ಜಮೀನಿಗೆ ನೀರು, ಕೆರೆ ಭರ್ತಿಗೆ ಒತ್ತಾಯ


Team Udayavani, Nov 10, 2018, 12:08 PM IST

vij-2.jpg

ಮುದ್ದೇಬಿಹಾಳ: ನೀರಾವರಿ ಯೋಜನೆಗಳಿಗೆ ಲಕ್ಷಾಂತರ ಎಕರೆ ಫಲತ್ತಾದ ಜಮಿನು ಕಳೆದುಕೊಂಡ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಸಾವಿರಾರು ರೈತರಿಗೆ ಈ ಸರ್ಕಾರ ಅನ್ಯಾಯ ಮಾಡಿದೆ. ಸಂತ್ರಸ್ತ ರೈತರ ಜಮೀನುಗಳಿಗೆ ಕನಿಷ್ಠ ಒಂದು ಬೆಳೆಗಾದರೂ ನೀರು ಹರಿಸದೆ ತಾರತಮ್ಯ ಅನುಸರಿಸಿದೆ. ನವೆಂಬರ್‌ 14ರಂದು ಕಾಲುವೆಯಲ್ಲಿ ನೀರು ಹರಿಸುವುದನ್ನು ಬಂದ್‌ ಮಾಡುವ ತೀರ್ಮಾನ ಕೈಬಿಟ್ಟು ಮಾರ್ಚ್‌ 31ರವರೆಗೂ ಆಲಮಟ್ಟಿ ಜಲಾಶಯ ವ್ಯಾಪ್ತಿಯ ಎಲ್ಲ ಜಮೀನುಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನ ಪ್ರಕಟಿಸಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಒತ್ತಾಯಿಸಿದ್ದಾರೆ.

ಮುದ್ದೇಬಿಹಾಳ ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಎಲ್ಲ ಕೆರೆ ತುಂಬಿಸಬೇಕು ಎಂದು ಆಗ್ರಹಸಿ ರೈತರೊಂದಿಗೆ ಮುದ್ದೇಬಿಹಾಳದಿಂದ ಆಲಮಟ್ಟಿವರೆಗೆ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ, ನಂತರ ಬಸವೇಶ್ವರ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೃಷ್ಣಾ ಕೊಳ್ಳದ ನೀರಾವರಿ ಯೋಜನೆಗಳನ್ನು ಈ ಸರ್ಕಾರ ಮರೆತಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಉಕ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಬೇಕು. ಈ ಪಾದಯಾತ್ರೆ ಸರ್ಕಾರಕ್ಕೆ ಒಂದು ಎಚ್ಚರಿಕೆ ಗಂಟೆಯಾಗಿದೆ. ಒಂದು ವೇಳೆ ಮೊದಲಿನ ನಿರ್ಲಕ್ಷ್ಯ ಮುಂದುವರಿದಲ್ಲಿ ಇಡಿ ಉತ್ತರ ಕರ್ನಾಟಕದ ರೈತರನ್ನು ಒಟ್ಟುಗೂಡಿಸಿ ಬೆಳಗಾವಿ ಅಧಿವೇಶನಕ್ಕೂ ಮುನ್ನ ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈಗಾಗಲೇ ಪೂರ್ಣಗೊಂಡಿರುವ ಕಾಲುವೆ ಜಾಲಗಳ ಮೂಲಕ ನೀರು ಹರಿಸಬೇಕು ಮತ್ತು ಎಲ್ಲ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು. ಶನಿವಾರ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಸಚಿವ ಶಿವಾನಂದ ಪಾಟೀಲ ಉಸ್ತುವಾರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಬೇಡಿಕೆಗಳ ಬಗ್ಗೆ ತೀರ್ಮಾನ ಪ್ರಕಟಿಸಬೇಕು. ಬೆಳಗಾವಿ ಅಧಿವೇಶನ ಪ್ರಾರಂಭಗೊಳ್ಳುವುದರ ಒಳಗಾಗಿ ಕೃಷ್ಣಾ ಕೊಳ್ಳದ ನೀರಾವರಿ ಯೋಜನೆ ಪೂರ್ಣಗೊಳಿಸುವ ಬದ್ಧತೆ ಪ್ರದರ್ಶಿಸಬೇಕು. ಇಲ್ಲವಾದಲ್ಲಿ ಈ ಜಿಲ್ಲೆಯ 2-3 ಸಾವಿರ ರೈತರು ನನ್ನ ಜೊತೆ ನಡೆಯಲು ಗಟ್ಟಿಗರಾದಲ್ಲಿ ಇಡಿ ಉತ್ತರ
ಕರ್ನಾಟಕದ ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ಮತ್ತೋಮ್ಮೆ ಹೋರಾಟಕ್ಕೆ ಧುಮುಕುತ್ತೇನೆ ಎಂದು ಶಾಸಕರು ಘೋಷಿಸಿದರು.

ಆಲಮಟ್ಟಿ ಡ್ಯಾಂನಲ್ಲಿ 123 ಟಿಎಂಸಿ, ನಾರಾಯಣಪುರದಲ್ಲಿ 30 ಟಿಎಂಸಿ ನೀರು ಇದೆ. 20 ವರ್ಷಗಳಲ್ಲಿ ನಮ್ಮ ತಾಲೂಕಿಗೆ ಹರಿಬಿಟ್ಟದ್ದು ಕೇವಲ 3-4 ಟಿಎಂಸಿ ಮಾತ್ರ. ಇದು ನಮ್ಮ ದುರಂತ. ನಮ್ಮ ರೈತರ ದುರ್ದೈವದ ಸಂಗತಿಯಾಗಿದೆ. ಆಲಮಟ್ಟಿಯಿಂದ ನಾರಾಯಣಪುರದವರೆಗೆ ಅತಿ ಹೆಚ್ಚು ಭೂಮಿ ಕಳಕೊಂಡವರು ಈ ತಾಲೂಕಿನ ಜನರು. ಈ ಜನರಿಗೆ ಹೊಳೆದಂಡೆಯಲ್ಲಿದ್ದರೂ ಕುಡಯುವ ನೀರು ಇಲ್ಲದ ಧಾರುಣ ಸ್ಥಿತಿ ಇದೆ. ಈ ಸ್ಥಿತಿ ಹೋಗಲಾಡಿಸಲು ಸರ್ಕಾರ ಮುಂದಾಗಬೇಕು. ಈ ಭಾಗದ ಸಂಪೂರ್ಣ ನೀರಾವರಿಗೆ ಆದ್ಯತೆ ಮೇರೆಗೆ ನೀರು ಕೊಡಬೇಕು. 

ಈಗಿನ ಹೋರಾಟ ಆರಂಭ ಮಾತ್ರ ಎಂದರು. ಸಾನ್ನಿಧ್ಯ ವಹಿಸಿದ್ದ ಯರಝರಿ ಯಲ್ಲಾಲಿಂಗ ಮಠದ ಮಲ್ಲಾರಲಿಂಗ ಮಹಾಸ್ವಾಮಿಗಳು, ಬಿಜೆಪಿ ಧುರೀಣ ಶಿವಶಂಕರಗೌಡ ಹಿರೇಗೌಡರ ಮಾತನಾಡಿದರು. ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವರಾಜ ಕುಂಬಾರ, ಜಿಪಂ  ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ ಮತ್ತು ಬಸವರಾಜ ಮುರಾಳ, ಪ್ರಮುಖರಾದ ಹೇಮರಡ್ಡಿ ಮೇಟಿ, ಮಲಕೇಂದ್ರಗೌಡ ಪಾಟೀಲ, ಬಿ.ಪಿ. ಕುಲಕರ್ಣಿ, ಪ್ರಭು ಕಡಿ, ಬಾಬುಲಾಲ್‌ ಓಸ್ವಾಲ್‌, ಬಸವರಾಜ ನಂದಿಕೇಶ್ವರಮಠ, ರಾಜಶೇಖರ ಹೊಳಿ, ರಾಜು ಬಳ್ಳೊಳ್ಳಿ, ಬಸವರಾಜ ಗುಳಬಾಳ, ವಾಣಿ ಗೌಡರ, ಮನೋಹರ ತುಪ್ಪದ, ಬಿ.ಜಿ. ಜಗ್ಗಲ್‌ ಇದ್ದರು. 

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.