ಸಚಿವರ ತವರಲ್ಲಿ ನಿಂತಿಲ್ಲ ಬೀದಿ ಶೌಚ


Team Udayavani, Oct 10, 2018, 12:40 PM IST

vij-2.jpg

ವಿಜಯಪುರ: ಸ್ವತ್ಛ ಭಾರತದ ಭಾಗವಾದ ಬಯಲು ಶೌಚ ಮುಕ್ತ ಭಾರತ ಕಟ್ಟುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಕನಸು. ಈ ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕವಾಗಿ ನೈರ್ಮಲ್ಯ ಖಾತೆ ಸೃಷ್ಟಿಸಿ ಸಚಿವರನ್ನು ನೇಮಿಸಿದ್ದಾರೆ. ಆದರೆ ಪ್ರಸಕ್ತ ವರ್ಷವೇ 40 ಕೋಟಿ ರೂ. ಖರ್ಚು ಮಾಡಿದರೂ ಕೇಂದ್ರದ ನೈರ್ಮಲ್ಯ ಖಾತೆ ಸಚಿವರ
ತವರಿನಲ್ಲೇ ಘೋಷಿತ ಗ್ರಾಮಗಳಲ್ಲೇ ಇನ್ನೂ ಬೀದಿ ಶೌಚ ನಿಂತಿಲ್ಲ.

ಕೇಂದ್ರ ಸರ್ಕಾರದ ನೈರ್ಮಲ್ಯ ಖಾತೆ ಸಚಿವ ರಮೇಶ ಜಿಗಜಿಣಗಿ ಕರ್ನಾಟಕ ರಾಜ್ಯದವರೇ ಆಗಿದ್ದು ವಿಜಯಪುರ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವ ಹಿರಿಯ ಸಚಿವ. ನೈರ್ಮಲ್ಯ ಸಚಿವರ ತವರು ರಾಜ್ಯ ಕರ್ನಾಟಕ ಈಗಾಗಲೇ
20 ಜಿಲ್ಲೆಗಳು ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಿದ್ದು, 7 ಜಿಲ್ಲೆಗಳು ಘೋಷಣೆಗೆ ಕಾಯುತ್ತಿವೆ.

ಉತ್ತರ ಕರ್ನಾಟಕ ಭಾಗದ ವಿಜಯಪುರ, ಬೀದರ ರಾಯಚೂರು ಜಿಲ್ಲೆಗಳಿಗೆ ಶೌಚಾಲಯ ನಿರ್ಮಾಣಕ್ಕೆ ನವೆಂಬರ್‌ ಅಂತ್ಯದವರೆಗೆ ಗಡುವು ನೀಡಲಾಗಿದೆ. ಈ ಅವಧಿಯಲ್ಲಿ ಸಂಪೂರ್ಣವಾಗಿ ಪ್ರತಿ ಕುಟುಂಬಗಳು ಶೌಚಾಲಯ ಹೊಂದಿ ಕರ್ನಾಟಕ ಸಂಪೂರ್ಣ ಬಯಲು ಶೌಚ ಮುಕ್ತ ರಾಜ್ಯ ಎಂಬ ಗುರಿ ಸಾಧಿಸುವಂತೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಇದಕ್ಕಾಗಿ ಸರ್ಕಾರ ನೂರಾರು ಕೋಟಿ ರೂ. ಅನುದಾನ ನೀಡುತ್ತಿದ್ದು, ಹಣ ಬಳೆಯತ್ತ ಅಧಿಕಾರಿಗಳು ಚಿತ್ತ ನೆಟ್ಟಿದ್ದಾರೆ.

ಆದರೆ ಬಯಲು ಶೌಚಾಲಯ ಮುಕ್ತ ಗ್ರಾಮ ಎಂದು ಘೋಷಿಸಿಕೊಂಡ ಹಳ್ಳಿಗಳಲ್ಲೇ ಬಯಲು ಶೌಚ ಮುಕ್ತವಾಗಿಯೇ ನಡೆದಿದೆ. ಅಧಿಕಾರಿಗಳು ಹಣ ಬಳಕೆ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣದ ಗುರಿ ಸಾಧನೆಗೆ ಆದ್ಯತೆ ನೀಡುತ್ತಿದ್ದಾರೆಯೇ ಹೊರತು, ಬಯಲು ಶೌಚ ಮುಕ್ತಗೊಳಿಸುವ ಆಶಯ ಈಡೇರಿಸುವಲ್ಲಿ ಆಸಕ್ತಿ ತೋರಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಬಯಲು ಶೌಚ ಮುಕ್ತ ಗ್ರಾಮ ಯೋಜನೆಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಬಸವನಬಾಗೇವಾಡಿ ಶೇ. 100 ಸಾಧನೆ ಮಾಡಿದ್ದರೆ, ಇಂಡಿ, ವಿಜಯಪುರ, ಮುದ್ದೇಬಿಹಾಳ ಶೇ. 90 ಗಡಿ ದಾಡಿದೆ. ಸಿಂದಗಿ ಇನ್ನೂ ಶೇ. 80 ಗಡಿಯಲ್ಲಿ ನಿಂತಿದೆ. ಇದಕ್ಕಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸರ್ಕಾರ 52 ಕೋಟಿ ರೂ. ನೀಡಿದ್ದು, ಸುಮಾರು 40 ಕೋಟಿ ರೂ. ಖರ್ಚು ಮಾಡಿದ್ದರೂ ಇನ್ನೂ ಬಯಲು ಶೌಚಾಲಯಕ್ಕೆ ಮುಕ್ತಿ ದೊರಕಿಲ್ಲ.

ವಿಜಯಪುರ ಜಿಲ್ಲೆಯಲ್ಲೇ ಶೇ. 93.54 ಗುರಿ ಸಾಧನೆ ಮಾಡಿದ್ದು, 16,777 ಕುಟುಂಬಗಳು ಮಾತ್ರ ವೈಯಕ್ತಿ ಶೌಚಾಲಯ ನಿರ್ಮಾಣ ಬಾಕಿ ಇದೆ ಎಂದು ಸರ್ಕಾರಿ ದಾಖಲೆಗಳು ಹೇಳುತ್ತವೆ. ಸರ್ಕಾರ ಗುರಿ ಸಾಧನೆಗೆ ತಾಕೀತು ಮಾಡುತ್ತಿರುವ ಕಾರಣ ಸಾಧನೆಯ ದಾಖಲೆ ಮಾಡುವ ಧಾವಂತದಲ್ಲಿ ಅಧಿಕಾರಿಗಳು ಸರ್ಕಾರ ನೀಡಿದ ಅನುದಾನ ಬಳಕೆ ಮಾಡುವ ಆರ್ಥಿಕ ಗುರಿ ಸಾಧನೆಗೆ ಸರ್ಕಾರಿ ದಾಖಲೆಯಲ್ಲಿ ಬಯಲು ಶೌಚಾಲಯ ಮುಕ್ತ ಗ್ರಾಮಗಳು ಎಂದು ಘೋಷಣೆ ಮಾಡಲು ಆರಂಭಿಸಿದ್ದಾರೆ. ವಾಸ್ತವಿಕವಾಗಿ ಜಿಲ್ಲೆಯಲ್ಲಿ ಬಯಲು ಶೌಚಮುಕ್ತ ಘೋಷಿತ ಗ್ರಾಮಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಯಲು ಶೌಚ ನಿಂತಿಲ್ಲ.

ಜಿಲ್ಲಾ ಕೇಂದ್ರಕ್ಕೆ ಕೂಗಳತೆ ದೂರದಲ್ಲಿರುವ ತೊರವಿ ಗ್ರಾಮ ಬಯಲು ಶೌಚ ಮುಕ್ತ ಎಂದು ಸರ್ಕಾರಿ ದಾಖಲೆಯಲ್ಲಿ ಸೇರ್ಪಡೆ ಆಗಿದೆ. ಆದರೆ ವಾಸ್ತವಿಕವಾಗಿ ಘೋಷಿತ ಬಹುತೇಕ ಹಳ್ಳಿಗಳಲ್ಲಿ ಇನ್ನೂ ರಸ್ತೆ ಬದಿಗಳು, ಮುಳ್ಳಿನ ಪೊದೆಗಳು ಇನ್ನೂ ಬಯಲು ಶೌಚಾಲಯ ಜೀವಂತಕ್ಕೆ ಸಾಕ್ಷಿ ನೀಡುತ್ತವೆ. ಸರ್ಕಾರದ ಸಾಧನೆ ಹಣ ಖರ್ಚು ಮಾಡಲು, ಕಾಗದದಲ್ಲಿ ಸಾಧನೆ ಮೆರೆಯಲು ಎಂದು ಅಣಕವಾಡುತ್ತಿದೆ. ಇನ್ನಾದರೂ ಸರ್ಕಾರ ಮತ್ತು ಅಧಿಕಾರಿಗಳು ಧಾವಂತದ ಸಾಧನೆ-ದಾಖಲೆ ಮಾಡುವುದಕ್ಕಿಂತ ವಾಸ್ತವಿಕ ನೆಲೆಗಟ್ಟಿನಲ್ಲಿ ಸಾಧನೆ ಮಾಡಬೇಕಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.