ಸರಳ ಗಣೇಶೋತ್ಸವ ಆಚರಿಸಿ


Team Udayavani, Sep 8, 2018, 12:00 PM IST

vij-2.jpg

ವಿಜಯಪುರ: ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಆವರಿಸಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸದೇ ಸರಳ ರೀತಿ ಆಚರಿಸಿ, ಉಳಿಕೆ ಹಣವನ್ನು ಸಂತ್ರಸ್ತರ ಪರಿಹಾರ ನಿಧಿಗೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮನವಿ ಮಾಡಿದರು.

ನಗರದ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಗಜಾನನ ಮಹಾಮಂಡಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶ್ರದ್ಧೆ, ಭಕ್ತಿಯಿಂದಲೇ ಉತ್ಸಾಹದಿಂದ ಗಣೇಶೋತ್ಸವ ಆಚರಿಸಿ. ಆದರೆ ಈ ಬಾರಿ ಅದ್ಧೂರಿತನ ಕಡಿಮೆ ಮಾಡಿ, ಸರಳ ರೀತಿಯಿಂದ ಆಚರಿಸಬೇಕಿದೆ.

ಅರ್ಥಪೂರ್ಣ ಆಚರಣೆಗಾಗಿ ಅಬ್ಬರ ಧ್ವನಿ ವರ್ಧಕಗಳು, ಅದ್ಧೂರಿ ಅಲಂಕಾರಗಳಿಗೆ ಬಳಸುವ ಹಣವನ್ನು ಸಂತ್ರಸ್ತರ
ನೆರವಿಗೆ ನೀಡಿ ಎಂದು ಮನವಿ ಮಾಡಿದರು. ಇದಲ್ಲದೇ ಪರಿಸರಕ್ಕೆ ಮಾರಕವಾದ ಪಿಒಪಿ ಗಣೇಶನ ಮೂರ್ತಿ ಮಾರಾಟ ನಿಷೇಧಿಸಿದ್ದು, ಕೆಲವೆಡೆ ನಿಷೇಧ ಉಲ್ಲಂಘಿಸಿ, ಮಾರಾಟ ಮಾಡಲಾಗುತ್ತಿರುವ ಪ್ರಕರಣ ಕೇಳಿ ಬರುತ್ತಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.
 
ಗ್ರಾಮೀಣ ಭಾಗದಲ್ಲಿ ರಸ್ತೆಗೆ ಹಗ್ಗ ಕಟ್ಟಿ ಸಂಚಾರಕ್ಕೆ ತೊಂದರೆ ನೀಡಿ ವಾಹನಗಳನ್ನು ತಡೆದು ಬಲವಂತವಗಿ ಗಣೇಶ ಉತ್ಸವಕ್ಕೆ ಹಣ ವಸೂಲಿ ಮಾಡುವ ಪ್ರಕರಣಗಳು ಕಂಡು ಬರುತ್ತವೆ. ಇದಕ್ಕೆ ಅವಕಾಶ ನೀಡಬಾರದು. ಇಂಥ ಪ್ರಕರಣಗಳು ವರದಿಯಾದರೆ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಸಿದರು.

ಪರಿಸರ ಅಭಿಯಂತರ ಬಿ.ಜಗದೀಶ ಮಾತನಾಡಿ, ಗಣೇಶನ ಉತ್ಸವ ಮೂರ್ತಿಗಳ ವಿಸರ್ಜನೆಗೆ ತಾಜ್‌ಬಾವಡಿ ಮುಂಭಾಗ ಸೇರಿದಂತೆ 9 ಕಡೆಗಳಲ್ಲಿ ಕೃತಕ ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು. 

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ತಾಜ್‌ಬಾವಡಿಯಲ್ಲಿ ಗಣೇಶನ ಮೂರ್ತಿ ವಿಸರ್ಜನೆಗೆ ಅವಕಾಶ ಕೊಡಿ. ಇಲ್ಲವೇ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಕೃತಕ ಹೊಂಡದ ಸ್ಥಳ ಇನ್ನೂ ಹೆಚ್ಚಾಗಿ ಆಳ-ಅಗಲ ವಿಸ್ತರಿಸಬೇಕು. ಗಜಾನನ ಉತ್ಸವ ಸಮಿತಿಗಳು ಸಹ ಡಿಜೆಯಲ್ಲಿ ದೇಶಭಕ್ತಿ ಗೀತೆ, ಭಕ್ತಗೀತೆಗಳನ್ನು ಅಳವಡಿಸಬೇಕು ಎಂದು ಕೋರಿದರು. ಗಜಾನನ ಮಹಾಮಂಡಳ ಅಧ್ಯಕ್ಷ ಶರತ್‌ ಬಿರಾದಾರ ಮಾತನಾಡಿದರು.

ಟ್ರೋಫಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಪರಿಸರ ಸ್ನೇಹಿಯಾಗಿ, ಅರ್ಥಪೂರ್ಣ ಆಚರಣೆಗೆ ಗಜಾನನ ಮಂಡಳಿಗಳಿಗೆ ಮೂರು ವಿಶೇಷ ಬಹುಮಾನ ನೀಡಲಾಗುವುದಾಗಿ ಎಸ್ಪಿ ಪ್ರಕಾಶ ನಿಕ್ಕಂ ಹೇಳಿದರು. ಶಿಸ್ತುಬದ್ಧವಾಗಿ ಮೆರವಣಿಗೆ ನಡೆಸುವ, ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಣೆ, ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮೆರವಣಿಗೆ, ಟ್ರಾಫಿಕ್‌ ರೂಲ್ಸ್‌ ಫಾಲೋ ಮಾಡುವ ಗಜಾನನ ಉತ್ಸವ ಸಮಿತಿಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದರು.

ಗಜಾನನ ಉತ್ಸವ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಅನುಮತಿಗಾಗಿ ಏಕಗವಾಕ್ಷಿ ಯೋಜನೆ ರೂಪಿಸಲಾಗಿದ್ದು, ಸೋಮವಾರ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು. ಗಜಾನನ ಉತ್ಸವ ಸಮಿತಿಗಳು
ಸುರಕ್ಷತೆಯ ದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಿ, ಹೆಚ್ಚು ಡೆಸಿಬಲ್‌ ಇರುವ ಡಿಜೆಗಳನ್ನು ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.