ಗುಂಡಕನಾಳದಲ್ಲಿ ಮಹಿಳೆಯ ಕತ್ತು ಹಿಸುಕಿ ಬರ್ಬರ ಕೊಲೆ


Team Udayavani, Dec 11, 2018, 11:30 AM IST

vij-1.jpg

ತಾಳಿಕೋಟೆ: ಮಹಿಳೆಯೊಬ್ಬಳ ಮನೆಗೆ ನುಗ್ಗಿ ರಾತ್ರಿ ಹೊತ್ತು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಲ್ಲದೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತಾಲೂಕಿನ ಗುಂಡಕನಾಳ ಗ್ರಾಮದಲ್ಲಿ ರವಿವಾರ ರಾತ್ರಿ ಹೊತ್ತು ನಡೆದಿದೆ. ಗುಂಡಕನಾಳ ಗ್ರಾಮದ ಶಂಕ್ರವ್ವ ಪ್ರಭು ಹರಿಜನ (28)
ಕೊಲೆಗೀಡಾದ ಮಹಿಳೆ. ಗಂಡ ಪ್ರಭು ಹರಿಜನ ವನಹಳ್ಳಿ ಗ್ರಾಮದ ಜಾತ್ರೆಗೆ ತೆರಳಿದ್ದರಿಂದ ಶಂಕ್ರವ್ವ ತನ್ನ 6 ವರ್ಷದ ಮಗ ವಿಕ್ರಮ ಜೊತೆಯಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಇದನ್ನು ಗಮನಿಸಿ ರಾತ್ರಿ ಹೊತ್ತು ಆಗಮಿಸಿದ ದುಷ್ಕರ್ಮಿಗಳಾದ ಮಾಳಪ್ಪ ಮಲ್ಲಪ್ಪ ಗುಡಿಮನಿ ಹಾಗೂ ಶಿವಪ್ಪ ಹನುಮಂತ ಚಲವಾದಿ ಮತ್ತಿತರರು ಸೇರಿ ರಾತ್ರಿ 12ರ ನಂತರ ಮನೆಗೆ ನುಗ್ಗಿ ಮಹಿಳೆಯನ್ನು ಚೀರಾಡದಂತೆ ಕುತ್ತಿಗೆ ಭಾಗ ಹಿಡಿದು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆಂದು ಶಂಕ್ರವ್ವಳ ಪತಿ ಪ್ರಭು ಹರಿಜನ ತಾಳಿಕೋಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶ್ವಾನದಳದಿಂದ ಪರಿಶೀಲನೆ: ಶ್ವಾನದಳದೊಂದಿಗೆ ಆಗಮಿಸಿದ ಪೊಲೀಸರು, ಬೆರಳಚ್ಚು ತಜ್ಞರು ಘಟನೆ ನಡೆದ ಸ್ಥಳದಿಂದ ಪರಿಶೀಲನೆಗೆ ಮುಂದಾದರು. ಆ ಸಮಯದಲ್ಲಿ ನಾಯಿಗಳು ಮನೆ ಅಕ್ಕಪಕ್ಕದಲ್ಲಿ ಸುತ್ತು ಹೊಡೆದು ಮರಳಿ ಅದೇ ಸ್ಥಳಕ್ಕೆ ಆಗಮಿಸಿ ನಿಂತವು. ಇದರಿಂದ ಪೊಲೀಸರು ಆರೋಪಿತರು ಇದೇ ಸ್ಥಳದವರಾಗಿದ್ದಾರೆಂಬ ಸಂಶಯ ಪಡುವಷ್ಟರಲ್ಲಿಯೇ ಸ್ಥಳೀಯ ಪೊಲೀಸರು ಆರೋಪಿತರ ಸುಳಿವನ್ನು ಅರಿತು ಮಾಳಪ್ಪ ಮಲ್ಲಪ್ಪ ಗುಡಿಮನಿ ಹಾಗೂ ಶಿವಪ್ಪ ಹನುಮಂತ ಚಲವಾದಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಎಸ್‌ಪಿ ಭೇಟಿ: ಘಟನೆ ನಡೆದ ಗುಂಡಕನಾಳ ಗ್ರಾಮಕ್ಕೆ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಪ್ರಕಾಶ ನಿಕಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ ಘಟನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಕೂಡಲೇ ಆರೋಪಿತರ ಪತ್ತೆ ಹಚ್ಚಲಾಗಿದೆ ಶೀಘ್ರದಲ್ಲಿಯೇ ಅಗತ್ಯ ಕ್ರಮ ಜರುಗಿಸಲಾಗುವುದೆಂದು ಸಂಬಂಧಿಕರಿಗೆ ವಿವರಿಸಿದರು. ಘಟನೆ ಬಗ್ಗೆ ಮಾಹಿತಿ ಅರಿತುಕೊಳ್ಳುವುದರೊಂದಿಗೆ ಆರೋಪಿತರ ಸುಳಿವು ಅರಿತು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ಪೇದೆಗಳಾದ ಸಂಜೀವ ಜಾಧವ, ಎಂ.ಎಲ್‌. ಪಟ್ಟೇದ, ಬಿ.ಜಿ. ಬಲಕಲ್ಲ ಅವರಿಗೆ ಎಸ್‌ಪಿ ವೈಯಕ್ತಿಕವಾಗಿ ತಲಾ 2 ಸಾವಿರ ರೂ. ಬಹುಮಾನ ನೀಡಿದರು.

ಡಿಎಸ್‌ಪಿ ಮಹೇಶ್ವರಗೌಡ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸೈ ಜಿ.ಎಸ್‌. ಬಿರಾದಾರ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬುದು ವೈದ್ಯಕೀಯ ಪರೀಕ್ಷೆ ನಂತರ ತಿಳಿಯಲಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ. ಆರೋಪಿತರಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 

ಘಟನೆಗೆ ಸಂಬಂಧಿಸಿ ಸಂಶಯಾಸ್ಪದ ಮೇಲೆ ಅದೆ ಗ್ರಾಮದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಲಾಗಿದೆ. ಅವರೇ ಈ ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆ ನಂತರ ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬುದು ದೃಢಪಡಲಿದೆ. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ.
ಪ್ರಕಾಶ ನಿಕ್ಕಂ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.