ಕಣ್ಣುಗಳು ಮಂಜಾಗಿ ಕಾಣುತ್ತಿದ್ದರೆ ಹಗುರವಾಗಿ ಪರಿಗಣಿಸಬೇಡಿ


Team Udayavani, Nov 20, 2018, 1:27 PM IST

vij-2.jpg

ವಿಜಯಪುರ: ಪ್ರತಿ ಮನುಷ್ಯನಿಗೆ ಕಣ್ಣುಗಳೇ ಆತನ ಸದೃಢ ಶರೀರಕ್ಕೆ ಕನ್ನಡಿ. ಮಧುಮೇಹಿಗಳು ಕಾಲ-ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ನೇತ್ರತಜ್ಞ ಡಾ| ಪ್ರಭುಗೌಡ ಚಬನೂರ ಹೇಳಿದರು.

ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಮಧುಮೇಹ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಣ್ಣಿನಲ್ಲಿರುವ ಅಕ್ಷಿಪಟಲ ಕ್ಯಾಮೆರಾ ಇದ್ದಂತೆ. ಅದರ ಮೇಲೆ ಕೊಲೆಸ್ಟ್ರಾಲ್‌
ಇಲ್ಲವೇ ರಕ್ತಸ್ರಾವವಾದರೆ ಕ್ಯಾಮೆರಾ ಕೆಲಸ ಮಾಡುವುದಿಲ್ಲ. ಹಾಗಾಗಿ ಅಕ್ಷಿಪಟಲ ಸದಾ ಶುಚಿಯಾಗಿಟ್ಟುಕೊಳ್ಳಬೇಕೆಂದರು.
 
ವಿಶೇಷವಾಗಿ ಮಧುಮೇಹಿಗಳ ಕಣ್ಣು ಮಂಜಾಗಿ ಕಾಣುತ್ತಿದ್ದರೆ, ಹಗುರವಾಗಿ ಪರಿಗಣಿಸುವಂತಿಲ್ಲ. ಮುಂದೆ 5 ವರ್ಷಗಳ ಬಳಿಕ ಅದು ದೊಡ್ಡ ಸಮಸ್ಯೆಯಾಗುತ್ತದೆ. ಬಳಿಕ ಲೇಸರ್‌ ಹಾಗೂ ಇಲ್ಲವೇ ಇಂಜೆಕ್ಷನ್‌ ಮಾಡಿಕೊಳ್ಳಬೇಕಾಗುತ್ತದೆ. ಪ್ರತಿ ವರ್ಷ ಕಣ್ಣುಗಳನ್ನು ನಿಯಮಿತವಾಗಿ ತಜ್ಞ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಬೇಕೆಂದರು.

ಕೈಗೆ, ಕಾಲಿಗೆ ಆಳುಗಳನ್ನು ಹೊಂದಿದ್ದ ರಾಜ ಮಹಾರಾಜರಿಗೆ ಶ್ರಮವಿರಲಿಲ್ಲ. ಹಾಗಾಗಿ ಈ ಕಾಯಿಲೆ ಅವರನ್ನು ಬಾಧಿಸುತ್ತಿತ್ತಂತೆ. ಹಾಗಾಗಿ ಮಧುಮೇಹಕ್ಕೆ ರಾಜ ಕಾಯಿಲೆ ಎನ್ನುವರು. ಆದರೆ ಇತ್ತೀಚೆಗೆ ಬದಲಾದ ಜೀವನ ಶೈಲಿಯಿಂದಾಗಿ ಜನಸಾಮಾನ್ಯರು ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ರೊಟ್ಟಿ, ತರಕಾರಿ ಉಣ್ಣುವುದನ್ನು ಬಿಟ್ಟು ನಾಲಿಗೆ ರುಚಿಗೆ ತಣಿಸಲು ಬಹುತೇಕರು ಮುಂದಾಗಿದ್ದಾರೆ.
ಇದು ಒಳ್ಳೆ ಬೆಳವಣಿಗೆಯಲ್ಲ. ಈ ರೋಗ ಬಾರದಂತಿರಬೇಕಾದರೆ, ನಾಲಿಗೆ ರುಚಿ ಬೆನ್ನು ಹತ್ತುವುದನ್ನು ಬಿಟ್ಟು ಮನೆ ಊಟ ಮಾಡಿದರೆ ಸದೃಢ ಆರೋಗ್ಯ ನಿಮ್ಮದಾಗುತ್ತದೆ ಎಂದರು.

ಮಧುಮೇಹಿಗಳು ಅತಿ ಹಣ್ಣಾದ ಸಿಹಿ ಹಣ್ಣು ತಿನ್ನುವ ಬದಲು ವಗರಾಗಿರುವ ಹಣ್ಣುಗಳನ್ನು ತಿನ್ನುವ ಮೂಲಕ ಸಕ್ಕರೆ ರೋಗವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ಸಲಹೆ ಮಾಡಿದರು. ಮಧುಮೇಹ ಒಮ್ಮೆ ಬಂದರೆ ಅದು ಶಮನವಾಗದ ರೋಗ. ಹಾಗಾಗಿ ಮಧುಮೇಹ ಮೊದಲೇ ಬಾರದ ನಿಟ್ಟಿನಲ್ಲಿ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಿ ಎಂದು ಸಲಹೆ ಮಾಡಿದರು.

ಸಕ್ಕರೆ ಕಾಯಿಲೆ ತಜ್ಞ ಡಾ| ನಿತಿನ ಅಗರವಾಲ, ಮೂತ್ರಕೋಶ ತಜ್ಞ ಡಾ| ರವೀಂದ್ರ ಮದ್ರಕಿ, ಅಕ್ಷಿಪಟಲ ತಜ್ಞ ಡಾ| ಆನಂದ ಗಣ್ಣೂರ, ಶಸ್ತ್ರಚಿಕಿತ್ಸಾ ತಜ್ಞ ಡಾ| ಎಸ್‌.ಐ. ಭೀಮನಗೌಡ ಮಾತನಾಡಿದರು. ಡಾ| ಮಾಲಿನಿ ಪ್ರಭುಗೌಡ, ಡಾ| ಸಂತೋಷ ಪಾಟೀಲ, ಡಾ| ರೋಹಿಣಿ ಪಾಟೀಲ, ಡಾ| ಮಧು ಗಣ್ಣೂರ, ಡಾ| ಅಜಯ ಬದಾಮಿ, ಡಾ| ಸುಷ್ಮಾ ವಾರದ, ಡಾ| ಅರುಣ ದೇಸಾಯಿ, ಡಾ| ನಂದಾ, ದತ್ತಾತ್ರೇಯ ಹೊಸಮಠ, ಆನಂದ ಪಾಟೀಲ, ಬಸವರಾಜ ಯಾಳವಾರ, ಸುರೇಶ ಪೇಟಕರ, ಅರುಣ ಸೂರ್ಯವಂಶಿ ಇದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.