ಚಿತ್ರ ಕಲಾವಿದರಿಗೆ ಹತಾಶೆ ಸಲ್ಲ


Team Udayavani, Dec 15, 2018, 1:42 PM IST

vij-2.jpg

ವಿಜಯಪುರ: ಜಗತ್ತಿನ ಎಲ್ಲ ಕಲಾವಿದರಿಗೂ ಬಡತನ ಹಾಗೂ ಕಷ್ಟದ ಬದುಕು ಸಹಜವಾಗಿಯೇ ಇವೆ. ಹೀಗಾಗಿ ಕಲಾವಿದರು ಹತಾಶರಾಗಿ ತಮ್ಮ ಆಸ್ಮಿತೆಯಾಗಿರುವ ಕಲೆಯಿಂದ ವಿಮುಖರಾಗದಿರಿ ಎಂದು ಖ್ಯಾತ ಚಿತ್ರಕಲಾವಿದ,
ಲಲಿತಕಲಾ ಆಕಾಡೆಮಿ ಮಾಜಿ ಸದಸ್ಯ ಡಾ| ಜಿ.ಎಸ್‌. ಭೂಸಗೊಂಡ ವಿಷಾದಿಸಿದರು.

ಶುಕ್ರವಾರ ನಗರದಲ್ಲಿ ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಎರಡನೇ ಅವಧಿಯ ಚಿತ್ರ ಸಿಂಚನ ಎಂಬ ಪಠ್ಯಪುಸ್ತಕ ಆಧಾರಿತದ ಒಂದು ದಿನದ ಜಿಲ್ಲಾಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚಿತ್ರಕಲಾ ಶಿಕ್ಷಕರು ಧೃತಿಗಡೆದ ಕಲಾವೃತ್ತಿ ಮುಂದುವರಿಸಿಕೊಂಡು ಹೋಗಬೇಕು. ಕಲೆಯನ್ನು ಮಕ್ಕಳಲ್ಲಿ ಜಾಗೃತಿಗೊಳಿಸಿ ಅರಳಿಸಬೇಕು. ಕಲೆಯ ಅಭಿರುಚಿ ಕಳೆದುಕೊಳ್ಳದೆ ಕಲಾ ಕ್ಷೇತ್ರ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ-ಧರ್ಮವಾಗಿದೆ. ಕಾರಣ ಹತಾಶರಾಗಿ ಚಿತ್ರಕಲಾ ಕ್ಷೇತ್ರದಿಂದ ವಿಮುಖರಾಗದೇ ಖುಷಿಯಿಂದ ಕಾಯಕ ನಿರ್ವಹಿಸಬೇಕು. ಎಲ್ಲೆವರೆಗೆ ನಿಮ್ಮ ಸಾಮರ್ಥ್ಯ ವರೆಗೆ ಹಚ್ಚುವುದಿಲ್ಲವೋ ಅಲ್ಲಿವರೆಗೆ ನಿಮ್ಮ ಅಸ್ತಿತ್ವಕ್ಕೆ ಹೆಣಗಬೇಕಾಗುತ್ತದೆ. ಸಾಧಿಸುವ ಛಲಗಾರಿಕೆ ಇದ್ದಲ್ಲಿ ಸಂಕಷ್ಟಗಳನ್ನು ಸಕಾರಾತ್ಮಕ ಸವಾಲುಗಳನ್ನು ಸ್ವೀಕರಿಸಿ ಕಲಾಪ್ರೌಢಿಮೆ ಮೆರೆಯಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ಎಸ್‌.ಐ. ಬಗಲಿ ಮಾತನಾಡಿ, ಇಂದಿನ ಯುವ ಸಮೂಹ ಕ್ರಿಯಾಶೀಲರಾಗಿ ಚಟುವಟಿಕೆ ಹಾಗೂ ಲವಲವಿಕೆಯಿಂದ ಶೈಕ್ಷಣಿಕ ಕಾರ್ಯ ಕೈಗೊಳ್ಳಲು ಚಿತ್ರಕಲಾ ಶಿಕ್ಷಣದ ಅಭ್ಯಾಸ ಪೂರಕವಾಗಿದೆ. ಒಗ್ಗಟ್ಟಿನಿಂದ ಕೆಲಸ
ನಿರ್ವಹಿಸಿ ಚಿತ್ರಕಲಾ ಶಿಕ್ಷಕರ ಸಂಘಟನೆ ಇನ್ನಷ್ಟು ಬಲಪಡಿಸಬೇಕು. ವೈಯಕ್ತಿಕ ಜೀವನದಲ್ಲಿ ಸ್ವಲ್ಪ ಸಮಯ ಮೀಸಲಿರಿಸಿ ತ್ಯಾಗಭಾವದಿಂದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ವಿನಯತೆಯಿಂದ ಪ್ರಾಮಾಣಿಕತೆಯಿಂದ ತನುಮನ ಧನದಿಂದ ಒಲವು ತೋರಿ ಶ್ರಮಿಸಿದರೆ ಖಂಡಿತ ಸಂಘ ಬಲಗೊಳ್ಳುತ್ತದೆ ಎಂದರು.

ಕೋಲ್ಯಾಜ್‌ ಆರ್ಟ ಕಲೆಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ಸಿಂದಗಿಯ ಕಲಾವಿದ ಈರಣ್ಣ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಈರಣ್ಣ ಅವರು ಮರದ ಚುಕ್ಕೆಯಿಂದ ಸುಂದರ ಭಾವಚಿತ್ರ ನಿರೂಪಿಸಿ ಗಮನ ಸೆಳೆದರು.
 
ಸರಕಾರಿ ಪಿ.ಯು. ಕಾಲೇಜ್‌ ಹೈಸ್ಕೂಲ್‌ ವಿಭಾಗದ ಹಿರಿಯ ಶಿಕ್ಷಕ ಪಿ.ಎಸ್‌. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜಿ.ಎಸ್‌. ಪಾಟೀಲ, ಆರ್‌.ಎಸ್‌. ಬಿರಾದಾರ, ಗವೂರ, ಸಂಜೀವ ತೊತಭಾಗಿ, ಬಿ.ಟಿ. ಹುಲ್ಲೂರ, ನಾಗರಾಜ ಪತ್ತಾರ, ಬಿ.ಆರ್‌. ಪ್ರಧಾನಿ ವೇದಿಕೆಯಲ್ಲಿದ್ದರು. ಎಸ್‌.ಐ. ಬಗಲಿ ಸ್ವಾಗತಿಸಿದರು. ಬಾಪುಗೌಡ ಭಂಟನೂರ ನಿರೂಪಿಸಿದರು. ಸಂಜೀವ ಬಡಿಗೇರ ವಂದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.