ಇಂಡಿ ಕ್ಷೇತ್ರಕ್ಕೆ ಅಧ್ಯಕ್ಷಗಿರಿ ಖಚಿತ


Team Udayavani, Dec 20, 2018, 1:08 PM IST

vij-4.jpg

ಇಂಡಿ: ಜಿಲ್ಲಾ ಪಂಚಾಯತ್‌ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಪ್ರಾರಂಭಗೊಂಡು ಕೊನೆಗೂ ಕಾಂಗ್ರೆಸ್‌ನ ಇಂಡಿ ಕ್ಷೇತ್ರದ ಸಾಲೋಟಗಿ ಜಿಪಂ ಸದಸ್ಯ ಶಿವಯೋಗೆಪ್ಪ ನೇದಲಗಿ ಹಾಗೂ ಬಬಲೇಶ್ವರ ಕ್ಷೇತ್ರದ ಸುಜಾತಾ ಕಳ್ಳಿಮನಿ ಅವರಿಗೆ ಅರ್ಧ-ಅರ್ಧ ಅಧಿಕಾರ ಹಂಚಿಕೊಳ್ಳಲು ಕಾಂಗ್ರೆಸ್‌ ಹೈ ಕಮಾಂಡ್‌ ತಿಳಿಸಿದೆ.

ಬುಧವಾರ ಕಾಂಗ್ರೆಸ್‌ನ 13 ಜಿಪಂ ಸದಸ್ಯರು ಬೆಳಗಾವಿಗೆ ತೆರಳಿ ಪಕ್ಷದ ಪ್ರಮುಖರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ಎಸ್‌.ಆರ್‌. ಪಾಟೀಲ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಭೇಟಿಯಾಗಿದ್ದಾರೆ. 

ಮುಖಂಡರು ತಮ್ಮ ಸಮ್ಮುಖದಲ್ಲಿ ಇಬ್ಬರನ್ನೂ ಕರೆಸಿ ಅರ್ಧ-ಅರ್ಧ ಅವಧಿಗೆ ಅಧಿಕಾರ ಹಂಚಿಕೊಳ್ಳಲು ತಿಳಿಸಿದ್ದಾರೆ ಎಂದು ತಿಳಿದು ಬಂದಿದ್ದು ಪ್ರಥಮವಾಗಿ ಇಂಡಿ ಕ್ಷೇತ್ರದ ಶಿವಯೋಗೆಪ್ಪ ನೇದಲಗಿ ಅವರನ್ನು ಅಧ್ಯಕ್ಷ ಸ್ಥಾನಕ್ಕೇರಿಸಲು ಮುಖಂಡರು ಸೈ ಎಂದಿದ್ದಾರೆ ಎನ್ನಲಾಗಿದೆ.

ಬಹು ವರ್ಷಗಳಿಂದ ಇಂಡಿ ಕ್ಷೇತ್ರಕ್ಕೆ ಅಧ್ಯಕ್ಷಗಿರಿ ಸಿಕ್ಕಿಲ್ಲ ಮತ್ತು ನೀಲಮ್ಮ ಮೇಟಿ ಹಾಗೂ ಸುಜಾತಾ ಕಳ್ಳಿಮನಿ ಒಂದೇ ಸಮಾಜದವರಾಗಿದ್ದು ಈಗಾಗಲೆ ನೀಲಮ್ಮ ಮೇಟಿ ಪ್ರಥಮವಾಗಿ ಅಧಿಕಾರ ಅನುಭವಿಸಿದ್ದಾರೆ. ಹೀಗಾಗಿ ನೇದಲಗಿ ಅವರಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಎರಡನೇ ಅವಧಿಗೆ ಇಂಡಿ ಕ್ಷೇತ್ರಕ್ಕೆ ಜಿಪಂ
ಅಧ್ಯಕ್ಷಗಿರಿ ಒಲಿಯಬೇಕಿದೆ.

ಆದರೆ ಬಬಲೇಶ್ವರ ಕ್ಷೇತ್ರದ ಸುಜಾತಾ ಕಳ್ಳಿಮನಿ ಹಾಗೂ ಇಂಡಿ ಕ್ಷೇತ್ರದ ನೇದಲಗಿ ಪೈಪೋಟಿ ಒಡ್ಡಿದ್ದರಿಂದ ಇಬ್ಬರಿಗೂ ಸಮಾಧಾನ ಮಾಡಲು 14-14 ತಿಂಗಳು ಅಧಿಕಾರ ಹಂಚಿಕೊಳ್ಳಲು ಮುಖಂಡರು ತಿಳಿಸಿದ್ದರಿಂದ ನೇದಲಗಿ ಅವರಿಗೆ ಅಧಿಕಾರ ಸಿಕ್ಕರೆ ಕೇವಲ 14 ತಿಂಗಳು ಅಧ್ಯಕ್ಷರಾಗಲಿದ್ದಾರೆ. 

ಈ ಮೊದಲೇ ಇಂಡಿ ಕ್ಷೇತ್ರದ ಸಾಲೋಟಗಿ ಜಿಪಂ ಸದಸ್ಯ ಶಿವಯೋಗೆಪ್ಪ ನೇದಲಗಿ ಅವರನ್ನು ಅಧ್ಯಕ್ಷ ಮಾಡುವುದಕ್ಕಾಗಿ ಶಾಸಕ ಯಶವಂತರಾಯಗೌಡ ಪ್ರಯತ್ನಿಸಿದ್ದರು. ಈಗ ಎರಡನೇ ಅವಧಿಗಾದರೂ ಅಧ್ಯಕ್ಷರನ್ನಾಗಿ ಮಾಡಲು ಶಾಸಕರು ಪಣ ತೊಟ್ಟಿದ್ದರು. ಕೊಟ್ಟ ಮಾತಿನಂತೆ ಶಾಸಕ ಯಶವಂತರಾಯಗೌಡ ಬುಧವಾರ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ನೇದಲಗಿ ಅವರನ್ನು ಅಧ್ಯಕ್ಷ ಮಾಡುವ ತಮ್ಮ ಮಾತು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಬಹು ವರ್ಷಗಳ ಹಿಂದೆ ತಾಲೂಕಿನ ಅಗರಖೇಡದ ಅನಿತಾ ಪಾಂಡ್ರೆ ಅಧ್ಯಕ್ಷರಾಗಿದ್ದರು. ತದ ನಂತರ 2004ರಲ್ಲಿ ಹತ್ತು ತಿಂಗಳ ಅವಧಿಗೆ ಈಗಿನ ಶಾಸಕ ಯಶವಂತರಾಯಗೌಡ ಪಾಟೀಲರು ಅಧ್ಯಕ್ಷರಾಗಿದ್ದರು. 14 ವರ್ಷಗಳ ನಂತರ ಕ್ಷೇತ್ರಕ್ಕೆ ಮತ್ತೆ ಜಿಪಂ ಅಧ್ಯಕ್ಷಗಿರಿ ಒಲಿಯಲಿದೆ.

42 ಸಂಖ್ಯಾಬಲ ಹೊಂದಿದ ಜಿಪಂನಲ್ಲಿ 20 ಬಿಜೆಪಿ, 18 ಕಾಂಗ್ರೆಸ್‌, 3 ಜೆಡಿಎಸ್‌ ಹಾಗೂ ಒರ್ವ ಪಕ್ಷೇತರ ಸದಸ್ಯರಿದ್ದು ನೇದಲಗಿ ಅವರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷೇತರ ಸದಸ್ಯರೆಲ್ಲರೂ ಬೆಂಬಲಿಸಲಿದ್ದು ತಾವೇ ಅಧ್ಯಕ್ಷರಾಗುತ್ತೇವೆ ಎಂದು ನೇದಲಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.