ತಾಳಿಕೋಟೆಯಲ್ಲಿ ಬೇಕಾಬಿಟ್ಟಿ ಕಾಮಗಾರಿ


Team Udayavani, Sep 10, 2018, 4:16 PM IST

vij-1.jpg

ತಾಳಿಕೋಟೆ: ನಗರೋತ್ಥಾನ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಪಟ್ಟಣದ ವಿವಿಧಡೆ ಕೈಗೊಳ್ಳಲಾಗುತ್ತಿದೆ. ಆದರೆ ಕಾಮಗಾರಿ ನಿರ್ವಹಣೆ ಬೇಕಾಬಿಟ್ಟಿ ಕೈಗೊಳ್ಳುವುದರ ಜೊತೆಗೆ ಗುತ್ತಿಗೆದಾರನ
ಕರಾಮತ್ತಿಗೆ ಒಳಚರಂಡಿ ಚೇಂಬರ್‌ಗಳು ಒಡೆದು ನೆಲದಲ್ಲಿ ಮುಚ್ಚಿ ಹೋಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

7 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಪೇಸ್‌ 3 ಯೋಜನೆಯಡಿ ಡಾಂಬರೀಕರಣ ಹಾಗೂ ಸಿಸಿ ರಸ್ತೆ, ಚರಂಡಿ ಒಳಗೊಂಡಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೈಗೊಂಡ ಕಾಮಗಾರಿಗಳಲ್ಲಿ ಕೆಲವೆಡೆ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಲಾಗಿದೆ. ಕೆಲವೆಡೆ ರಸ್ತೆ ಕಾಮಗಾರಿಗೆ ಮೆಟಿಂಗಮಾಡಿದ್ದರೆ ಇನ್ನೊಂದಡೆ ಇದ್ದ ರಸ್ತೆ ಮೇಲೆ ಡಾಂಬರೀಕರಣ ಕೈಗೊಂಡು ಗುತ್ತಿಗೆದಾರ ಕೈತೊಳೆದುಕೊಳ್ಳುತ್ತ ಸಾಗಿದ್ದಾನೆ.

ಯಾವುದೇ ಕಾಮಗಾರಿ ನಿರ್ವಹಿಸಬೇಕಾದರೆ ಪುರಸಭೆ ಸಂಬಂಧಿತ ಆಸ್ತಿ ಹಾನಿಗೊಳಗಾಗದಂತೆ ಗುತ್ತಿಗೆದಾರ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಒಂದು ವೇಳೆ ಅಚಾತುರ್ಯದಿಂದ ಹಾನಿಗೊಳಗಾದರೆ ಅದೇ ಗುತ್ತಿಗೆದಾರು
ಹಾನಿಗೀಡಾಗಿದ್ದನ್ನು ಸರಿಪಡಿಸಿ ಮುಂದಿನ ಕಾಮಗಾರಿ ಕೈಗೊಳ್ಳಬೇಕಾಗುತ್ತದೆ.

ಅದ್ಯಾವುದನ್ನು ಲೆಕ್ಕಿಸದೇ ರಸ್ತೆ ಡಾಂಬರೀಕರಣದ ನೆಪದಲ್ಲಿ ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಚೆಂಬರ್‌ನ ಸುತ್ತ ಕಡಿ ಕಂಕರಗಳನ್ನು ಹಾಕಿ ಚೇಂಬರ್‌ ಇಲ್ಲೇ ಇದೇ ಎಂಬುದನ್ನು ಗುರುತಿಸಲಿಕ್ಕೆ ಆಗದ ಹಾಗೆ ಡಾಂಬರೀಕರಣಕ್ಕೆ ಮುಂದಾಗಿರುವದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ನಿರ್ವಹಣೆ ಸಮಯದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಂತ ಹಂತದಲ್ಲಿ ತಪಾಸಣೆ ಕೈಗೊಳ್ಳುತ್ತ
ಸಾಗಬೇಕಾಗುತ್ತದೆ. ಆದರೆ ವಿವಿಧ ಕಾಮಗಾರಿಗಳಲ್ಲಿ ಬಹುತೇಕ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದರೂ ಯಾವ ಒಬ್ಬ ಅಧಿಕಾರಿಯೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳದಿರುವುದು ಅಧಿಕಾರಿಗಳ ನಡೆ ಮೇಲೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ಕೆಲವು ವಾರ್ಡ್‌ಗಳಲ್ಲಿ ಬೇಕಾ ಬಿಟ್ಟಿ ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವದನ್ನು ಮನಗಂಡ ಸಾರ್ವಜನಿಕರು ಹಾಗೂ ಕೆಲವು ಸಂಘಟಕರು ನಗರಾಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿಗಳಿಗೆ ಲಿಖೀತವಾಗಿ ದೂರು ಸಲ್ಲಿಸುತ್ತ ಬಂದರೂ ಯಾವುದೇ ಪ್ರಯೋಜನೆ ಆಗಿಲ್ಲ.
 
ಜಿಲ್ಲಾಧಿಕಾರಿಗಳು ಕಾಮಗಾರಿ ನಿರ್ವಹಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು. ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನ ಮೇಲೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ನಗರೋತ್ಧಾನ ಯೋಜನೆಯಡಿ ಪಟ್ಟಣದಲ್ಲಿ ನಡೆದಿರುವ ಡಾಂಬರೀಕರಣ ಹಾಗೂ ಸಿಸಿ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಅವುಗಳನ್ನು ಸುತ್ತಲೂ ಕಡಿ ಕಂಕರಗಳಿಂದ ಮುಚ್ಚಿ ಬೇಕಾಬಿಟ್ಟಿ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲಾ ನಗರಾಭಿವೃದ್ಧಿ ಯೋಜನೆ ಇಲಾಖೆಗೆ ಲಿಖೀತವಾಗಿ ದೂರು ಸಲ್ಲಿಸಿದ್ದೇವೆ. ಕೂಡಲೇ ಕಾಮಗಾರಿ ತಪಾಸಣೆ ಕೈಗೊಂಡು ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕು.
 ಜೈಭೀಮ ಮುತ್ತಗಿ, ಕರವೇ ತಾಲೂಕು ಉಪಾಧ್ಯಕ್ಷ

ಒಳಚರಂಡಿ ಚೇಂಬರ್‌ಗಳು ಒಡೆದು ಹಾಗೆ ಮುಚ್ಚಿ ರಸ್ತೆ ಕಾಮಗಾರಿ ಕೈಗೊಂಡಿರುವ ದೂರಿನ ಬಗ್ಗೆ ಎರಡು ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಈ ವಿಷಯ ಕುರಿತು ಗುತ್ತಿಗೆದಾರನ ಜೊತೆ ಈಗಲೇ ದೂರವಾಣಿ ಮೂಲಕ ಮಾತನಾಡುತ್ತೇನೆ. 
 ಮಹೇಶ ಕಲಾಲ್‌, ನಗರಾಭಿವೃದ್ಧಿ ಕೋಶದ ಎಇಇ

„ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.