗ್ರಹಿಸಿ ದೇವರಹಿಪ್ಪರಗಿ ತಾಲೂಕು ನೀರಾವರಿ ಹೋರಾಟ ಸಮಿತಿ ಹಾಗೂ ವಿವಿಧ ಗ್ರಾಮಗಳ ರೈತರಿಂದ ಬೃಹತ್‌ ಪ್ರತಿಭಟನೆ ಜರುಗಿತು.

ಪಟ್ಟಣದ ಮಲ್ಲಯ್ಯನ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಸೇರಿದ ಸಾವಿರಾರು ರೈತರು, ನೀರು ಹರಿಯುವವರೆಗೆ ನಿಲ್ಲದು ಹೋರಾಟ, ಸಹನೆ ಬಲಹೀನತೆಯಲ್ಲ. ರೈತರ ತಾಳ್ಮೆ ಪರೀಕ್ಷಿಸಬೇಡಿ ಎಂಬ ವಿವಿಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ 218ರ ಮೂಲಕ ಅಂಬೇಡ್ಕರ್‌ ವೃತ್ತದಲ್ಲಿ ಸಭೆ
ಸೇರಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಗುರುನಾಥ ಬಗಲಿ, ಶಂಕರಗೌಡ ಪಾಟೀಲ, ರಾವುತ ತಳಕೇರಿ, ಸಂತೋಷ ಬಿರಾದಾರ, ನಿಂಗನಗೌಡ ಹುಲಸಗುಂದ, ಶಿವಾನಂದ ಕಗ್ಗೊಡ, ಸಂತೋಷ ತಳಕೇರಿ ಮಾತನಾಡಿ, ಚಿಮ್ಮಲಗಿ ಏತ ನೀರಾವರಿ 2013ರಲ್ಲಿ ಪ್ರಾರಂಭಗೊಂಡರು ಇಂದಿಗೂ
ಪೂರ್ಣಗೊಳ್ಳದಿರುವುದು ಈ ಭಾಗದ ಜನರ ದುರ್ದೈವವಾಗಿದ್ದು, ಈ ಬಾರಿ ಮುಂಗಾರಿನ ಎಲ್ಲ ಮಳೆ ಕೈಕೊಟ್ಟಿವೆ. ಇಂಥ ಸಮಯದಲ್ಲಿ ಕೆರೆಗಳನ್ನು ತುಂಬಿಸುವ ಕೆಲಸವಾಗಬೇಕಾಗಿತ್ತು. ಆದರೆ ಸರಕಾರ ಹಾಗೂ ಅಧಿ ಕಾರಿಗಳ ನಿರ್ಲಕ್ಷ್ಯಾದಿಂದ ಕಾಲುವೆ ಕಾರ್ಯದ ಜೊತೆ ಕೆರೆ ತುಂಬುವ ಯೋಜನೆ ಆಮೆವೇಗದಲ್ಲಿ ಸಾಗುತ್ತಾ ರೈತರ ತಾಳ್ಮೆ ಪರೀಕ್ಷಿಸುತ್ತಿವೆ.

 ಮಳೆಯಿಲ್ಲದ ಕಾರಣ ತಾಲೂಕಿನ ಎಲ್ಲ ಗ್ರಾಮಗಳ ಜನತೆ ಕುಡಿಯುವ ನೀರಿಗೆ ಪರಿತಪಿಸುತ್ತಿರುವುದು ವಾಸ್ತವ ಸತ್ಯ. ಆದ್ದರಿಂದ ತ್ವರಿತವಾಗಿ ಮುಳವಾಡ ಏತ ನೀರಾವರಿ ಮೂಲಕ ಕೆರೆ ತುಂಬುವ ಕಾರ್ಯಕ್ಕೆ ಚಾಲನೆ ನೀಡಬೇಕು. ಸಮಗ್ರ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ, ಸರಕಾರ ಈ ಆಗ್ರಹಕ್ಕೆ
ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಮರಣಾಂತ ಉಪವಾಸ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ನಂತರ ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಜಯಪುರ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಮಂಜುನಾಥ ಕೊಕಟನೂರ, ಸಂತೋಷ ಬಿರಾದಾರ, ಭೀಮನಗೌಡ ಪಾಟೀಲ, ಈರಣ್ಣ ಅಂಗಡಿ, ಶ್ರೀಶೈಲ ಇಂಡಿ, ಮಂಜುನಾಥ ಪಾಟೀಲ, ಪ್ರಭು ಬಿರಾದಾರ, ಯಮನೂರಿ ಸಾತಿಹಾಳ, ಉಮೇಶ ಗೌಳಿ, ರಾಮನಗೌಡ ಕೊಣ್ಣೂರ, ಸಂಗು ಕೆರೂಟಗಿ ಸೇರಿದಂತೆ ದೇವರ ಹಿಪ್ಪರಗಿ, ಇಂಗಳಗಿ, ಪಡಗಾನೂರ, ನಿವಾಳಖೇಡ ಗ್ರಾಮಗಳ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.