ಪರಿಶ್ರಮದ ಸಂಪಾದನೆಗೆ ಶರಣರ ಆದ್ಯತೆ


Team Udayavani, Nov 11, 2018, 3:21 PM IST

vij-5.jpg

ವಿಜಯಪುರ: ದುಡಿಮೆಗೆ ಬಸವಾದಿ ಶರಣರು ಮಹತ್ವದ ಸ್ಥಾನ ನೀಡಿದ್ದರು. ಕಾಯಕವೇ ಕೈಲಾಸ ಎಂದು ಸಾರಿದರು ಎಂದು ಬೀದರನ ಬಸವ ಸೇವಾಶ್ರಮದ ಅನ್ನಪೂರ್ಣ ಅಕ್ಕ ಹೇಳಿದರು.

ನಗರದಲ್ಲಿ ನಾಡಗೌಡ ಉದ್ಯಮ ಸಮೂಹ ಸಂಸ್ಥೆ ಹಮ್ಮಿಕೊಂಡಿದ್ದ ದೀಪಸಂಗಮ ಚಿಂತನಗೋಷ್ಠಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಸವಾದಿ ಶರಣರ ಕಲ್ಪನೆಯಲ್ಲಿ ಪ್ರತಿಯೊಬ್ಬರೂ ಶ್ರಮದಿಂದಲೇ ಸಂಪಾದಿಸಬೇಕು ಎಂದು ಬಲವಾದ ಪ್ರತಿಪಾದಕರಾಗಿದ್ದ ಶರಣರು, ದುಡಿಮೆಯನ್ನು ದೈವತ್ವಕ್ಕೆ ತಲುಪಿಸಿದರು ಎಂದರು.

ಕಾಯಕದಿಂದ ಭೂಲೋಕವೇ ಸ್ವರ್ಗವಾಗಿ ಪರಿವರ್ತನೆ ಆಗಲಿದೆ. ಪರಿಶ್ರಮವೇ ಪರಮಾತ್ಮ ಸನ್ನಿದಾನ ಎಂದು ಶರಣರು ಭಾವಿಸಿದ್ದರು. ಶರಣರ ಆಶಯ ಈಡೇರಿಸಲು ಇದೀಗ ನಾವೆಲ್ಲ ಕಲ್ಯಾಣ ರಾಜ್ಯ ಸ್ಥಾಪಿಸಲು ದುಡಿಯಬೇಕಿದೆ.
ದುಡಿಮೆಯೇ ಭಾರತೀಯ ಸಂಸ್ಕೃತಿ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.

ವಿಜಯ ಜಹಾಗೀರದಾರ ಮಾತನಾಡಿ, ದೀಪಗಳು ಹೊರಗಿನ ಕತ್ತಲೆ ಕಳೆದರೆ ವಚನಗಳು ಮನದ ಒಳಗಿನ ಕತ್ತಲೆ ಕಳೆಯಬಲ್ಲವು. ವಚನಗಳಿಂದ ಮನದಲ್ಲಿ ಜ್ಞಾನದ ಜ್ಯೋತಿ ಹೊತ್ತುತ್ತದೆ, ವಚನಗಳು ಅರಿವಿನ ಪ್ರತೀಕ, ಅರಿವಿನ ಜ್ಯೋತಿಗಳು. ವಚನಗಳ ಸಾರವನ್ನು ಅರ್ಥೈಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕೃಷಿ ರಂಗದಲ್ಲಿ ಸಾಧನೆ ತೋರಿದ ಎನ್‌.ಕೆ. ಕುಂಬಾರ, ಶವ ಸಂಸ್ಕಾರ ಕಾಯಕದಲ್ಲಿ ತೊಡಗಿ ಮಹತ್ತರ ಸೇವೆ ಮಾಡುತ್ತಿರುವ ಮಹಾದೇವ ಹತ್ತಿಕಾಳ, ಮಾಜಿ ಸೈನಿಕ ನಾರಾಯಣ ಸೂರ್ಯವಂಶಿ, ಅಪಘಾತ ರಹಿತ ವಾಹನ ಚಾಲನೆ ಮಾಡಿದ ವಿಠ್ಠಲ ಘಾಟಗೆ, ನೇತ್ರ ತಜ್ಞ ಡಾ|ಪ್ರಭುಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಭಾರತೀಯ ಸಂಸ್ಕೃತಿ ಉತ್ಸವ-5ರ ಪ್ರಚಾರರ್ಥ ಅರ್ಥಪೂರ್ಣ ಸಂದೇಶ ಹೊಂದಿದ ವೆರಿಗುಡ್‌ ಚಲನಚಿತ್ರ
ಪ್ರದರ್ಶಿಸಲಾಯಿತು. ನಂತರ ಆದಿ ಶಕ್ತಿ ಸಂಗೀತ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ನಾಡಗೌಡ ಸಮೂಹ ಸಂಸ್ಥೆ ಅಧ್ಯಕ್ಷ ಎಸ್‌.ಎಚ್‌. ನಾಡಗೌಡ, ಶೈಲಜಾ ಬಸನಗೌಡ ಪಾಟೀಲ ಯತ್ನಾಳ, ಸಾಹಿತಿ ವಿ.ಸಿ. ನಾಗಠಾಣ, ಶಾಮಲಾ ಗಣೂರ ಪಾಲ್ಗೊಂಡಿದ್ದರು. ಶರಣಪ್ಪಗೌಡ ನಾಡಗೌಡ, ಚೆನ್ನಾರೆಡ್ಡಿ ಯಮಂತ, ಎ.ಬಿ. ಕುಲಕರ್ಣಿ, ಶರಣಗೌಡ ಗೂರುರೆಡ್ಡಿ, ಸುರೇಶ ಗಡಿ, ಶಂಕರ ಬೈಚಬಾಳ, ಪ್ರವೀಣ ಬಾದರಬಂಡಿ, ಪರುಶುರಾಮ ಹೋನಕೇರಿ ಇದ್ದರು. ಚಂದ್ರಶೇಖರ ನಾಡಗೌಡ ಸ್ವಾಗತಿಸಿದರು. ಪ್ರಾಣೇಶ ಔಟಿ ನಿರೂಪಿಸಿದರು. ರಾಜಶೇಖರ ನಾಡಗೌಡ ವಂದಿಸಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.