ಅಧೀಕ್ಷಕ ಅಭಿಯಂತರರಿಗೆ ಅನ್ನದಾತರ ಘೇರಾವ್‌


Team Udayavani, Dec 3, 2018, 12:20 PM IST

vij-2.jpg

ಆಲಮಟ್ಟಿ: ನಮಗೆ ನೀರು ಕೊಡಿ ಇಲ್ಲವೇ ಬೆಳೆಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ತಿಮ್ಮಾಪುರ ಏತನೀರಾವರಿ ಯೋಜನೆಯ ರೈತರು ಇಲ್ಲಿಯ ಅಧೀಕ್ಷಕ ಅಭಿಯಂತರರಿಗೆ ಘೇರಾವ್‌ ಹಾಕಿ ಒತ್ತಾಯಿಸಿದರು.

ಮುಂಗಾರು ಹಂಗಾಮಿನ ಕೃಷ್ಣಾಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ನಮ್ಮ ಜಮೀನುಗಳಿಗೆ ಕಾಲುವೆ ನೀರು ಪೂರೈಸಲಿಲ್ಲ. ಹಿಂಗಾರು ಹಂಗಾಮಿಗೂ ನೀರು ಬರುತ್ತಿಲ್ಲ. ಆದ್ದರಿಂದ ನಮಗೆ ವೈಜ್ಞಾನಿಕ ಬೆಳೆ ಪರಿಹಾರ ನೀಡಿ ಇಲ್ಲವೇ ತಿಮ್ಮಾಪುರ ಏತ ನೀರಾವರಿ ಯೋಜನೆಯ ಡಿ.ಸಿ-1ಕಾಲುವೆಗೆ ನೀರು ಹರಿಸಿ ಎಂದು ರೈತರು ಒಕ್ಕೊರಲಿನಿಂದ ಆಲಮಟ್ಟಿ ಅಣೆಕಟ್ಟು ಅಧೀಕ್ಷಕ ಅಭಿಯಂತರರ ಕಚೇರಿ ಆವರಣದಲ್ಲಿ ಅವರ ವಾಹನ ತಡೆದು ಪ್ರತಿಭಟಿಸಿದರು. 

ತಿಮ್ಮಾಪುರ ಏತನೀರಾವರಿ ಯೋಜನೆ ವ್ಯಾಪ್ತಿಯ ಬಾಗಲಕೋಟೆ ತಾಲೂಕಿನ ಬೈರಮಟ್ಟಿ, ಇಂಗಳಗಿ ಹಾಗೂ ಬಸರೀಕಟ್ಟಿ ಗ್ರಾಮಗಳಿಗೆ ಎರಡೂ ಹಂಗಾಮಿನಲ್ಲಿ ಸಮರ್ಪಕ ನೀರು ಹರಿಯದೇ ಇರುವುದರಿಂದ ಜನ-ಜಾನುವಾರುಗಳು ಚಳಿಗಾಲದಲ್ಲಿಯೇ ನೀರಿಗಾಗಿ ಪರದಾಡುವಂತಾಗಿದೆ.

ಇನ್ನು ಬೇಸಿಗೆಯಲ್ಲಿ ಆ ಭಾಗದ ರೈತರು ಜಾನುವಾರುಗಳ ನೀರು ಹಾಗೂ ಮೇವಿಗಾಗಿ ಗುಳೆ ಹೋಗುವ ಪರಿಸ್ಥಿತಿ ಒದಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯವನ್ನು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಮಧ್ಯಭಾಗದಲ್ಲಿ ನಿರ್ಮಿಸಿ ಸುಮಾರು 123 ಟಿಎಂಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ ಕೂಡ ಅವಳಿ ಜಿಲ್ಲೆಯ ರೈತರ ಜಮೀನಿಗೆ ನೀರು ಕೊಡುವದಿಲ್ಲವೆಂದರೆ ಹೇಗೆ? ಅವಳಿ ಜಿಲ್ಲೆಯ ಲಕ್ಷಾಂತರ ಎಕರೆ ಜಮೀನು ಹಾಗೂ ನೂರಾರು ಗ್ರಾಮಗಳ ಕೃಷ್ಣಾಮೇಲ್ದಂಡೆ ಯೋಜನೆಗಾಗಿ ಸ್ವಾ ಧೀನಪಡಿಸಿಕೊಂಡು ಸಂತ್ರಸ್ತರನ್ನಾಗಿ ಮಾಡಿ, ನೆಲೆಯೇ ಇಲ್ಲದ ಊರಿಗೆ ಹೋಗಿರುವ ನಮ್ಮ ಸಹೋದರರು ಅವರ ತ್ಯಾಗವನ್ನಾದರೂ ಮನಗಂಡು ಸರ್ಕಾರ ಈ ಭಾಗದ ರೈತರಿಗೆ ಎರಡೂ ಹಂಗಾಮಿಗೆ ನೀರು ಒದಗಿಸಬೇಕು.

ಕೃಷ್ಣಾ ಮೇಲ್ದಂಡೆ ಯೋಜನೆಯ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ನಮ್ಮ ಕಾಲುವೆಗಳಿಗೆ ನೀರು ಒದಗಿಸಬೇಕಾಗಿತ್ತಾದರೂ ಆಲಮಟ್ಟಿ ಬಲದಂಡೆ ಕಾಲುವೆಯ ಮುಖ್ಯಸ್ಥಾವರ (ಜಾಕ್‌ವೆಲ್‌)ದಲ್ಲಿ ವಿದ್ಯುತ್‌ ಅವಘಡದಿಂದ ತಿಂಗಳುಗಟ್ಟಲೇ ನೀರೆತ್ತುವ ಪಂಪ್‌ಗ್ಳು ಸ್ಥಗಿತಗೊಂಡಿದ್ದವು. ಅದರಿಂದ ಕಾಲುವೆಗಳಿಗೆ ನೀರು ಹರಿಯಲಿಲ್ಲ. 

ಕೊನೆಗೆ ನ್ಯಾಯೋಚಿತವಾಗಿ ಕೊಡಬೇಕಾದ ನೀರನ್ನಾದರೂ ಕೊಡಬೇಕಲ್ಲವೇ?. ನ.25ರಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದರೂ ಕೂಡ ಇನ್ನುವರೆಗೂ ನಮ್ಮ ಗ್ರಾಮಗಳಿಗೆ ನೀರು ತಲುಪಿಲ್ಲ. ಆದ್ದರಿಂದ ನೀರಾವರಿ ನಿಯಮದಂತೆ ಮೊದಲು ಕಾಲುವೆಯ ಕೊನೆಯಂಚಿನ ರೈತರ ಜಮೀನಿಗೆ ನೀರೊದಗಿಸಬೇಕಾಗಿತ್ತು. ಆದರೆ ಅಧಿಕಾರಿಗಳ ನೀರು ನಿರ್ವಹಣಾ ವ್ಯವಸ್ಥೆಯಲ್ಲಿ ವಿಫಲವಾಗಿದ್ದರ ಪರಿಣಾಮ ಕಾಲುವೆಯ ಕೊನೆಯಂಚಿನ ಗ್ರಾಮಗಳಿಗೆ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿದರು.

ನಂತರ ರೈತರನ್ನು ಸಮಾಧಾನ ಮಾಡಿದ ಅಧೀಕ್ಷಕ ಅಭಿಯಂತರ್‌ ಎಸ್‌.ಎಂ.ಜೋಶಿಯವರು, ಈ ಕುರಿತು ಈಗಾಗಲೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು ಅಧ್ಯಕ್ಷರ ಆದೇಶದ ಮೇರೆಗೆ ಡಿ.4ರವರೆಗೆ ಕಾಲುವೆಗಳಿಗೆ ನೀರು ಹರಿಸಲಾಗುವುದು. ಆದ್ದರಿಂದ ನಿರ್ವಹಣಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವೆಂಕಟೇಶ ಹಳ್ಳೂರ, ಬಸವರಾಜ ಬಳೂಲದ, ಪ್ರಭು ಅಳವಂಡಿ, ಗುರುಬಸಪ್ಪ ವಡ್ಡರಕಲ್ಲ, ರಾಮಣ್ಣ ಮೂಕಿ, ರಾಮನಗೌಡ ಮೇಟಿ, ಭೀಮಶಿ ಪೂಜಾರ, ಸಂಗಣ್ಣ ಹುಡೇದ, ಶಂಕ್ರಪ್ಪ ಪಡಿಯಣ್ಣವರ ಮೊದಲಾದವರಿದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.