ತೊಗರಿ ನೋಂದಣಿಗೆ ರಾತ್ರಿಯಿಡೀ ಜಾಗರಣೆ
Team Udayavani, Jan 4, 2019, 8:56 AM IST
ಹೂವಿನಹಿಪ್ಪರಗಿ: ರೈತರು ಬೆಳೆದ ತೊಗರಿಯಲ್ಲಿ ಸರಕಾರ ಬೆಂಬಲ ಬೆಲೆಯಲ್ಲಿ ಖರೀದಿಸಲು ಆಯಾ ಪಿಕೆಪಿಎಸ್ನಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಸಮೀಪದ ಕುದರಿ ಸಾಲವಾಡಗಿ ಗ್ರಾಮದ ಪಿಕೆಪಿಎಸ್ ಬ್ಯಾಂಕ್ ನಲ್ಲಿ ತೊಗರಿ ಖರೀದಿ ಕೇಂದ್ರ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ಅನಿಲಕುಮಾರ ದೇಸಾಯಿ ಮಾತನಾಡಿ, ರೈತರ ಅನುಕೂಲದ ದೃಷ್ಟಿಯಿಂದ ಸರಕಾರ ತೊಗರಿ ಖರೀದಿ ಕೇಂದ್ರವನ್ನು ನೀಡಿ ನಿಮಗೆ ಬೆಂಬಲ ಬೆಲೆ ನೀಡುತ್ತಿದೆ. ರೈತರು ಒಬ್ಬರಿಗೊಬ್ಬರು ಜಗಳವಾಡದೆ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದರು.
ಮೊದಲ ದಿನದಂದು ರೈತರು ರಾತ್ರಿಯಡೀ ಚಳಿ ಲೆಕ್ಕಿಸದೆ ಸರದಿ ಸ್ಥಳದಲ್ಲೆ ಮಲಗಿದ್ದರು. ನೋಂದಣಿಯ ಮೊದಲ ದಿನವಾದ ಬುಧವಾರ ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ನೋಂದಣಿ ಕಾರ್ಯ ಸ್ಥಗಿತವಾಗಿತ್ತಾದರೂ ನಂತರ ಪುನಃ ಆರಂಭಿಸಿ ರೈತರ ಹಿತ ಕಾಪಾಡುವಲ್ಲಿ ಸಿಬ್ಬಂದಿ ಮುಂದಾದರು. ಎರಡನೇಯ ದಿನ ಗುರುವಾರ ಸರದಿಯಲ್ಲಿ ನಿಂತು ಸರಳ ರೀತಿಯಲ್ಲಿ ರೈತರು ತಮ್ಮ ನಂಬರ್ ಪಡೆದರು. ಗುರುವಾರ 120ಕ್ಕೂ ಹೆಚ್ಚು ರೈತರು ತಮ್ಮ ಹೆಸರು ನೋಂದಾಯಿಸಿದ್ದಾರೆ. ಗುರುವಾರ ಅವಕಾಶ ದೊರೆಯದ ರೈತರಿಗೆ ಕೋಪನ್ ನೀಡಿ ನಾಳೆ ಬನ್ನಿ ಎಂದು ಹೇಳಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ