ವಚನಗಳು ತನು-ಮನ-ಭಾವಕ್ಕೆ ಔಷಧಿಯಾಗಲಿ


Team Udayavani, Sep 9, 2018, 4:32 PM IST

vij-2.jpg

ಬಸವನಬಾಗೇವಾಡಿ: 12ನೇ ಶತಮಾನದ ಬಸವಣ್ಣ ಸೇರಿದಂತೆ ಅನೇಕ ಶರಣರು ರಚಿಸಿದ ವಚನಗಳು ಫ್ಯಾನ್ಸಿ
ಆಗಬಾರದು, ತನು ಮನ ಭಾವಕ್ಕೆ ಔಷಧಿಯಾಗಬೇಕು ಎಂದು ಮುಂಡರಗಿಯ ಜಗದ್ಗುರು ತೋಂಟದಾರ್ಯ ಶಾಖಾಮಠ ಹಾಗೂ ಬೈಲೂರು ನಿಷ್ಕಲ ಮಂಟಪದ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ಹಾಗೂ ಸಂಸ್ಥಾಪಕರಾದ ಸುತ್ತೂರು ಜಗದ್ಗುರು
ಡಾ| ರಾಜೇಂದ್ರ ಮಹಾಸ್ವಾಮಿಗಳ ಜನ್ಮದಿನದ ಅಂಗವಾಗಿ ನ್ಯೂ ಇಂಗ್ಲಿಷ್‌ ಶಾಲೆ ಆವರಣದಲ್ಲಿ ತಾಲೂಕಾ ಶರಣ
ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ವಚನ ದಿನ, ವಿಚಾರ ಸಂಕಿರಣ,ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಲಿಂ| ನಾಗಪ್ಪ ಗುರಪ್ಪ ಮರ್ತೂರ ದತ್ತಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಚನಗಳನ್ನು ಶರಣರು ದೇವರಿಗಾಗಿ ಬರೆದಿಲ್ಲ, ಬದುಕಿಗಾಗಿ ಬರೆದಿದ್ದಾರೆ. ಕೇವಲ ಮನೆ ಹೊರಗೆ ಇವನಾರವ
ಎನ್ನದೇ ಮನೆ ಒಳಗಡೆಯೂ ಇವ ನಮ್ಮವನೆಂದು ಆದರ್ಶರಾಗಿರಿ. ಸಮಾಜದ ರೋಗ ವಾಸಿಯಾಗಲು
ತನುಮನ ಶುದ್ಧಿಯಾಗಿರಬೇಕು. ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಬಾರದು. ಮುಂದಿನ 50 ವರ್ಷಗಳಲ್ಲಿ ದೇಶದಲ್ಲಿ ಆಹಾರ ಕೊರತೆಯಾಗುವ ಹಿನ್ನೆಲೆಯಲ್ಲಿ ಬರಿ ಎಂಜನಿಯರಿಂಗ್‌ ಹಾಗೂ ವೈದ್ಯಕೀಯ ಕೋರ್ಸ್‌ಗಳ ಹಿಂದೆ ಬೀಳದೇ ರೈತರಾಗುವ ಕಡೆ ಗಮನ ಹರಿಸಿರಿ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ವಚನ ಸಂಪತ್ತನ್ನು ಉಳಿಸಿ ಕೊಟ್ಟವರು
ಕುರಿತಾಗಿ ಪ್ರಾಧ್ಯಾಪಕಿ ವಿಜಯಲಕ್ಷ್ಮೀ ರೊಟ್ಟಿ, ವಚನ ಸಾಹಿತ್ಯದಲ್ಲಿ ಪ್ರತಿಪಾದಿತವಾಗಿರುವ ವಿಶ್ವ ಮೌಲ್ಯಗಳು
ಕುರಿತಾಗಿ ಕೂಡಗಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಯುವರಾಜ ಮಾದನಶೆಟ್ಟಿ ಹಾಗೂ ವಚನ ವಾಚನ ವಿಶ್ಲೇಷಣೆ ಕುರಿತಾಗಿ ತಾಲೂಕು ಜಾನಪದ ಸಾಹಿತ್ಯ ಪರಿಷತ್‌ ಅಧ್ಯಕ್ಷ ದೇವೇಂದ್ರ ಗೋನಾಳ ವಿಚಾರ ಮಂಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕಾ ಶಸಾಪ ಅಧ್ಯಕ್ಷ ವೀರಣ್ಣ ಮರ್ತೂರ ಪ್ರಾಸ್ತಾವಿಕ ಮಾತನಾಡಿದರು. ಕದಳಿ
ವೇದಿಕೆ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ಜಿಲ್ಲಾ ಶಸಾಪ ಕಾರ್ಯದರ್ಶಿ ಸಿದ್ದಲಿಂಗಪ್ಪ ಹದಿಮೂರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಾಹೇಬಗೌಡ ಬಸರಕೋಡ, ಶಾಲಾ ಮುಖ್ಯಗುರು ಪಿ.ಡಿ. ಭಗತ್‌, ಕಾರ್ಯದರ್ಶಿ ಸುಭಾಷ್‌ ನಾಯಕ, ಮುಖ್ಯಗುರು ಎಂ.ಎಸ್‌. ಹಿರೇಮಠ, ಸಂಗನಗೌಡ ಚಿಕ್ಕೊಂಡ, ಎಸಿ ಬಶೆಟ್ಟಿ, ಎಂ.ಎಸ್‌. ಕೊಟಿ, ಮಹಾಂತೇಶ
ಸಂಗಮ, ಎಸ್ಪಿ ರಾಠೊಡ, ಪಿ.ಬಿ. ಕಡೇಮನಿ ಸೇರಿದಂತೆ ಅನೇಕರು ಇದ್ದರು. ಆರ್‌.ಎಸ್‌. ಪಟ್ಟಣಶೆಟ್ಟಿ ಸ್ವಾಗತಿಸಿದರು.

ದೀಪಾ ಬೂದಿಹಾಳ ಪ್ರಾರ್ಥಿಸಿದರು. ಶರಣು ಬಸ್ತಾಳ ನಿರೂಪಿಸಿದರು. ತಾಲೂಕಿನ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ಮೌನೇಶ ಬಡಿಗೇರ ಹಾಗೂ ದೀಪಶ್ರೀ ಬೂದಿಹಾಳ ಅವರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.