ಅಧಿಕಾರಿ ಸುಖ ನಿದ್ರೆ, ಸ್ವಾಮೀಜಿ ದರ್ಶನ !


Team Udayavani, Nov 11, 2018, 3:06 PM IST

vij-3.jpg

ಆಲಮಟ್ಟಿ: ಶನಿವಾರ ಇಲ್ಲಿಯ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಭವನದಲ್ಲಿ ನಡೆದ ಯುಕೆಪಿ ನೀರಾವರಿ ಸಲಹಾ ಸಮಿತಿ ಸಭೆ ಹಲವಾರು ವಿಶೇಷತೆಗಳಿಗೆ ಕಾರಣವಾಯಿತು.

ಭಾಳ ಶ್ಯಾಣೆ ಆಗ್ಬೇಡ: ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮಾತನಾಡಿ, 2015-16ನೇ ಸಾಲಿನಲ್ಲಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗದಿರುವುದರಿಂದ ಜಲಾಶಯ ಸಂಪೂರ್ಣ ತುಂಬದೇ ಇರುವುದರಿಂದ ಜಲಚರಗಳ ಸಾವಿಗೆ ಕಾರಣವಾಗಿತ್ತು. ಆದರೆ ಈ ಬಾರಿ ಜಲಾನಯನ ಪ್ರದೇಶದಲ್ಲಿ ಮಳೆಯಾದ ಪರಿಣಾಮ ಆಲಮಟ್ಟಿ ಜಲಾಶಯದಲ್ಲಿ 123.081 ಟಿಎಂಸಿ ನೀರು ಸಂಗ್ರಹವಾಗಿತ್ತು. 

ಕಳೆದ ವರ್ಷ ಇದೇ ದಿನ 119 ಟಿಎಂಸಿ ನೀರು ಸಂಗ್ರಹವಾಗಿತ್ತು, ಆದರೆ ಈಗ ನವೆಂಬರ್‌ ತಿಂಗಳಲ್ಲಿಯೇ ಜಲಾಶಯದಲ್ಲಿ ವ್ಯಾಪಕವಾಗಿ ನೀರು ಕುಸಿದಿದೆ.

ಇದರಿಂದ ನಾರಾಯಣಪುರ ಜಲಾಶಯಕ್ಕೆ ವಾಡಿಕೆಗಿಂತಲೂ ಹೆಚ್ಚು ನೀರು ಬಿಡಲು ಅಧಿಕಾರಿಗೆ ಸರ್ಕಾರ ಆದೇಶ ನೀಡಿದೆಯೋ? ಜಲ ಸಂಪನ್ಮೂಲ ಸಚಿವರು ತಿಳಿಸಿದರೋ? ನೀರಾವರಿ ಸಲಹಾ ಸಮಿತಿ ಸಭೆ ಅಧ್ಯಕ್ಷರು ಆದೇಶಿಸಿದರೋ? ಅಥವಾ ಆ ಅಧಿಕಾರಿಗಳು ಸ್ವ ಘೋಷಿತ ಕಾನೂನು ರಚನೆ ಮಾಡಿದ್ದಾರೋ ಹೇಗೆ ಎಂದು ಪ್ರಶ್ನಿಸಿ ನೀರು ಬಿಡಲು ಕಾರಣರಾಗಿರುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪದೇ ಪದೇ ಒತ್ತಾಯಿಸಿದರು.

ಇದರಿಂದ ಆಕ್ರೋಶಗೊಂಡ ತಮ್ಮದೇ ಪಕ್ಷದ ರಾಜುಗೌಡ ನಾಯಕ ಅವರು ನಡಹಳ್ಳಿಯವರವನ್ನುದ್ದೇಶಿಸಿ ಏನೀ ಭಾಳ
ಶಾಣ್ಯಾ ಆಗ್ಬೇಡ ಎಂದು ಏಕ ವಚನದಲ್ಲಿ ಹೇಳಿದ ಪ್ರಸಂಗ ನಡೆಯಿತು.

 ಜಲ ಸಂಪನ್ಮೂಲ ಸಚಿವರಿಂದ ಏನೂ ಆಗೂದಿಲ್ಲ: ಸಭೆಯಲ್ಲಿ ಪಕ್ಷಾತೀತವಾಗಿ ಶಾಸಕರುಗಳು ತಮ್ಮ ಕ್ಷೇತ್ರಗಳಲ್ಲಾಗುತ್ತಿರುವ ನೀರು ನಿರ್ವಹಣೆ, ಸಿಬ್ಬಂದಿ, ಅಧಿಕಾರಿಗಳ ಕೊರತೆ ಹೀಗೆ ಸಾಲು ಸಾಲಾಗಿ ಪ್ರಶ್ನೆಗಳ
ಸುರಿಮಳೆಗೈದರು. ಇದರಿಂದ ಮಧ್ಯಪ್ರವೇಶಿಸಿದ ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಅವರು ಇದಾವುದೂ ನಮ್ಮ ಸಚಿವರಿಂದ ಆಗುದಿಲ್ಲ ಎಂದು ಹೇಳಿದರು.

ಸಚಿವ ಶಿವಾನಂದ ಪಾಟೀಲ ಅವರು ಸಭೆಯು ನೀರಿನ ಬಳಕೆ ಬಗ್ಗೆ ಮಾತ್ರವಿದ್ದು ಕಾಲುವೆಗಳ ಹಾಗೂ ಅಧಿಕಾರಿ ಸಿಬ್ಬಂದಿಗಳ ಕೊರತೆ ಬಗ್ಗೆ ಈಗಾಗಲೇ ಜಲ ಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗಿದೆ. ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಶಾಸಕ, ಸಂಸದರನ್ನೊಳಗೊಂಡ ಸಭೆ ನಡೆಸಲು ಈಗಾಗಲೇ ಸಚಿವರಿಗೆ ಪತ್ರ ಬರೆದಿದ್ದೇನೆ ಮತ್ತು ಇನ್ನೊಮ್ಮೆ ಅವರೊಂದಿಗೆ ಮಾತನಾಡಿ ಸಭೆ ನಡೆಸಲು ದಿನಾಂಕ ನಿಗದಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೈತರ ಅಭಿಪ್ರಾಯ: ಹಿಂಗಾರು ಹಂಗಾಮಿಗೆ ರೈತರ ಜಮೀನುಗಳಿಗೆ ನೀರುಣಿಸಲು ನಡೆದ ಸಲಹಾ ಸಮಿತಿ ಸಭೆಯ ಆರಂಭಕ್ಕೂ ಮುಂಚೆ ವಿಜಯಪುರ ಹಾಗೂ ಬಾಗಲಕೋಟೆ, ಯಾದಗಿರಿ, ರಾಯಚೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತ ಮುಖಂಡರು ಹಿಂಗಾರು ಹಾಂಗಾಮಿಗೆ ನೀರು ಕೊಡಲೇಬೇಕು ಎಂದು ಕಚೇರಿ ಎದುರಿನಲ್ಲಿ ಹೋರಾಟ ಆರಂಭಿಸಿದ್ದರು.
 
ಇದನ್ನರಿತ ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರು ಪೊಲೀಸ್‌ ಅಧಿಕಾರಿಗಳಿಗೆ ಕರೆದು ರೈತ ಮುಖಂಡರನ್ನು ಸಭೆಗೆ ಕರೆದುಕೊಂಡು ಬರುವಂತೆ ತಿಳಿಸಿದರು.

ಸಭೆಗೆ ಆಗಮಿಸಿದ್ದ ರೈತ ಮುಖಂಡರನ್ನು ಒಬ್ಬೊಬ್ಬರಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಕೋರಿದ್ದರಿಂದ ರೈತ ಮುಖಂಡರುಗಳಾದ ಬಸವರಾಜ ಕುಂಬಾರ, ವೆಂಕಟೇಶ ಹಳ್ಳೂರ, ವೈ.ಎಲ್‌. ಬಿರಾದಾರ ಮಾತನಾಡಿ, ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯಗಳ ನಿರ್ಮಾಣಕ್ಕೆ ಈ ಭಾಗದ ಜನರು ಆಸ್ತಿ ಕಳೆದುಕೊಂಡಿರುವುದಲ್ಲದೇ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಆದ್ದರಿಂದ ಎ ಸ್ಕೀಂ ಹಾಗೂ ಬಿಸ್ಕೀಂ ಎಂದು ವಿಂಗಡಿಸದೇ
ನಿರ್ಮಾಣಗೊಂಡಿರುವ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು. ಅವಳಿ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು. ಸಮರ್ಪಕವಾಗಿ ನೀರು ನಿರ್ವಹಣೆ ಮಾಡದಿರುವುದರಿಂದ ಕೆಲ ರೈತರ ಜಮೀನಿಗೆ ನೀರು ತಲುಪುತ್ತಿಲ್ಲ, ಇನ್ನು ಕೆಲ ರೈತರ ಜಮೀನಿನಲ್ಲಿ ಹೆಚ್ಚು ನೀರು ಹರಿದು ಸವುಳು-ಜವುಳಿಗೆ ಕಾರಣವಾಗುತ್ತಿದೆ ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಸುಖ ನಿದ್ರೆ ಮಹತ್ವದ ನೀರಾವರಿ ಸಭೆಗೆ ಆಗಮಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರಲ್ಲಿ ಸಭೆಯುದ್ದಕ್ಕೂ ಗದ್ದಲ, ಅಧಿಕಾರಿಗಳ ತರಾಟೆ ನಡೆಯುತ್ತಿದ್ದರೆ ಇಬ್ಬರು ಸಕಾರಿಗಳು ಮಾತ್ರ ಸಭೆಗೂ ತಮಗೂ ಸಂಬಂಧವೇ ಇಲ್ಲದಂತೆ ನಿದ್ರೆಗೆ ಜಾರಿದ್ದು ಕಂಡು ಬಂತು.

ಸಭೆಗೆ ಆಗಮಿಸಿದ ಸ್ವಾಮೀಜಿ ಕಳೆದ 16 ವರ್ಷಗಳಿಂದ ನಡೆಯುತ್ತಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ
ಇಲ್ಲಿವರೆಗೂ ಯಾವ ಸ್ವಾಮೀಜಿಗಳು ಭಾಗವಹಿಸಿರಲಿಲ್ಲ. ಆದರೆ ಈ ಬಾರಿ ಇಟಗಿಯ ಮೇಲುಗದ್ದುಗೆ ಹಿರೇಮಠದ ಗುರುಶಾಂತವೀರ ಸ್ವಾಮೀಜಿಯವರು ಸಭೆಯುದ್ದಕ್ಕೂ ಕುಳಿತು ಗಮನ ಸೆಳೆದರು.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.