ಎಸಿ ಕಚೇರಿ ಆರಂಭಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ


Team Udayavani, Oct 10, 2018, 1:09 PM IST

vij-4.jpg

ಮುದ್ದೇಬಿಹಾಳ: ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಿಸುವಂತೆ ಆಗ್ರಹಿಸಿ ಅ. 10ರಂದು ಬೆಳಗ್ಗೆ 10:30ಕ್ಕೆ
ಬೃಹತ್‌ ಮೆರವಣಿಗೆ ನಡೆಸಲಾಗುತ್ತಿದೆ. ಬಸವೇಶ್ವರ ವೃತ್ತದಲ್ಲಿ ಒಂದು ಘಂಟೆ ರಸ್ತಾ ರೋಖೋ ಮಾಡಿ ನಂತರ
ತಹಶೀಲ್ದಾರ್‌ಗೆ ಮನವಿ ನೀಡಲಾಗುತ್ತದೆ ಎಂದು ಎಸಿ ಕಚೇರಿ ಹೋರಾಟಗಾರರು ತಿಳಿಸಿದರು.

ಇಲ್ಲಿನ ಗಾರ್ಡನ್‌ನಲ್ಲಿ ಪೂರ್ವಭಾವಿ ಸಭೆ ನಡೆಸಿ ನಂತರ ಮಾತನಾಡಿದ ಪ್ರಮುಖ ಹೋರಾಟಗಾರ ನಗರಾಭಿವೃದ್ಧಿ ಯುವ ವೇದಿಕೆ ಸಂಚಾಲಕ ಬಸಯ್ಯಸ್ವಾಮಿ ನಂದಿಕೇಶ್ವರಮಠ, ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಬಿಜೆಪಿ, ಜೆಡಿಎಸ್‌ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ಆಡಳಿತದ ಅನುಕೂಲಕ್ಕಾಗಿ ರಾಜ್ಯಾದ್ಯಂತ ಹತ್ತು ಕಡೆಗಳಲ್ಲಿ
ಉಪ ವಿಭಾಗಾಧಿಕಾರಿಗಳ ಕಚೇರಿಗಳನ್ನು ಆರಂಭಿಸಬೇಕು ಎಂದು ತೀರ್ಮಾನಿಸಿದಾಗ ಆ ಹತ್ತರಲ್ಲಿ ಮುದ್ದೇಬಿಹಾಳ ಕೂಡಾ ಒಂದಾಗಿತ್ತು. ಅಂದಿನ ಸರಕಾರಗಳು ಅತಂತ್ರ ಸ್ಥಿತಿಯಲ್ಲಿ ಇದ್ದ ಕಾರಣ ಈ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳಲಿಲ್ಲ. ಈ ಹಿಂದಿನ ಆಡಳಿತಗಳ ಅವಧಿಯಲ್ಲಿ ಇದ್ದವರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸದ ಕಾರಣದಿಂದಾಗಿ ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಕ್ಕೆ ವಿಳಂಬವಾಗಿದೆ. ಸರಕಾರದ ಈ ವಿಳಂಬ ನೀತಿಯಿಂದ ಈ ಭಾಗದ ರೈತರಿಗೆ ಬಹಳ ಅನ್ಯಾವಾಗುತ್ತಿದೆ ಎಂದರು. ಉಪ ವಿಭಾಗಾಧಿಕಾರಿ ಕಚೇರಿಗೆ ಮುದ್ದೇಬಿಹಾಳ ಸೂಕ್ತ ಸ್ಥಳವಾಗಿದೆ.

ಆದ್ದರಿಂದ ಆದಷ್ಟು ಬೇಗನೆ ನಗರದಲ್ಲಿ ಈಗಾಗಲೇ ನ್ಯಾಯಾಲಯದ ಕಟ್ಟಡ, ಹಳೆ ತಹಶೀಲ್ದಾರ್‌ ಕಚೇರಿ ಮತ್ತು
ಈಗಿನ ಹೊಸ ತಹಶೀಲ್ದಾರ್‌ ಕಚೇರಿಯಲ್ಲಿ ತಕ್ಷಣ ಉಪ ವಿಭಾಗಾಧಿಕಾರಿಗಳ ಕಚೇರಿ ಆರಂಭಿಸಬಹುದು. ಇದಲ್ಲದೆ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಸಾವಿರಕ್ಕೂ ಹೆಚ್ಚು ಭೂನ್ಯಾಯಗಳು ಇತ್ಯರ್ಥವಾಗದೇ ನನೆಗುದುಗೆ ಬಿದ್ದಿವೆ. ಈಗ ಇಂತಹ ಪ್ರಕರಣಗಳ ವಿಚಾರಣೆಗೆ ಈಗ ವಿಜಯಪುರದಿಂದ ಅಧಿಕಾರಿಗಳು ಬರುತ್ತಿದ್ದಾರೆ.

ಒಮ್ಮೊಮ್ಮೆ ಇವರು ಬರುವದಿಲ್ಲ ಹೀಗಾಗಿ ಸಾಕಷ್ಟು ಖರ್ಚು ಮಾಡಿಕೊಂಡ ಬಂದ ರೈತರು ನಿರಾಶರಾಗುತ್ತಾರೆ. ಪ್ರಕರಣ
ನನೆಗುದಿಗೆ ಬಿದ್ದು ರೈತರ ದೈನಂದಿನ ಜೀವನಕ್ಕೆ ಬಹಳ ತೊಂದರೆಯಾಗುತ್ತಿದೆ. ಹೀಗಾಗಿ ಬರುವ ಹಣಕಾಸು ವರ್ಷದಲ್ಲಿಯೇ ಮುದ್ದೇಬಿಹಾಳದಲ್ಲಿ ನಿಯೋಜಿತ ಎಸಿ ಕಚೇರಿ ಆರಂಭಿಸಬೇಕೆಂದು ಸರಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ಹೋರಾಟದಲ್ಲಿ ನಗರದ ಎಲ್ಲ ಸಮಾಜಗಳ ಮುಖಂಡರು, ಎಲ್ಲ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಮಾಜಿ ಸೈನಿಕರು, ವ್ಯಾಪಾರಸ್ಥರ ಸಂಘಗಳು, ಯುವಕ ಸಂಘಗಳು, ಮಹಿಳಾ ಸಂಘಗಳು, ನಿವೃತ್ತ ನೌಕರರು, ಮುಂತಾದ ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಳಲಿದ್ದಾರೆ. ಹೋರಾಟದಲ್ಲಿ ಎ.ಸಿ ಕಚೇರಿ ಆರಂಭದ ಜೊತೆಗೆ, ಆರ್‌ಟಿಒ ಕಚೇರಿ ಮತ್ತು ಮುದ್ದೇಬಿಹಾಳ ನಗರ ಪೊಲೀಸ್‌ ಠಾಣೆಗೂ ಬೇಡಿಕೆ ಇಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಧುರೀಣರಾದ ಪ್ರಭು ಕಡಿ, ಎಸ್‌.ಎನ್‌. ಪಟ್ಟಣಶೆಟ್ಟಿ (ವಕೀಲರು), ಎಸ್‌.ಎಂ. ಬನೋಶಿ, ಎಸ್‌.ಎಂ.
ಚಿಲ್ಲಾಳಶೆಟ್ಟರ (ವಕೀಲರು), ಶಿವಬಸಪ್ಪ ಸಜ್ಜನ, ಚಂದ್ರಶೇಖರ ಅಂಬಿಗೇರ, ರಾಜು ಬಳ್ಳೊಳ್ಳಿ, ಮಹಾಂತೇಶ ಸಜ್ಜನರ, ಪುಂಡಲೀಕ ಮುರಾಳ, ಗುಲಾಂ ಧಪೇದಾರ, ಮಂಜುನಾಥ ಕುಂದರಗಿ, ಹನುಮಂತ ನಲವಡೆ, ರಾಜು ಹೊಳಿ, ಪುನೀತ ಹಿಪ್ಪರಗಿ, ಬಿ.ಎಚ್‌. ಚಲವಾದಿ, ಪರಶುರಾಮ ಕೊನ್ನೂರ, ಮಲ್ಲಪ್ಪ ಹೊಸಮನಿ, ಮಹಾಂತೇಶ ಬೂದಿಹಾಳಮಠ, ವೀರೇಶ ಗುರುಮಠ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.