ಭಾಗ್ಯವಂತಿ ದರ್ಶನಕ್ಕೆ ಭಕ್ತ ಸಾಗರ
Team Udayavani, Sep 10, 2018, 10:35 AM IST
ಅಫಜಲಪುರ: ಇತಿಹಾಸ ಪ್ರಸಿದ್ಧ ಘತ್ತರಗಿ ಭಾಗ್ಯವಂತಿ ದೇಗುಲದಲ್ಲಿ ಶ್ರಾವಣ ಮಾಸದ ಮುಕ್ತಾಯ ಹಾಗೂ ರವಿವಾರದ ಅಮಾವಾಸ್ಯೆ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು.
ನೂರಾರು ವಾಹನಗಳು, ಲಕ್ಷಾಂತರ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತೆ ಆಯಿತು. ಪ್ರತಿ ಅಮಾವಾಸ್ಯೆ ದಿನ ಸಾವಿರಾರು ಭಕ್ತರು ಘತ್ತರಗಿಗೆ ಆಗಮಿಸಿ ಭಾಗ್ಯವಂತಿ ದೇವಿ ದರ್ಶನ ಪಡೆಯುತ್ತಾರೆ. ಆದರೆ ಇಲ್ಲಿರುವ ಕಿರಿದಾದ ರಸ್ತೆಗಳಿಂದ ವಾಹನ ನಿಲುಗಡೆಗೆ ಸಾಕಷ್ಟು ತೊಂದರೆಯಾಗಿದೆ.
ಶ್ರಾವಣ ಮಾಸದ ಮುಕ್ತಾಯ, ರವಿವಾರದ ಅಮಾವಾಸ್ಯೆ ದಿನ ನಾಡಿನ ಮೂಲೆ ಮೂಲೆಯಿಂದ ಬಂದ ಭಕ್ತರು ಕಿರಿದಾದ
ರಸ್ತೆಗಳಲ್ಲಿ ವಾಹನಗಳನ್ನು ಸಿಲುಕಿಸಿಕೊಂಡು ಪರದಾಡಿದರು. ಅದರಲ್ಲೂ ಘತ್ತರಗಿ ಬಗಲೂರ ಗ್ರಾಮಗಳ ಮಧ್ಯದ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೂರಾರು ವಾಹನಗಳು ಸಿಲುಕಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಯಾಗಿತ್ತು. ಸಂಚಾರ ದಟ್ಟಣೆ ಕಡಿಮೆ ಮಾಡಲು ಪೊಲೀಸರು ಹರಸಾಹಸಪಟ್ಟರು.
ವಾಹನ ನಿಲುಗಡೆಗಿಲ್ಲ ಸ್ಥಳ: ಘತ್ತರಗಿಗೆ ಬರುವ ವಾಹನಗಳಿಗೆ ನಿಲ್ಲಲು ಸರಿಯಾದ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ದೇವಸ್ಥಾನದ ಎದುರಿಗೆ ಇರುವ ಪಾರ್ಕಿಂಗ್ ಸ್ಥಳದಲ್ಲಿ ಕೆಲವು ವಾಹನ ನಿಲುಗಡೆಗೆ ಮಾಡಬಹುದು. ಆದರೆ ಒಮ್ಮೆಲೆ
ನೂರಾರು ವಾಹನಗಳು ಬಂದರೆ ಸಮಸ್ಯೆ ಉಂಟಾಗುತ್ತದೆ.
ಬೈಪಾಸ್ ರಸ್ತೆ: ಇಲ್ಲಿನ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಬೈಪಾಸ್ ರಸ್ತೆ ಬೇಕು. ಅಮಾವಾಸ್ಯೆ, ವಿಶೇಷ ದಿನಗಳಂದು, ಶುಕ್ರವಾರಕ್ಕೊಮ್ಮೆ ಇಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುತ್ತದೆ. ಇಲ್ಲಿಗೆ ಆಗಮಿಸುವ ನೂರಾರು ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗಬಾರದೆಂದರೆ ಬೈಪಾಸ್ ರಸ್ತೆ ನಿರ್ಮಾಣದ ಅವಶ್ಯಕತೆ ಇದೆ ಎಂದು ಜೆಡಿಎಸ್ ಮುಖಂಡ ರಾಜೇಂದ್ರ ಪಾಟೀಲ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?