ಮಗನನ್ನು ಉಳಿಸಿಕೊಳ್ಳಲು ಹಂಬಲ


Team Udayavani, Sep 24, 2018, 1:18 PM IST

vij-3.jpg

ವಿಜಯಪುರ: ಹುಟ್ಟುತ್ತಲೇ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿಗೆ 11 ವಯದಲ್ಲೇ 4 ಶಸ್ತ್ರಚಿಕಿತ್ಸೆ ಆಗಿದೆ. ಇದೀಗ 5ನೇ ಶಸ್ತ್ರಚಿಕಿತ್ಸೆ ಮಾಡಿಸಲೇಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ತನ್ನ ಕೂಲಿಯನ್ನೇ ನಂಬಿರುವ ಕುಟುಂಬ ಸಾಗಿಸುವ ಆ ತಾಯಿ ಮಗನನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದು, ಸಾರ್ವಜನಿಕರ ನೆರವಿಗೆ ಅಂಗಲಾಚುತ್ತಿದ್ದಾಳೆ.

ಹೊಲ-ಮನೆ ಇಲ್ಲದಿದ್ದರೂ ಬಾಡಿಗೆ ಮನೆಯಲ್ಲಿರುವ ಲಕ್ಷ್ಮೀ ಹಾಗೂ ರಮೇಶ ಸರಸಂಬಿ ಅವರ ಕುಟುಂಬ ಕೂಲಿ ಮಾಡಿಕೊಂಡು ನೆಮ್ಮದಿ ಜೀವನ ನಡೆಸುತ್ತಿತ್ತು. ಆದರೆ 11 ವರ್ಷಗಳ ಹಿಂದೆ ಎರಡನೇ ಮಗ ಗಣೇಶನಿಗೆ ಹುಟ್ಟುತ್ತಲೇ ಉಂಟಾಗಿರುವ ವಿಚಿತ್ರ ದೈಹಿಕ ಸಮಸ್ಯೆ ಬಡ ಕುಟುಂಬವನ್ನು ಜರ್ಜರಿತ ಮಾಡಿದೆ. ಗಣೇಶನಿಗೆ ಜನ್ಮತಃ ಗುದದ್ವಾರವಿಲ್ಲದೇ ಮಲವಿಸರ್ಜನೆ ಸಮಸ್ಯೆ ಕಾಣಿಸಿಕೊಂಡಾಗ ವಾರದಲ್ಲಿ ಹೊಟ್ಟೆಯಲ್ಲಿ ಕೊಳವೆ ಹಾಕಿ ಮಲವಿಸರ್ಜನೆಗೆ ದಾರಿ ಮಾಡಿಕೊಟ್ಟಿದ್ದರು. 

ಇದಾದ ಬಳಿಕ ಸಮಸ್ಯೆ ಪರಿಹಾರ ಆಗುವ ಬದಲು ಮತ್ತಷ್ಟು ಉಲ್ಬಣಗೊಂಡಿತು. ಹೀಗಾಗಿ 11 ವರ್ಷದ ಆ ಮಗುವಿಗೆ ಇದೀಗ ಒಟ್ಟು 4 ಶಸ್ತ್ರಚಿಕಿತ್ಸೆ ಆಗಿದ್ದು, ಆರ್ಥಿಕ ಸಂಕಷ್ಟದಿಂದ ಬಳಲುವಂತೆ ಮಾಡಿದೆ. ಕುಟುಂಬದ ಯಜಮಾನ ರಮೇಶಗೂ ದುಡಿಮೆ ಹಂತದಲ್ಲಿ ಕಾಣಿಸಿಕೊಂಡಿರುವ ಸೊಂಟದ ಸಮಸ್ಯೆ ಕೂಲಿ ಕೆಲಸಕ್ಕೂ ಸಂಚಕಾರ ತಂದಿದೆ. ಹೀಗಾಗಿ ಇಡೀ ಕುಟುಂಬಕ್ಕೆ ಇದೀಗ ಲಕ್ಷ್ಮೀ ಸರಸಂಬಿ ದುಡಿಯುವ ನಿತ್ಯದ 150 ರೂ. ಕೂಲಿಯೇ ಒಲೆ ಹೊತ್ತಿಸಿ, ಗಂಜಿಗೂ ಪರದಾಡುವಂತೆ ಮಾಡಿದೆ.

ಈ ಹಂತದಲ್ಲಿ ಅನಾರೋಗ್ಯ ಪೀಡಿತ ಮಗ ಹಾಗೂ ಪತಿಗೆ ನಿರಂತರ ಆರೈಕೆಯ ಕಾರಣ ಹಲವು ಸಂದರ್ಭದಲ್ಲಿ ಕೂಲಿಗೂ ಸಂಚಕಾರ. ಮತ್ತೂಂದೆಡೆ ಕಾಯಿಲೆ ಪೀಡಿತ ಮಗ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಗಣೇಶ ಶಾಲೆಗೆ ಹೋಗುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಶೈಕ್ಷಣಿಕ ಭವಿಷ್ಯದ ಮೇಲೂ ಪರಿಣಾಮ ಬೀರಿದೆ. ಇದೀಗ ಮೈಸೂರಿನ ಖಾಸಗಿ ಆಸ್ಪತ್ರೆಯ ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸಕ ಡಾ| ಕೆ.ಎಸ್‌. ಕುಮಾರ ಗಣೇಶನಿಗೆ ಮತ್ತೂಂದು ಚಿಕಿತ್ಸೆ ಅಗತ್ಯವಿದೆ ಎಂದು ಸೂಚಿಸಿದ್ದು, ತಾಯಿ ಲಕ್ಷ್ಮೀ ಕಂಗಾಲಾಗಿದ್ದಾರೆ.

ಯಾರಾದರೂ ನೆರವು ನೀಡಿ ಕುಟುಂಬದ ಕುಡಿ ಉಳಿಸಿಕೊಡುವಂತೆ ಅಂಗಲಾಚುತ್ತಿದ್ದಾಳೆ. ಸಹಾಯ ಮಾಡಲು ಇಚ್ಛಿಸುವ ಸಾರ್ವಜನಿಕರು ಲಕ್ಷ್ಮೀ ರಮೇಶ ಸರಸಂಬಿ, ಮೊ. 9482261459, ವಿಜಯಪುರ ಕಾರ್ಪೋರೇಶನ್‌ ಬ್ಯಾಂಕ್‌, ಬ್ಯಾಂಕ್‌ ಖಾತೆ ಸಂಖ್ಯೆ: 520101251112339, ಐಎಫ್‌ಎಸ್‌ಸಿ ಸಂಖ್ಯೆ : ಸಿಓಆರ್‌ಪಿ0003423 ಇಲ್ಲಿಗೆ ಆರ್ಥಿಕ ಸಹಾಯ ಮಾಡುವಂತೆ ಕೋರಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.