ಹೊರ ಗುತ್ತಿಗೆ ಕಾರ್ಮಿಕರಿಗೆ ವೇತನ ಪಾವತಿಸಿ


Team Udayavani, Oct 18, 2018, 12:15 PM IST

vij-2.jpg

ಬಸವನಬಾಗೇವಾಡಿ: ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುವ ಹೊರ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೇತನ ನೀಡುವಲ್ಲಿ ವಿಳಂಬ ಮಾಡಬೇಡಿ, ಅವರಿಗೆ ಸಮರ್ಪಕ ವೇತನ ನೀಡಬೇಕು ಎಂದು ಪುರಸಭೆ ಸದಸ್ಯ ಪರಶುರಾಮ ಅಡಗಿಮನಿ ಹೇಳಿದರು.

ಬುಧವಾರ ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಜನತೆಗೆ ನಿತ್ಯ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಕಾರ್ಮಿಕರ ವೇತನ ಸೇರಿದಂತೆ ಪಟ್ಟಣದ ಸಾರ್ವಜನಿಕರಿಗೆ ಅಗತ್ಯವಿರುವ ಕೆಲಸ ಕಾರ್ಯಗಳಿಗೆ ಅಡಚನೆಯಾಗದ ರೀತಿಯಲ್ಲಿ ಮುಖ್ಯಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಬಸವನಬಾಗೇವಾಡಿ ತಾಲೂಕಿನ ಪತ್ರಕರ್ತರಿಗೆ ಪಟ್ಟಣದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡುವ ಸಲುವಾಗಿ ಪತ್ರಕರ್ತರು ಹಲವಾರು ಬಾರಿ ಪುರಸಭೆಗೆ ನಿವೇಶನ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಪತ್ರಕರ್ತರಿಗೆ ನಿವೇಶನ ನೀಡುವಲ್ಲಿ ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದಿರಿ ಎಂದು ಕೇಳಿದಾಗ ಮುಖ್ಯಾಧಿಕಾರಿ ಬಿ.ಎ. ಸೌದಾಗಾರ ಅವರು ಈಗಾಗಲೇ ಅವರ ಮನವಿಗೆ ಅನುಗುಣವಾಗಿ ತೆಲಗಿ ರಸ್ತೆಯ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದ ಬಳಿ ಸುಮಾರು 4ರಿಂದ 5 ಗುಂಟೆ ಜಾಗ ನೀಡಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಅವರ ಸಂಘಕ್ಕೆ ಆ ಜಾಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು. ಪಟ್ಟಣದಲ್ಲಿ ನೈರ್ಮಲಿಕರಣದ ಕೆಲಸ ನಿರ್ವಹಿಸುವ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಪೂರೈಸುವ ಟೆಂಟರ್‌ ಅವಧಿಯನ್ನು
ಮುಂದುವರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಆಗ ಪುರಸಭೆ ಹಿರಿಯ ಸದಸ್ಯ ನೀಲು ನಾಯಕ ಮಾತನಾಡಿ, ಪಟ್ಟಣದಲ್ಲಿ ದಿನನಿತ್ಯ ನೈರ್ಮಲಿ ಕರಣದ ಕೆಲಸ ನಿರ್ವಹಿಸುವ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಉತ್ತಮವಾಗಿರಬೇಕು. ಅವರ ಆರೋಗ್ಯದ ಬಗ್ಗೆ ಪುರಸಭೆ ಹೆಚ್ಚು ಗಮನ ಹರಿಸಬೇಕು. ಅವರಿಗೆ ಬೆಳಗಿನ ಉಪಹಾರ ಪೂರೈಸುವ ಟೆಂಟರ್‌ ಅವಧಿ ಮುಂದುವರಿಸಿ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಇಂದಿನ ಸಭೆ ನಡುವಳಿಕೆಗಳನ್ನು ಓದಿ ದೃಢಪಡಿಸುವುದು, ಹಿಂದಿನ ತಿಂಗಳ ಜಮಾ ಕುರಿತು ಚರ್ಚೆ ಹಾಗೂ ಜಾಹೀರಾತು ಬಿಲ್‌ ಪಾವತಿಸುವಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರ ಜೊತೆಯಲ್ಲೇ ಇನ್ನಿತರ ಕೆಲಸ ಕಾರ್ಯಗಳ ಬಗ್ಗೆಯೂ ಕೂಡಾ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಯಿತು. ಸಭೆ ಅಧ್ಯಕ್ಷಯೆನ್ನು ಅಧ್ಯಕ್ಷೆ ಫರಿಜಾನ್‌ ಚೌಧರಿ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀದೇವಿ ಲಮಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತು ಉಕ್ಕಲಿ ಸೇರಿದಂತೆ ಅನೇಕರು ಇದ್ದರು. 

ಪುರಸಭೆ ಮುಖ್ಯಾಧಿಕಾರಿ ಬಿ.ಎಸ್‌. ಸೌದಾಗರ ಸ್ವಾಗತಿಸಿದರು. ಸಭೆಯ ಸೂಚನಾ ಪತ್ರವನ್ನು ಹಾಗೂ ವರದಿ ವಾಚನವನ್ನು ಹಿರಿಯ ಆರೋಗ್ಯ ನಿರೀಕ್ಷಕ ಸಿದ್ದಾರ್ಥ ಕಳ್ಳಿಮನಿ ಓದಿದರು. ವಿಲಾಶ ರಾಠೊಡ ವಂದಿಸಿದರು.

ಟಾಪ್ ನ್ಯೂಸ್

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.