ಭಜಂತ್ರಿ ಸಮಾಜ ಏಳ್ಗೆಗೆ ಶ್ರಮಿಸುವೆ: ಮನಗೂಳಿ
Team Udayavani, Oct 26, 2018, 11:06 AM IST
ಸಿಂದಗಿ: ಭಜಂತ್ರಿ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತೋಟಗಾರಿಕೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ ಹೇಳಿದರು.
ಗುರುವಾರ ವಿದ್ಯಾನಗರದ 4ನೇ ಕ್ರಾಸ್ ನಲ್ಲಿರುವ ಭಜಂತ್ರಿ ಲೇಔಟ್ನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ರಾಂಪುರ ಪಿ.ಎ., ಎಸ್ ಸಿಪಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗುವ ಭಜಂತ್ರಿ (ಕೊರಮ) ಸಮಾಜದ ಗುರು ಶರಣ ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಭಜಂತ್ರಿ ಸಮಾಜ ಕಾಯಕ ಜೀವಿಗಳು. ಎಲ್ಲ ಶುಭ ಕಾರ್ಯಕ್ರಮಗಳಿಗೆ ಭಜಂತ್ರಿ ಸಮುದಾಯ ಪ್ರಮುಖರಾಗಿರುತ್ತಾರೆ.
ಎಲ್ಲ ಸಮುದಾಯದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸುವ ಸಮುದಾಯವಾಗಿದೆ. ಈ ಸಮುದಾಯಕ್ಕೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡ ಗುಣಮಟ್ಟದಿಂದ ಮತ್ತು ಶೀಘ್ರದಲ್ಲಿ ಪೂರ್ಣಗೊಳ್ಳಬೇಕು. ಸರಕಾರದಿಂದ ಈಗಾಗಲೇ 50 ಲಕ್ಷ ಅನುದಾನ ನೀಡಲಾಗಿದ್ದು, ಇನ್ನೂ ಹೆಚ್ಚಿಗೆ ಬೇಕಾದಲ್ಲಿ ಅನುದಾನ ಬಿಡುಗಡೆ ಮಾಡುತ್ತೇನೆ ಎಂದರು.
ನೀವು ನನಗೆ ಮತ ನೀಡಿದ ಫಲವಾಗಿ ನಾನು ಮಂತ್ರಿಯಾಗಿದ್ದೇನೆ. ಈ ಮಂತ್ರಿ ಸ್ಥಾನ ನನ್ನ ಮನೆತನಕ್ಕೆ ಮತ್ತು ಮಕ್ಕಳಿಗಲ್ಲ. ಏನೇ ಇದ್ದರು ಜನರ ಸೇವೆಗಾಗಿ. ಆನರ ಅಭಿವೃದ್ಧಿಗಾಗಿದೆ. ಆದ್ದರಿಂದ ಸಮುದಾಯದ ಅಭಿವೃದ್ಧಿಗಾಗಿ ಹೇಳಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
ಸಮಾಜದ ಹಿರಿಯ ಎಸ್.ಬಿ. ಭಜಂತ್ರಿ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ಸರಕಾರ ನೀಡಿದ ಅನುದಾನ ಸಾಲದು, ಹೆಚ್ಚಿನ ಅನುದಾನ ನೀಡಬೇಕು. ಪರಿಶಿಷ್ಟ ಜಾತಿಯಲ್ಲಿ ಬರುವ ನಮ್ಮ ಸಮುದಾಯ ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಆದ್ದರಿಂದ ಸರಕಾರಿ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ನಮ್ಮ ಸಮುದಾಯಕ್ಕೂ ಪ್ರಾಧಾನ್ಯತೆ ನೀಡಬೇಕು ಎಂದರು.
ಇದೇ ಸಂದರ್ಬಧಲ್ಲಿ ಭಜಂತ್ರಿ (ಕೊರಮ) ಸಮಾಜದ ಅಭಿವೃದ್ಧಿಗೆ ಬೇಕಾದ ಬೇಡಿಕೆಗಳ ಈಡೇರಿಕೆಗೆ ಸಮುದಾಯದ ಮುಖಂಡರು ತೋಟಗಾರಿಕೆ ಸಚಿವರಿಗೆ ಮನವಿ ಸಲ್ಲಿಸಿದರು. ಭೂಸೇನಾ ಅಭಿಯಂತರ ಗಂಗಾಧರ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ನಿರ್ಮಾಣ ಮಾಡುವಲ್ಲಿ ಸಮುದಾಯದ ಜನರ ಸಹಕಾರ ಅಗತ್ಯ ಎಂದರು. ಶಿವಮೂರ್ತಯ್ಯ ಮಠಪತಿ, ಭೀಮಣ್ಣ ಇಂಚಗೇರಿ, ಮೋಹನದಾಸ ಭಜಂತ್ರಿ, ಅಧ್ಯಕ್ಷತೆ ವಹಿಸಿದ ಸಮಾಜದ ಅಧ್ಯಕ್ಷ ನರಸಪ್ಪ ಭಜಂತ್ರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ