ಆನ್‌ಲೈನ್‌ ಔಷಧ ವ್ಯಾಪಾರ ಮಾರಕ


Team Udayavani, Oct 15, 2018, 1:59 PM IST

vij-1.jpg

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳಿಗೆ ಆನ್‌ಲೈನ್‌ ಮೂಲಕ ಔಷಧ ವಹಿವಾಟು ಮಾರಕ ಪರಿಸ್ಥಿತಿ ತಂದಿದೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು. ನಗರದ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ 36ನೇ ವಾರ್ಷಿಕ ಮಹಾಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಔಷಧ ಆನ್‌ಲೈನ್‌ ವ್ಯಾಪಾರದಿಂದ ಅಧಿಕೃತ ಔಷಧ ವ್ಯಾಪಾರಸ್ಥರು ಸಮಸ್ಯೆಗೆ ಸಿಲುಕಿದ್ದಾರೆ. ಡಿ-ಫಾರ್ಮ್ಪ ದವೀಧರನಾಗಿ ಔಷಧ ವ್ಯಾಪಾರಿ ಆಗಿರುವ ನನಗೆ ಪ್ರಸಕ್ತ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳು ಅನುಭವಿಸುತ್ತಿರುವ ಎಲ್ಲ ಸಮಸ್ಯೆಗಳ ಅರಿವಿದೆ. ಈ ವಿಷಯದಲ್ಲಿ ಔಷಧ ವ್ಯಾಪಾರಿಗಳೆಲ್ಲ ಸಂಘಟಿತವಾಗಿ ಹೋರಾಟಕ್ಕೆ ಅಣಿಯಾಗಬೇಕು. ಆಗಲೇ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲು ಸಾಧ್ಯವಿದ್ದು, ನಿಮ್ಮ ಹೋರಾಟಕ್ಕೆ ನಾನು ಸದಾ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.
 
ಈಚೆಗೆ ವೈದ್ಯರು ತಮ್ಮ ನರ್ಸಿಂಗ್‌ ಹೋಂಗಳಲ್ಲೇ ಸ್ವಂತ ಔಷಧ ಅಂಗಡಿ, ಪ್ರಯೋಗಾಲಯ ಕೂಡ ತೆರೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಔಷಧ ವ್ಯಾಪಾರ ಹಾಗೂ ಪ್ರಯೋಗಾಲಯದ ಮಾಲೀಕರು ನಿರುದ್ಯೋಗಿಗಳಾಗಿ ಭವಿಷ್ಯದ ಜೀವನಕ್ಕೆ ಸಂಕಟ ಪಡುವಂತಾಗಿದೆ ಎಂಬ ಸಮಸ್ಯೆ ಅರಿವು ನನಗಿದೆ ಎಂದರು. ಜನ ಸಾಮಾನ್ಯರಲ್ಲಿ ಔಷಧ ವ್ಯಾಪಾರಿಗಳಲ್ಲಿ ಅಪಾರ ವಿಶ್ವಾಸಾರ್ಹತೆ ಇದ್ದು, ಸಣ್ಣ ಆರೋಗ್ಯ ಸಮಸ್ಯೆಗೂ ಜನರು ತಕ್ಷಣ ಬರುವುದೇ ಔಷಧ ಅಂಗಡಿಗೆ. ವೈದ್ಯರು ಇಲ್ಲದ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳೇ ಪ್ರಥಮ ಚಿಕಿತ್ಸಕರಂತೆ ಕೆಲಸ ಮಾಡುತ್ತಿದ್ದಾರೆ. ಇದು ಜನರು ಔಷಧ ವ್ಯಾಪಾರಸ್ಥರ ಮೇಲೆ ಇರಿಸಿರುವ ಅಪಾರ ನಂಬಿಕೆಯ ಒಂದು ನಿದರ್ಶನ. ಆನ್‌ಲೈನ್‌ ಔಷಧ ವ್ಯಾಪಾರದಿಂದ ಈ ಎಲ್ಲ ನೈಜ ಬಾಂಧವ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಔಷಧ ಹಿರಿಯ ಉದ್ಯಮಿ ಡಿ.ಎಸ್‌. ಗುಡ್ಡೋಡಗಿ ಅವರಿಗೆ ವಾಣಿಜ್ಯ ಭಾಸ್ಕರ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಿ.ಎಸ್‌.ಗುಡ್ಡೋಡಗಿ, ಔಷಧ ವ್ಯಾಪಾರಸ್ಥರು ನನ್ನ ಮೇಲೆ ಅಭಿಮಾನವಿರಿಸಿ ಪ್ರಶಸ್ತಿ ನೀಡುತ್ತಿರುವುದಕ್ಕೆ ನಾನು ಚಿರಋಣಿ ಎಂದು ತಮ್ಮ ಜೀವನಾನುಭವಗಳನ್ನು ಪ್ರೇಕ್ಷಕರ ಮುಂದೆ ಹಂಚಿಕೊಂಡರು. ಔಷಧ ವ್ಯಾಪಾರಸ್ಥರ ಸಂಘದ ರಾಜ್ಯಾಧ್ಯಕ್ಷ ರಘುನಾಥರೆಡ್ಡಿ, ಸಂಘದ ಜಿಲ್ಲಾಧ್ಯಕ್ಷ ಕೆ.ಆರ್‌.ಎತ್ತಿನಮನಿ, ಕಲಬುರಗಿ ವಲಯದ ಉಪ ಔಷಧ ನಿಯಂತ್ರಕ ಗೋಪಾಲ ಭಂಡಾರಿ, ಸಹಾಯಕ ಔಷಧ ನಿಯಂತ್ರಕ ಅಣ್ಣಾರಾವ್‌ ನಾಯಕ, ಸಹಾಯಕ ಔಷಧ ನಿಯಂತ್ರಕಿ ಶ್ವೇತಾ ನಾಗಠಾಣ, ಮನೋಹರ ಶೆಟ್ಟಿ, ಗಂಗಾಧರ ಸಾಲಕ್ಕಿ, ರಮೇಶ ಯಳಮೇಲಿ, ವಿ.ಜಿ. ಕೋರಚಗಾಂವ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.