ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ


Team Udayavani, Dec 9, 2018, 12:17 PM IST

vij-3.jpg

ಆಲಮಟ್ಟಿ: ದೈಹಿಕ ಶಿಕ್ಷಕರು ಎಂದರೆ ಶಿಕ್ಷಣ ಇಲಾಖೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಕರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದರೊಂದಿಗೆ ಸಂಘಟಿತರಾಗಬೇಕು ಎಂದು ಕಲಬುರಗಿ ಆಯುಕ್ತರ ಕಚೇರಿ ದೈಹಿಕ ಶಿಕ್ಷಣ ಉಪನಿರ್ದೇಶಕ ಟಿ.ಎಚ್‌. ಮೇಲಿನಕೇರಿ ಹೇಳಿದರು.

ಇಲ್ಲಿಯ ಮಂಜಪ್ಪ ಹಡೇಕರ ಸ್ಮಾರಕ ಸಭಾಭವನದಲ್ಲಿ ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಸವನಬಾಗೇವಾಡಿ, ಎಂಎಚ್‌ಎಂಪ್ರೌಢಶಾಲೆ ಆಲಮಟ್ಟಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ-ಪ್ರೌಢಶಾಕೆ
ದೈಹಿಕ ಶಿಕ್ಷಕರ ವಿಷಯ ವೇದಿಕೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಶೈಕ್ಷಣಿಕ ರಂಗದಲ್ಲಿ ಉಳಿದ ವಿಷಯಗಳಂತೆ ದೈಹಿಕ ಶಿಕ್ಷಣವೂ ಅತಿ ಮುಖ್ಯವಾಗಿದೆ. ಇದರಿಂದ ಮಕ್ಕಳು ಕೊಠಡಿಯಲ್ಲಿ ಆರೋಗ್ಯಭರಿತವಾಗಿ ಉತ್ಸಾಹಿಗಳಾಗಿ ಉಳಿದ ವಿಷಯಗಳ ಕುರಿತು ಶಿಕ್ಷಕರು ಬೋಧನೆ ಮಾಡಿರುವುದನ್ನು ತದೇಕಚಿತ್ತದಿಂದ ಆಲಿಸಲು ದೈಹಿಕ ಶಿಕ್ಷಣವೂ ಅತಿ ಮುಖ್ಯವಾಗಿದೆ. ಆದರೂ ಇಲಾಖೆಯಲ್ಲಿ ಉಳಿದ ವಿಷಯ ಶಿಕ್ಷಕರಿಗೆ ಸಿಗುವ ಅಧಿಕಾರ, ಗೌರವ ಸಿಗುವಂತಾಗಲು ದೈಹಿಕ ಶಿಕ್ಷಕರಲ್ಲಿ ಮುಂದಾಳತ್ವ-ನಾಯಕತ್ವದ ಗುಣ ಮೂಡಿಬರಬೇಕು. ಅಂದಾಗ ದೈಹಿಕ ಶಿಕ್ಷಣ ಬಲಿಷ್ಠವಾಗಿ ಬೆಳೆದು ಬರಲು ಸಾಧ್ಯ ಎಂದು ಹೇಳಿದರು.

ದೈಹಿಕ ಶಿಕ್ಷಣ ಎನ್ನುವುದು ಒಂದು ಯಂತ್ರವಿದ್ದ ಹಾಗೆ. ಬಟನ್‌ ಅದುಮಿದಾಗ ತನ್ನಿಂದ ತಾನೆ ಕೆಲಸ ಆರಂಭಗೊಳ್ಳುವಂತೆ ಶಿಕ್ಷಕರು ಕ್ರಿಯಾಶೀಲರಾಗಿರಬೇಕು. ವೃತ್ತಿಯಲ್ಲಿ ಆಸಕ್ತಿ, ಶ್ರದ್ಧೆ-ಸತತ ಹೊಸತನದ ಸ್ವಪ್ರಯತ್ನದಿಂದ ಏನಾದರು ಸಾಧಿಸುವ ಛಲ ಇರಿಸಿಕೊಂಡು ಶಿಸ್ತು-ಬದ್ಧತೆ-ಉತ್ತಮ ಸಂಸ್ಕಾರಗಳನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಹುರುಪು ಹುಮ್ಮಸ್ಸು-ಲವಲವಿಕೆಯಿಂದ ದೈಹಿಕ ಕಸರತ್ತಿನೊಂದಿಗೆ ಮಕ್ಕಳಲ್ಲಿ ಕ್ರೀಡಾಸಕ್ತಿ-ಬೆಳೆಸಲು ದೈಹಿಕ ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.

ಮುದ್ದೇಬಿಹಾಳ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ ಮಾತನಾಡಿದರು. ಹಿರಿಯ ಶಿಕ್ಷಕ ಎಸ್‌.ಐ. ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು. ಬಸವನ ಬಾಗೇವಾಡಿ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಟಿ.ಎಚ್‌. ಮೇಲಿನಕೇರಿ ಅವರನ್ನು ಸನ್ಮಾನಿಸಲಾಯಿತು.

ದೈಹಿಕ ಶಿಕ್ಷಣಾಧಿಕಾರಿಗಳಾದ ಎಂ.ಬಿ. ಹೆಬ್ಟಾಳ, ಎ.ಎಂ. ಬಿರಾದಾರ, ಎ.ಬಿ. ಕೌಲಗಿ, ಎಸ್‌.ಜಿ. ಪಾಟೀಲ, ಬಿ.ಎಂ. ಪಾಟೀಲ, ಎಂ.ಕೆ. ಚೌಧರಿ, ಮಂದೇವಾಲೆ, ಜುಳಜಳಿ, ಮಮದಾಪುರ, ವಿ.ಎಂ. ಪಟ್ಟಣಶೆಟ್ಟಿ ಇದ್ದರು. ಬಿ.ಎಂ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಮಹೇಶ ಗಾಳಪ್ಪಗೋಳ ನಿರೂಪಿಸಿದರು. ಗಲಗಲಿ ವಂದಿಸಿದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.