ವಿಜಯಪುರ: ಅಪ್ರಕಟಿತ ಅರೇಬಿಕ್‌ ಶಾಸನ ಪತ್ತೆ


Team Udayavani, Sep 10, 2018, 3:48 PM IST

bid-6.jpg

ವಿಜಯಪುರ: ಐತಿಹಾಸಿಕ ವಿಜಯಪುರ ನಗರದಲ್ಲಿ ಅಪ್ರಕಟಿತ ಅರೇಬಿಕ್‌ ಶಾಸನ ಪತ್ತೆಯಾಗಿದೆ. ಅಲಿಕ್‌ ರೋಜಾ ಸಮೀಪದ ಸಾದಾತ್‌ ಮಸೀದಿ ದರ್ಗಾ ಸ್ಥಳದಲ್ಲಿ ಸಂಶೋಧಕ ಡಾ| ಎ.ಎಲ್‌. ನಾಗೂರ ಶಾಸನ ಪತ್ತೆ ಹಚ್ಚಿದ್ದಾರೆ.

ಅಪ್ರಕಟಿತ ಸದರಿ ಶಾಸನ ಮಹ್ಮದ್‌ ಆದಿಲಶಾಹನ ಕಾಲಕ್ಕೆ ಸೇರಿದ್ದು, ಅರೇಬಿಯಾ ದೇಶದ ತುರೇಮಿ ಪಟ್ಟಣ ಸಮೀಪದ ಹಜರ್‌ ಮೌತ್‌ ನಿಂದ ವಿಜಯಪುರ ನಗರಕ್ಕೆ ಆಗಮಿಸಿದ್ದ ಖಾದ್ರಿಯಾ ಶಾಖೆ ಸೂಫಿ ಸಂತರಾದ ಸೈಯದ್‌ ಶಾಹ ಜಾಫರ್‌ ಸಕಾಫ್‌ ಇವರ ನಿಧನದ ಕುರಿತು ಮಾಹಿತಿ ನೀಡುತ್ತಿದೆ. 

ಹತ್ತು ಸಾಲುಗಳನ್ನು ಹೊಂದಿರುವ ಶಾಸನದಲ್ಲಿ 8ನೇ ಸಾಲು ಮಾತ್ರ ಪರ್ಶಿಯನ್‌ ಭಾಷೆ ಬಳಸಲಾಗಿದೆ. ಅಲ್ಲಾಹನು ಪರಮದಯಾಳು; ಆತನೊಬ್ಬನೆ ಮೊಹಮ್ಮದರು (ಸ) ಆತನ ಪ್ರವಾದಿಗಳು. ಅಲ್ಲಾಹನ ಸಂತರ ಮೇಲೆ ಯಾವುದೇ ಭಯ ದುಃಖಗಳು ಉಂಟಾಗವು, ಇದು ನಿಸ್ಸಂಶಯ. ಅವರ ಸಮಾಧಿ  ಪವಿತ್ರವಾದುದು. ಗುರುವಿನ ಗುರುವಾದ ಸಾದಾತರ ಮುಖ್ಯಸ್ಥ ಸೈಯದ್‌ ಶಾಹ ಜಾಫರ್‌ ಸಕಾಫರ್‌ ಅವರಿಗೆ ಗೌರವಾರ್ಪಣೆ. ಅರೇಬಿಯಾದ ತುರೇಮಿ
ಪ್ರದೇಶದಿಂದ ಬಂದು ವಿಜಯಪುರದಲ್ಲಿ ನೆಲೆಸಿದ್ದಾರೆ. ಇವರು ಸೈಯದ್‌ ಅಬ್ದುಲ್ಲಾ ಅವರ ಪುತ್ರ. ತುರೇಮಿ ಪಟ್ಟಣದ ಹಜರ್‌ ಮೌತ್‌ನವರು.

ಪ್ರವಾದಿ ಮೊಹಮ್ಮದರ (ಸ) ನಂತರದ 28ನೇ ತಲೆಮಾರಿಗೆ ಸೇರಿದವರು. ಸೈಯದ್‌ ಶಾಹ ಜಾಫರ್‌ ಸಕಾಫ್‌ ಅವರು 20, ಜಿಲ್ಲಾದಾ 1057ರಲ್ಲಿ (ಹಿ.ಶ.) ಸ್ವರ್ಗಸ್ಥರಾದರು ಎಂದು ಶಾಸನ ಸಾರುತ್ತದೆ. ಸಂತ ಸೈಯದ್‌ ಶಾಹ ಜಾಫರ್‌ ಸಕಾಫ್‌ ಅವರು ವಿಜಯಪುರದಲ್ಲಿ ನೆಲೆಸಿದ್ದಕ್ಕೆ ಸಾಕ್ಷಿಯಾಗಿ ಸೂಫಿ ಮಠ (ಖಾನಖಾ) ಒಂದು ಅಲಿಕ್‌ ರೋಜಾ ಪ್ರದೇಶದಲ್ಲಿ ಇದೆ.  ಈ ಶಾಸನದ ಶೋಧ ಕಾರ್ಯದಲ್ಲಿ ಸಾದಾತ್‌ ದರ್ಗಾದ ಸಜ್ಜಾದೆ ನಶೀನ್‌ (ಪೀಠಾಧಿಪತಿ)
ಮತ್ತು ಖಾನದಾನಿ ಮುತವಲ್ಲಿಗಳಾದ ಸೈಯದ್‌ ಆಮೀರ ಸಕಾಫ್‌ ಸಾದಾತ್‌ ಮತ್ತು ಅವರ ವಂಶಸ್ಥ ಅರೇಬಿಕ ಪಂಡಿತ ಸೈಯದ್‌ ಮುರ್ತುಜಾ ಖಾದ್ರಿ ಸಕಾಫ್‌ ಸಾದಾತ್‌ ಅವರು ನೆರವು ನೀಡಿದ್ದಾರೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.