ಹೋಟೆಲ್‌-ಕಿರಾಣಿ ಅಂಗಡಿ ಮೇಲೆ ದಾಳಿ


Team Udayavani, Oct 7, 2018, 3:56 PM IST

vij-2.jpg

ಸಿಂದಗಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ| ಮಲ್ಲನಗೌಡ ಬಿರಾದಾರ ನೇತೃತ್ವದ ತಂಡ ಪಟ್ಟಣದ ಹೋಟೆಲ್‌ ಮತ್ತು ಕಿರಾಣಿ ಅಂಗಡಿಗಳ ಮೇಲೆ ದಿಢೀರನೆ ದಾಳಿ ಮಾಡಿ ಪರಿಶೀಲಿಸಿದ
ಘಟನೆ ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಶನಿವಾರ ನಡೆದಿದೆ.

ಪಟ್ಟಣದ ವಿವೇಕಾನಂದ ವೃತ್ತದ ಬಳಿ ಇರುವ ಎರಡು ಹೋಟೆಲ್‌ ಮತ್ತು ಮೂರು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಅಲ್ಲಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು. ರಾಹುಲ್‌ ಲಿಂಗಾಯತ
ಖಾನಾವಳಿ ಮೇಲೆ ದಾಳಿ ಮಾಡಿದಾಗ ಹೋಟೆಲ್‌ ಮಾಲಿಕ ಹೋಟೆಲ್‌ ನಡೆಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಆಹಾರ ಪರವಾನಿಗೆ ನೋಂದಣಿ ಪಡೆಯದಿರುವುದು ಬೆಳಕಿಗೆ ಬಂದಿದೆ. 

ರಾಹುಲ್‌ ಲಿಂಗಾಯತ ಖಾನಾವಳಿಯಲ್ಲಿ ಅವಧಿ ಮೀರಿದ ತಂಪು ಪಾನೀಯಗಳಾದ ಸ್ಪೆಟ್‌ 750 ಎಂಎಲ್‌ 7 ಬಾಟಲಿಗಳು, ತಮ್‌ಸಪ್‌ 750 ಎಂಎಲ್‌ 10 ಬಾಟಲಿಗಳು, 2.5 ಲೀ. 2 ಬಾಟಲಿಗಳು, ಫಂಟಾ 750 ಎಂಎಲ್‌ 6 ಬಾಟಲಿಗಳು, ಪೆಪ್ಸಿ 2.25 ಲೀ. 2 ಬಾಟಲಿಗಳು, 1.25 ಲೀ. 3 ಬಾಟಲಿಗಳನ್ನು ವಶ ಪಡಿಸಿಕೊಂಡಿದ್ದಾರೆ.

ರಾಹುಲ್‌ ಲಿಂಗಾಯತ ಖಾನಾವಳಿ ಮಾಲೀಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಆಹಾರ ಪರವಾನಿಗೆ ನೋಂದಣಿ ಪಡೆಯದಿರುವುದು ಮತ್ತು ಡೇಟ್‌ ಡಿಬಾರಾದ ತಂಪು ಪಾನೀಯಗಳನ್ನು ಮಾರಾಟ ಮಾಡಲು ಇಟ್ಟಿರುವುದರಿಂದ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಲ್ಲದೇ ಹೋಟೆಲ್‌ನಲ್ಲಿದ್ದ ಇಡ್ಲಿ ರವೆ ಮತ್ತು ಬಿಸ್ಕತ್ತಿನ ಮಾದರಿಗಳನ್ನು ವಶಪಡಿಸಿಕೊಂಡು ಆಹಾರ ಗುಣಮಟ್ಟದ ಪರೀಕ್ಷೆಗಾಗಿ ಆಹಾರ ಮಾದರಿಯನ್ನು ಬೆಳಗಾವಿಯಲ್ಲಿರುವ ವಿಭಾಗೀಯ ಆಹಾರ ಸುರಕ್ಷತಾ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ವಿವೇಕಾನಂದ ವೃತ್ತದಲ್ಲಿರುವ ವೈಭವ ಉಡಪಿ ಹೋಟೆಲ್‌, ಕಿರಾಣಿ ಅಂಗಡಿಗಳಾದ ಗಣೇಶ ಟ್ರೇಡರ್ಸ, ರಾಜಲಕ್ಷ್ಮಿಕಿರಾಣಿ, ಪಿ.ಎ.ಲೋಣಿ ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆ ಮಾಡಿದರು. ಇಲ್ಲಿ ಯಾವುದೇ ತೆರನಾದ ಪ್ರಕರಣಗಳು ಸಿಗದ ಕಾರಣ ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಹೋಟೆಲ್‌ಗ‌ಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಆಹಾರ ತಯಾರಿಸಿ ಕೊಡಬೇಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಒಳಾಂಗಣ ಮತ್ತು ಹೊರಾಂಗಣದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು.

ಚಹಾ ಮಾಡಲಿಕ್ಕೆ ಬಳಸುವ ಚಹಾ ಪುಡಿಯನ್ನು ತಣ್ಣೀರಿನಲ್ಲಿ ಹಾಕಿದಾಗ ಬಣ್ಣ ಬಿಟ್ಟರೆ ಅದು ಅಪಾಯಕಾರಿಯಾಗಿದ್ದು ಅಂತ ಚಹಾಪುಡಿ ಬಳಸಬಾರದು. ಡೇಟ್‌ ಡಿಬಾರಾದ ತಂಪು ಪಾನೀಯಗಳನ್ನು ಮಾರಾಟ ಮಾಡಬಾರದು, ಆಹಾರ ಪದಾರ್ಥಗಳನ್ನು ತಯಾರು ಮಾಡಲು ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಕೆ ಮಾಡಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಹೋಟೆಲ್‌
ಮಾಲೀಕರಿಗೆ ಮಾಹಿತಿ ನೀಡಿದರು. ಹೋಟೆಲ್‌, ಕಿರಾಣಿ ಅಂಗಡಿ ಮತ್ತು ಬೇಕರಿಗಳನ್ನು ನೂತನವಾಗಿ ಪ್ರಾರಂಭಿಸುವವರು ಮೊದಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಆಹಾರ ಪರವಾನಿಗ್ರೆ ಅಥವಾ ನೋಂದಣಿ ಪತ್ರ ಪಡೆಯಬೇಕು.

ನೋಂದಣಿ ಪತ್ರ ಪಡೆಯದಿದ್ದವರು ಕೂಡಲೇ ಪ್ರಾಧಿಕಾರದಿಂದ ನೋಂದಣಿ ಪತ್ರ ಪಡೆದುಕೊಳ್ಳಬೇಕು. ದಾಳಿ ಮಾಡಿದ ಸಂದರ್ಭದಲ್ಲಿ ನೋಂದಣಿ ಪತ್ರ ಇಲ್ಲದಿದ್ದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮ 2011ರ ಅಡಿಯಲ್ಲಿ ಆಹಾರ ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂತೆ-ಸಂತೆಗೆ ಹೋಗಿ ಮತ್ತು ಬೀದಿ ಬೀದಿಗಳಲ್ಲಿ ಆಹಾರ ಧಾನ್ಯಗಳನ್ನು, ಕಾಳು-ಕಡಿ ಮಾರಾಟ ಮಾಡುವವರು,
ಹಣ್ಣಿನ ವ್ಯಾಪಾರ ಮಾಡುವವರು, ಮಾಂಸ ವ್ಯಾಪಾರ ಮಾಡುವವರು ಕೂಡಾ ಆಹಾರ ವ್ಯಾಪಾರಸ್ಥರಾಗಿದ್ದು ಅವರು ಕೂಡಾ ಪ್ರಾಧಿಕಾರದಿಂದ ಪರವಾನಿಗೆ ಪತ್ರ ಪಡೆದುಕೊಳ್ಳ ಬೇಕು ಎಂದು ತಿಳಿಸಿದ್ದಾರೆ.

ಸಿಂದಗಿ ತಾಲೂಕು ಆಹಾರ ಸುರಕ್ಷತಾಧಿಕಾರಿ ರಮೇಶ ಗೆಣ್ಣೂರ, ಬಸವನಬಾಗೇವಾಡಿ ತಾಲೂಕಿನ ಆಹಾರ ಸುರಕ್ಷತಾಧಿಕಾರಿ ಈ.ಎಚ್‌.ಪಾರೂಕಿ ಇದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.