ಪಾರದರ್ಶಕ ಆಡಳಿತಕ್ಕೆ ಮಾಹಿತಿ ಹಕ್ಕು ಅಧಿ ನಿಯಮ ಸಹಕಾರಿ


Team Udayavani, Nov 17, 2018, 3:40 PM IST

vij-2.jpg

ವಿಜಯಪುರ: ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಿಗೆ ಹೊಣೆಗಾರಿಕೆ ತರುವ ಸದಾಶಯದಿಂದ ಜಾರಿಗೆ ತಂದಿರುವ ಮಾಹಿತಿ ಹಕ್ಕು ಅಧಿನಿಯಮ, ಆಡಳಿತದಲ್ಲಿ ದಕ್ಷತೆ ತರಲಿದೆ. ಪ್ರಾಮಾಣಿಕತೆ ಹಾಗೂ ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವಲ್ಲಿ ಅಧಿಕಾರಿಗಳಿಗೆ ನೆರವಾಗಲಿದೆ ಎಂದು ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ಎಸ್‌.ಎಲ್‌. ಪಾಟೀಲ ಅಭಿಪ್ರಾಯಪಟ್ಟರು.

ಶುಕ್ರವಾರ ನಗರದ ಜಿಪಂ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಅಧಿನಿಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಾರದರ್ಶಕತೆ ಹಾಗೂ ಹೊಣೆಗಾರಿಕೆಯೇ ಮಾಹಿತಿ ಹಕ್ಕು ಅಧಿನಿಯಮದ ಮೂಲ ಸತ್ವ ಹಾಗೂ ಆಶಯ. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಈ ದಿಸೆಯಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಮಾಹಿತಿ ಕೋರುವ ನೆಪದಲ್ಲಿ ಸಾರ್ವಜನಿಕರು ಮಾಹಿತಿ ಹಕ್ಕು ಕಾಯ್ದೆ ದುರ್ಬಳಕೆಗೆ ಮಾಡಿಕೊಳ್ಳಬಾರದು. ಪ್ರಾಮಾಣಿಕ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶವಿಲ್ಲದೇ, ಸೇಡಿನ ಉದ್ದೇಶದಿಂದ ಮತ್ತು ವೈಯಕ್ತಿಕ ದ್ವೇಷದಿಂದ ಮಾಹಿತಿ ಕೇಳುವುದು ಮಾಹಿತಿ ಹಕ್ಕು ಅಧಿನಿಯಮದ ದುರ್ಬಳಕೆ ಆಗಲಿದೆ. ಸಾರ್ವಜನಿಕ ಹಿತಾಸಕ್ತಿ ಇಲ್ಲದ ವೈಯಕ್ತಿಕ ಮಾಹಿತಿ ಕೋರಿ ದುರಾಲೋಚನೆ, ಉಪದ್ರವಕಾರಿ ಅರ್ಜಿ ಸಲ್ಲಿಸುವುದಕ್ಕೆ ಪರವಾನಿಗೆ ನೀಡಲಾಗಿದೆ ಎಂಬಂತೆ ವರ್ತಿಸಬಾದರು. ಇದರಿಂದ ನ್ಯಾಯದಾನವನ್ನು ದುರ್ಬಳಕೆ ಮಾಡಿಕೊಂಡಂತೆ ಆಗಲಿದೆ. ಹೀಗಾಗಿ ಸಾರ್ವಜನಿಕರು ಸಾಂವಿಧಾನಿಕ ಹಕ್ಕಾದ ಮಾಹಿತಿ ಹಕ್ಕನ್ನು ಸದ್ಬಳಕೆ ಮಾಡಿಕೊಂಡು ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಸಹಕರಿಸಬೇಕು ಎಂದು ಮಾಹಿತಿ ಆಯುಕ್ತರು ಕಿವಿಮಾತು ಹೇಳಿದರು. ಸರ್ಕಾರಿ ಇಲಾಖೆಗಳ ವಿವಿಧ ಕಚೇರಿಗಳಲ್ಲಿ ಸಾರ್ವಜನಿಕರಿಂದ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸ್ಪಂದಿಸುವಂತೆ ಸಲಹೆ ನೀಡಿದ ಅವರು, ದಕ್ಷತೆಯಿಂದ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಅಧಿಕಾರಿಗಳನ್ನು ಶ್ಲಾಘಿಸಿದರು. ಅದರಂತೆ ಅದಕ್ಷತೆಯಿಂದ ಹಾಗೂ ಬೇಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ
ಕ್ರಮ ಸಹ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಯಾವುದೇ ಸರ್ಕಾರಿ ಇಲಾಖೆಗಳಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಅನುಷ್ಠಾನದಲ್ಲಿ ಸರಳ ಹಾಗೂ ಸುಲಭ ರೀತಿಯಲ್ಲಿ ಅರ್ಥವಾಗುವಂತೆ ರಚಿಸಲಾಗಿದೆ. ಈ ವಿಷಯದಲ್ಲಿ ಅಧಿಕಾರಿಗಳು ಅನಗತ್ಯವಾಗಿ ನಿರ್ಲಕ್ಷ್ಯಾ ತೋರಿದಲ್ಲಿ ಶಿಸ್ತು ಕ್ರಮದ ಜೊತೆಗೆ, ಇಲಾಖೆಗಳಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ದೇಶಿಸಬಹುದಾಗಿದೆ. ಹೀಗಾಗಿ ಸಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ಪೂರೈಸುವ
ಮೂಲಕ ದಂಡ ಮತ್ತು ಇತರೆ ಕ್ರಮಕ್ಕೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಇಲಾಖೆಗಳು ಸ್ವಯಂ ಪ್ರೇರಿತವಾಗಿ ತಮ್ಮ ಕಚೇರಿಗೆ ಸಂಬಂಧಿತ ಮಾಹಿತಿಯನ್ನು ಕಚೇರಿಯ ಅಂತರ್ಜಾಲ, ಸಮೂಹ ಮಾಧ್ಯಮ ಹಾಗೂ ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು. ಅಧಿಕಾರಿಗಳು ಕೂಡ ತಮ್ಮ ಕಚೇರಿ ವ್ಯವಸ್ಥೆಯಲ್ಲಿ ಕಂಪ್ಯೂಟರೀಕರಣ ಇನ್ನಷ್ಟು ಚುರುಕುಗೊಳಿಸಿದರೆ ಪಾರದರ್ಶಕ ಆಡಳಿತದ ಜೊತೆಗೆ ಸಾರ್ವಜನಿಕರಿಗೆ ಸಕಾಲಕ್ಕೆ ಮಾಹಿತಿ ಪೂರೈಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.

ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಇದಕ್ಕೆ ತಪ್ಪಿದ್ದಲಿ ಸೂಕ್ತ ಪರಿಣಾಮ ಎದುರಿಸಬೇಕಾಗುತ್ತದೆ. ಅಧಿಕಾರಿಗಳೂ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು. ಕಡತ ಲಭ್ಯವಿಲ್ಲ ಎಂಬ ಕಾರಣ ನೀಡಿ ಅರ್ಜಿದಾರರಿಗೆ ಮಾಹಿತಿ ಹಕ್ಕಿನಿಂದ ಅವಕಾಶ ವಂಚಿತರನ್ನಾಗಿ ಮಾಡಬಾರದು ಎಂದು ಸೂಚನೆ ನೀಡಿದರು.
 
ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ, ಎಸ್ಪಿ ಪ್ರಕಾಶ ನಿಕ್ಕಂ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ| ಸಬಿಹಾ ಭೂಮಿಗೌಡ, ಜಿಪಂ ಉಪ ಕಾರ್ಯದರ್ಶಿ ದುಗೇಶ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.