ಕೊನೆಗೂ ಇಂದಿರಾ ಕ್ಯಾಂಟೀನ್‌ಗೆ ಚಾಲನೆ


Team Udayavani, Dec 8, 2018, 12:28 PM IST

vij-1.jpg

ವಿಜಯಪುರ: ವಿಜಯಪುರ ಮಹಾನಗರದ ಜನರಿಗೆ ಕೊನೆಗೂ ಅಗ್ಗದ ದರದಲ್ಲಿ ಬಡವರಿಗೆ ಊಟ-ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್‌ಗೆ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಚಾಲನೆ ದೊರೆತಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರು ಮಹಾನಗರ ಪಾಲಿಕೆ ಬಳಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದರು.

ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಡಾ| ದೇವಾನಂದ ಚವ್ಹಾಣ, ಮೇಯರ್‌ ಶ್ರೀದೇವಿ ಲೋಗಾಂವಿ, ಉಪ ಮೇಯರ್‌ ಗೋಪಾಲ ಘಟಕಾಂಬಳೆ, ಆಯುಕ್ತ ಔದ್ರಾಮ ಅವರು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮೊದಲ ದಿನದ ಮೊದಲ ಉಪಾಹಾರ ಸೇವಿಸಿದರು. ಇಡ್ಲಿ-ಸಾಂಬಾರ್‌, ಕೇಸರಿ ಬಾತ್‌ ಸವಿದ ಜನಪ್ರತನಿಧಿಗಳು ಉಪಾಹಾರ ಸೇವಿಸಿ ಗುಣಮಟ್ಟದ ಕುರಿತು ಸಂತೃಪ್ತಿ ವ್ಯಕ್ತಪಡಿಸಿದರು.

ನಗರದಲ್ಲಿ ಸೊಲ್ಲಾಪುರ ರಸ್ತೆ ಕೈಗಾರಿಕಾ ತರಬೇತಿ ಕೇಂದ್ರದ ಆವರಣ, ಎಪಿಎಂಸಿ ಆವರಣ, ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಲಾಗಿದೆ. ಈ ಎಲ್ಲ ಕ್ಯಾಂಟೀನ್‌ ಗಳಲ್ಲಿ ಇನ್ನು 5 ರೂ.ಗೆ ಉಪಾಹಾರ, 10 ರೂ.ಗೆ ಮಧ್ಯಾಹ್ನ ಹಾಗೂ ರಾತ್ರಿ ಊಟ ನೀಡುವ ವ್ಯವಸ್ಥೆಗೆ ಇದೆ. ಪ್ರತಿ ಕ್ಯಾಂಟೀನ್‌ನಲ್ಲಿ ತಲಾ 500 ಜನರಿಗೆ ಊಟ-ಉಪಾಹಾರದ ವ್ಯವಸ್ಥೆ ಇರಲಿದೆ. 

ಕಲ್ಕೂರ ರೆಫ್ರೀಜ್‌ರೇಷನ್‌ ಮತ್ತು ಕಿಚನ್‌ ಇ ಪ್ರಕ್ಯೂರ್‌ವೆುಂಟ್‌ ಪ್ರೈ ಲಿಮಿಟೆಡ್‌ ಹಾಗೂ ಕುಮಾರ ಇ-ಪ್ರಕ್ಯೂರ್‌ವೆುಂಟ್‌ ಇಂಡಿಯಾ ಪ್ರೈ ಲಿಮಿಟೆಡ್‌ ಕಂಪನಿಗಳು ಇಂದಿರಾ ಕ್ಯಾಂಟೀನ್‌ನಲ್ಲಿ ಬೃಹತ್‌ ಪ್ರೇಷರ್‌ ಕುಕ್ಕರ್‌, ಸ್ಟೀಮರ್‌, ಮಿಕ್ಸರ್‌ ಸೇರಿದಂತೆ ಪೂರಕವಾದ ಯಂತ್ರಗಳನ್ನು ಅಳವಡಿಸಿವೆ. ನಗರದಲ್ಲಿನ ಇಂದಿರಾ ಕ್ಯಾಂಟೀನ್‌ನ ಪ್ರತಿ ಕಟ್ಟಡಕ್ಕೆ 28 ಲಕ್ಷ ರೂ. ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ. ವೆಚ್ಚ ಮಾಡಲಾಗಿದೆ.

ಆಹಾರ ಪೂರೈಕೆಗೆ ಪ್ರತಿ ವರ್ಷ 22,26,500 ರೂ. ವೆಚ್ಚದ ಅಂದಾಜಿದೆ. ಇದರಲ್ಲಿ ಶೇ. 30ರಷ್ಟು ಕಾರ್ಮಿಕ ಇಲಾಖೆ ಹಾಗೂ ಉಳಿದ ಮೊತ್ತವನ್ನು ಮಹಾನಗರ ಪಾಲಿಕೆ ಅನುದಾನ ಅಥವಾ ಎಸ್‌ ಎಫ್‌ಸಿ ಅನುದಾನದಡಿ ಒದಗಿಸುವ ಚಿಂತನೆ ನಡೆದಿದೆ ಎಂದು ಪಾಲಿಕೆ ಆಯುಕ್ತ ಡಾ| ಔದ್ರಾಮ
ತಾಂತ್ರಿಕ ವಿವರಣೆ ನೀಡಿದರು. 

ಊಟ-ಉಪಾಹಾರದ ಮೆನು: ವಾರದ ಏಳು ದಿನವೂ ಒಂದೊಂದು ಉಪಾಹಾರ ಹಾಗೂ ವೈವಿಧ್ಯಮ ಊಟದ ಮೆನು ಇರಲಿದೆ. ಉಪಾಹಾರಕ್ಕೆ ಸೋಮವಾರ ಪುಳಿಯೋಗರೆ, ಮಂಗಳವಾರ ಖಾರಾಬಾತ್‌, ಬುಧವಾರ ಪೊಂಗಲ್‌, ಗುರುವಾರ ಕಿಚಡಿ, ಶುಕ್ರವಾರ ಚಿತ್ರಾನ್ನ, ಶನಿವಾರ ವಾಂಗಿಬಾತ್‌, ರವಿವಾರ ಕೇಸರಿಬಾತ್‌ ಇರಲಿದೆ. ಅದರಂತೆ ಮಧ್ಯಾಹ್ನ ಹಾಗೂ ರಾತ್ರಿ ಅನ್ನ, ತರಕಾರಿ, ಸಾಂಬಾರ್‌, ಮೊಸರನ್ನ ವಾರದ ಏಳು ದಿನಗಳು ಲಭ್ಯವಾಗುತ್ತಿದ್ದು, ಇದರೊಂದಿಗೆ ಆಯಾ ವಾರಕ್ಕೆ ನಿಗದಿಗೊಳಿಸಲಾಗಿರುವ ಮೆನುವಿನಂತೆ ಬೇರೆ ಬೇರೆ ಉಪಾಹಾರ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.