ಸರಳ ಗಣೇಶೋತ್ಸವ ಆಚರಿಸಿ


Team Udayavani, Sep 8, 2018, 12:00 PM IST

vij-2.jpg

ವಿಜಯಪುರ: ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಆವರಿಸಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸದೇ ಸರಳ ರೀತಿ ಆಚರಿಸಿ, ಉಳಿಕೆ ಹಣವನ್ನು ಸಂತ್ರಸ್ತರ ಪರಿಹಾರ ನಿಧಿಗೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮನವಿ ಮಾಡಿದರು.

ನಗರದ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಗಜಾನನ ಮಹಾಮಂಡಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶ್ರದ್ಧೆ, ಭಕ್ತಿಯಿಂದಲೇ ಉತ್ಸಾಹದಿಂದ ಗಣೇಶೋತ್ಸವ ಆಚರಿಸಿ. ಆದರೆ ಈ ಬಾರಿ ಅದ್ಧೂರಿತನ ಕಡಿಮೆ ಮಾಡಿ, ಸರಳ ರೀತಿಯಿಂದ ಆಚರಿಸಬೇಕಿದೆ.

ಅರ್ಥಪೂರ್ಣ ಆಚರಣೆಗಾಗಿ ಅಬ್ಬರ ಧ್ವನಿ ವರ್ಧಕಗಳು, ಅದ್ಧೂರಿ ಅಲಂಕಾರಗಳಿಗೆ ಬಳಸುವ ಹಣವನ್ನು ಸಂತ್ರಸ್ತರ
ನೆರವಿಗೆ ನೀಡಿ ಎಂದು ಮನವಿ ಮಾಡಿದರು. ಇದಲ್ಲದೇ ಪರಿಸರಕ್ಕೆ ಮಾರಕವಾದ ಪಿಒಪಿ ಗಣೇಶನ ಮೂರ್ತಿ ಮಾರಾಟ ನಿಷೇಧಿಸಿದ್ದು, ಕೆಲವೆಡೆ ನಿಷೇಧ ಉಲ್ಲಂಘಿಸಿ, ಮಾರಾಟ ಮಾಡಲಾಗುತ್ತಿರುವ ಪ್ರಕರಣ ಕೇಳಿ ಬರುತ್ತಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.
 
ಗ್ರಾಮೀಣ ಭಾಗದಲ್ಲಿ ರಸ್ತೆಗೆ ಹಗ್ಗ ಕಟ್ಟಿ ಸಂಚಾರಕ್ಕೆ ತೊಂದರೆ ನೀಡಿ ವಾಹನಗಳನ್ನು ತಡೆದು ಬಲವಂತವಗಿ ಗಣೇಶ ಉತ್ಸವಕ್ಕೆ ಹಣ ವಸೂಲಿ ಮಾಡುವ ಪ್ರಕರಣಗಳು ಕಂಡು ಬರುತ್ತವೆ. ಇದಕ್ಕೆ ಅವಕಾಶ ನೀಡಬಾರದು. ಇಂಥ ಪ್ರಕರಣಗಳು ವರದಿಯಾದರೆ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಸಿದರು.

ಪರಿಸರ ಅಭಿಯಂತರ ಬಿ.ಜಗದೀಶ ಮಾತನಾಡಿ, ಗಣೇಶನ ಉತ್ಸವ ಮೂರ್ತಿಗಳ ವಿಸರ್ಜನೆಗೆ ತಾಜ್‌ಬಾವಡಿ ಮುಂಭಾಗ ಸೇರಿದಂತೆ 9 ಕಡೆಗಳಲ್ಲಿ ಕೃತಕ ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು. 

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ತಾಜ್‌ಬಾವಡಿಯಲ್ಲಿ ಗಣೇಶನ ಮೂರ್ತಿ ವಿಸರ್ಜನೆಗೆ ಅವಕಾಶ ಕೊಡಿ. ಇಲ್ಲವೇ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಕೃತಕ ಹೊಂಡದ ಸ್ಥಳ ಇನ್ನೂ ಹೆಚ್ಚಾಗಿ ಆಳ-ಅಗಲ ವಿಸ್ತರಿಸಬೇಕು. ಗಜಾನನ ಉತ್ಸವ ಸಮಿತಿಗಳು ಸಹ ಡಿಜೆಯಲ್ಲಿ ದೇಶಭಕ್ತಿ ಗೀತೆ, ಭಕ್ತಗೀತೆಗಳನ್ನು ಅಳವಡಿಸಬೇಕು ಎಂದು ಕೋರಿದರು. ಗಜಾನನ ಮಹಾಮಂಡಳ ಅಧ್ಯಕ್ಷ ಶರತ್‌ ಬಿರಾದಾರ ಮಾತನಾಡಿದರು.

ಟ್ರೋಫಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಪರಿಸರ ಸ್ನೇಹಿಯಾಗಿ, ಅರ್ಥಪೂರ್ಣ ಆಚರಣೆಗೆ ಗಜಾನನ ಮಂಡಳಿಗಳಿಗೆ ಮೂರು ವಿಶೇಷ ಬಹುಮಾನ ನೀಡಲಾಗುವುದಾಗಿ ಎಸ್ಪಿ ಪ್ರಕಾಶ ನಿಕ್ಕಂ ಹೇಳಿದರು. ಶಿಸ್ತುಬದ್ಧವಾಗಿ ಮೆರವಣಿಗೆ ನಡೆಸುವ, ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಣೆ, ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮೆರವಣಿಗೆ, ಟ್ರಾಫಿಕ್‌ ರೂಲ್ಸ್‌ ಫಾಲೋ ಮಾಡುವ ಗಜಾನನ ಉತ್ಸವ ಸಮಿತಿಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದರು.

ಗಜಾನನ ಉತ್ಸವ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಅನುಮತಿಗಾಗಿ ಏಕಗವಾಕ್ಷಿ ಯೋಜನೆ ರೂಪಿಸಲಾಗಿದ್ದು, ಸೋಮವಾರ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು. ಗಜಾನನ ಉತ್ಸವ ಸಮಿತಿಗಳು
ಸುರಕ್ಷತೆಯ ದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಿ, ಹೆಚ್ಚು ಡೆಸಿಬಲ್‌ ಇರುವ ಡಿಜೆಗಳನ್ನು ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.