ಧರಣಿಗೆ ವೈದ್ಯರು-ವಕೀಲರ ಬೆಂಬಲ


Team Udayavani, Dec 6, 2018, 12:49 PM IST

vij-2.jpg

ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಹುನಗುಂದ-ಮುದ್ದೇಬಿಹಾಳ-ತಾಳಿ ಕೋಟೆ ರಾಜ್ಯ ಹೆದ್ದಾರಿ ನಿರ್ಮಾಣ ಹೋರಾಟ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಅಗಲೀಕರಣಕ್ಕಾಗಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬುಧವಾರ ವಕೀಲರು, ವೈದ್ಯರು, ಕ್ರಿಯೇಟಿವ್‌ ಫ್ರೆಂಡ್ಸ್‌ ಕ್ಲಬ್‌
ಸದಸ್ಯರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

ವಕೀಲರು ಕೋರ್ಟ್‌ ಕಲಾಪದಿಂದ ದೂರ ಉಳಿದು, ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸುವ ಮೂಲಕ ಹೋರಾಟಕ್ಕೆ ಹೆಚ್ಚಿನ ಬಲ ತಂದುಕೊಟ್ಟರು. ಪಟ್ಟಣದ ಎಲ್ಲ ಖಾಸಗಿ ವೈದ್ಯರು ಒಂದು ಗಂಟೆ ಕಾಲ ತಮ್ಮ ಆಸ್ಪತ್ರೆಗಳನ್ನು ಸಾಂಕೇತಿಕವಾಗಿ ಬಂದ್‌ ಮಾಡಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ವೈದ್ಯ ಡಾ| ಎ.ಎಂ. ಮುಲ್ಲಾ, ಡಾ| ಮಹಾಂತೇಶ ಅಂಗಡಿ ಇನ್ನಿತರರು ಮಾತನಾಡಿ, ಹೋರಾಟ ಊರಿನ ಹಿತಕ್ಕಾಗಿ ನಡೆಸುತ್ತಿರುವಂಥದ್ದು. ಇದಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದರು.

ವೈದ್ಯರಾದ ಡಾ| ಎ.ಬಿ. ಹೊಕ್ರಾಣಿ, ಡಾ| ಉತ್ಕರ್ಷ ನಾಗೂರ, ಡಾ| ಎಂ.ಎಂ. ಅಥಣಿ, ಡಾ| ಎಂ.ಎಂ. ಹಿರೇಮಠ, ಡಾ| ನಾಯಕ್‌, ಡಾ| ಜುಲ್ಪೆ, ಡಾ| ಡಿ.ಬಿ. ಓಸ್ವಾಲ್‌, ಡಾ| ವೀರೇಶ ಪಾಟೀಲ, ಡಾ| ವೀರೇಶ ಇಟಗಿ, ಡಾ| ಎಸ್‌.ಕೆ. ಶಿವಯೋಗಿಮಠ ಮತ್ತಿರರು ಪಾಲ್ಗೊಂಡಿದ್ದರು.

ಕ್ರಿಯೇಟಿವ್‌ ಫ್ರೆಂಡ್ಸ್‌ ಕ್ಲಬ್‌ನ ಗೆಳೆಯರ ಬಳಗದ 20ಕ್ಕೂ ಹೆಚ್ಚು ಸದಸ್ಯರು ಕ್ಲಬ್‌ ಅಧ್ಯಕ್ಷ ಅಶೋಕ ರೇವಡಿ ನೇತೃತ್ವದಲ್ಲಿ ಧರಣಿಗೆ ಬೆಂಬಲ ಸೂಚಿಸಿ ಕೆಲ ಹೊತ್ತು ಪಾಲ್ಗೊಂಡಿದ್ದು ಬೇಡಿಕೆ ಈಡೇರದಿದ್ದಲ್ಲಿ ಎಲ್ಲರೂ ಧರಣಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಭರವಸೆ ನೀಡಿದರು. ಊರಿನ ಹಿತಕ್ಕಾಗಿ ಎಂಥದ್ದೇ ಹೋರಾಟ ನಡೆದರೂ ಬೆಂಬಲಿಸುವುದಾಗಿ ತಿಳಿಸಿದರು. ಪದಾಧಿಕಾರಿಗಳಾದ ಪಾರಸ್‌ ಪೋರವಾಲ, ಮಾಣಿಕಚಂದ ದಂಡಾವತಿ, ಡಿ.ಬಿ. ವಡವಡಗಿ, ಸಿದ್ದರಾಜ ಹೊಳಿ, ಬಸಯ್ಯ ನಂದಿಕೇಶ್ವರಮಠ ಬೇಡಿಕೆ ಈಡೇರಿಕೆ ಅವಶ್ಯಕತೆ ಕುರಿತು ಮಾತನಾಡಿದರು.

ವಕೀಲರಿಂದ ಮಾನವ ಸರಪಳಿ: ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ ಎಲ್ಲ ವಕೀಲರು ನ್ಯಾಯವಾದಿಗಳ ಸಂಘದಲ್ಲಿ ಸಭೆ ಸೇರಿ ಕೋರ್ಟ್‌ ಕಲಾಪದಿಂದ ದೂರ ಉಳಿಯುವ ಠರಾವು ಸ್ವೀಕರಿಸಿದರು. ನಂತರ ಎಲ್ಲರೂ ಸಾಮೂಹಿಕವಾಗಿ ತಹಶೀಲ್ದಾರ್‌ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಂ.ಎಸ್‌. ಬಾಗವಾನ ಅವರಿಗೆ ಸಲ್ಲಿಸಿದರು.

ಹೆದ್ದಾರಿ ಅಗಲೀಕರಣ ಕುರಿತು 28-11-2018ರಂದು ಮನವಿ ಕೊಟ್ಟಿದ್ದರೂ ಜಿಲ್ಲಾಧಿಕಾರಿ ಸ್ಪಂದಿಸಿಲ್ಲದಿರುವುದು ವಿಪರ್ಯಾಸ ಎಂದು ತಿಳಿಸಿ ಹೆದ್ದಾರಿ ಅಗಲೀಕರಣ ಬೇಡಿಕೆ ಈಡೇರಿಸುವ ಕುರಿತು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಂತರ ತಹಶೀಲ್ದಾರ್‌ ಕಚೇರಿಯಿಂದ ಪಾದಯಾತ್ರೆ ಮೂಲಕ ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿದರು. ಇದರಿಂದಾಗಿ ಕೆಲಹೊತ್ತು ರಸ್ತೆ ಸಂಚಾರ್‌ ಬಂದ್‌ ಆಗಿ ಸಾರ್ವಜನಿಕರು ಪರದಾಡುವಂತಾಯಿತು.
 
ಈ ವೇಳೆ ಹಿರಿಯ ವಕೀಲರಾದ ಎಂ.ಎಚ್‌. ಹಾಲಣ್ಣವರ, ಎಂ.ಎಸ್‌. ನಾವದಗಿ, ಎಸ್‌.ಎಸ್‌. ಮಾಲಗತ್ತಿ, ಎಚ್‌.ವೈ. ಪಾಟೀಲ, ಎನ್‌.ಆರ್‌. ಮುದ್ನಾಳ, ವಿಜಯಮಹಾಂತೇಶ ಸಾಲಿಮಠ ಮಾತನಾಡಿ, ಯೋಜನಾ ವರದಿಯಲ್ಲಿನ ಬ್ಲೂಪ್ರಿಂಟ್‌ನಲ್ಲಿ ಇರುವಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿಲ್ಲ. ಹೆದ್ದಾರಿ ಬ್ಲೂಪ್ರಿಂಟ್‌ ಬಗ್ಗೆ ಮಾಹಿತಿ ಕೇಳಿದರೆ ಹುಬ್ಬಳ್ಳಿಯಲ್ಲಿ ಕಚೇರಿ ಹೊಂದಿರುವ ಕೆಆರ್‌ಡಿಸಿಎಲ್‌ನ ಅಧಿಕಾರಿಗಳು ಕೊಡುತ್ತಿಲ್ಲ.

ಗುತ್ತಿಗೆದಾರರು ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ಕೆಲವೆಡೆ 7, 8, 9 ಮೀಟರ್‌ ಹೀಗೆ ಮನಸ್ಸಿಗೆ ಬಂದ ಅಳತೆಯಲ್ಲಿ ರಸ್ತೆ ಅಗಲಗೊಳಿಸುತ್ತಿದ್ದಾರೆ. ಅಗಲೀಕರಣಕ್ಕಾಗಿ ಈಗ ನಡೆದಿರುವ ಹೋರಾಟದಲ್ಲಿ ಯಾರದೇ ವೈಯುಕ್ತಿಕ ಸ್ವಾರ್ಥ ಇಲ್ಲ ಊರಿನ ಹಿತಾಸಕ್ತಿ ಇದೆ. ನಮ್ಮ ಪ್ರಾಣ ಕೊಟ್ಟಾದರೂ ಸರಿ ಬೇಡಿಕೆ ಈಡೇರುವ ತನಕ ಹೋರಾಟ ಕೈ ಬಿಡುವುದಿಲ್ಲ. ವಾರದೊಳಗೆ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ವಕೀಲರೂ ಸಹಿತ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪರಮೇಶ ಮಾತಿನ ವಕೀಲರು, ಸಿದ್ದರಾಜ ಹೊಳಿ, ಬಸವರಾಜ ನಂದಿಕೇಶ್ವರಮಠ, ಭೀಮನಗೌಡ ಪಾಟೀಲ, ಮಹಾಂತೇಶಗೌಡ ಬಿರಾದಾರ, ಹಿರಿಯರಾದ ಮಲಘಾಣದ ಶಿವಲಿಂಗಪ್ಪಶೆಟ್ಟಿ ಮಹಾಜನಶಟ್ರಾ, ವಿವಿಧ ಸಂಘಟನೆಗಳ ಪ್ರಮುಖರಾದ ರಾಜೇಂದ್ರಗೌಡ ರಾಯಗೊಂಡ, ಸುರೇಶ ಪಾಟೀಲ ಇಂಗಳಗೇರಿ, ಮಂಜುನಾಥ ಕುಂದರಗಿ, ಅರುಣ ಪದಕಿ, ರಾಜುಗೌಡ ತುಂಬಗಿ, ಶಬ್ಬೀರ ಬಾಗಲಕೋಟೆ ಸೇರಿದಂತೆ ಹಲವರು ಇದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.