ಮುಖ್ಯಮಂತ್ರಿ ಬಳಿ ರೈತರ ನಿಯೋಗ ತೆರಳಲು ನಿರ್ಧಾರ: ಸಾಮೀಜಿ


Team Udayavani, Jan 5, 2019, 9:42 AM IST

vij-2.jpg

ಹೂವಿನಹಿಪ್ಪರಗಿ: ತಾಲೂಕಿನ ಕುದರಿಸಾಲವಾಡಗಿ ಮುಖ್ಯ ಕಾಲುವೆಯಿಂದ 12 ಕೆರೆಗಳಿಗೆ ನೀರನ್ನು ಪೆಬ್ರವರಿ ಅಂತ್ಯದಲ್ಲಿ ಬಿಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಿನ್ನೆಲೆ ರೈತರು ನಡೆಸುತ್ತಿರುವ ಧರಣಿಯನ್ನು ಅಂತ್ಯಗೊಳಿಸಲಾಗುವುದೆಂದು
ಯರನಾಳದ ಸಂಗನಬಸವ ಸ್ವಾಮೀಜಿ ಹೇಳಿದರು.

ಸ್ಥಳೀಯ ನಾಡ ಕಚೇರಿ ಆವರಣದಲ್ಲಿ ನಡೆಯುತ್ತಿರುವ ರೈತ ಸಂಘ, ವಿವಿಧ ಮಠಾಧೀಶರು ಹಾಗೂ ಕರವೇ ನಡೆಸುತ್ತಿರುವ 4ನೇ ದಿನದಲ್ಲಿ ಮುಂದುವರಿದಿದ್ದ ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.

ರೈತರು ಹೋರಾಟ ನಡೆಸುತ್ತಿರುವ ಪ್ರತಿಫಲವಾಗಿ ಕಾಮಗಾರಿ ಮುಕ್ತಾಯ ಹಂತ ತಲುಪಿದೆ. ಆದರೆ ಬಳೂತಿ ಜಾಕ್‌ವೆಲ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿರುವುದರಿಂದ 12 ಕೋಟಿಗೂ ಅಧಿಕ ಬೆಲೆ ಬಾಳುವ ವಿದ್ಯುತ್‌ ಉಪಕರಣಗಳು ಸುಟ್ಟು ಹೋಗಿದ್ದು ಕೆಬಿಜೆಎನ್‌ಎಲ್‌ ಇಲಾಖೆ ಅಧಿಕಾರಿಗಳು ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದರು.

ಸರಕಾರ ಬಳೂತಿಯ ಜಾಕ್‌ವೆಲ್‌ ಉಪಕರಣದ ಕೆಲಸವನ್ನು ಟೆಂಡರ್‌ ಕರೆದು ಕಾಮಗಾರಿ ಪೂರ್ಣಗೊಳಿಸಬೇಕಾಗುತ್ತದೆ. ಅದಕ್ಕೆ 4 ತಿಂಗಳ ಕಾಲಾವಕಾಶ ಬೇಕು ಎಂದು ಸಂಬಂಧಿಸಿದ ಅಧಿಕಾರಿಗಳು ಸ್ವಾಮೀಜಿಗಳ ಹಾಗೂ ರೈತರ ನೇತೃತ್ವದ ತಂಡ ಬಳೂತಿಯ ಘಟನಾ ಸ್ಥಳಕ್ಕೆ ಹೋದಾಗ ತಿಳಿಸಿದ್ದಾರೆ. ಆದರೆ ನಾವು ಜ. 7 ಅಥವಾ 8ರೊಳಗೆ ರೈತರನ್ನು ಕರೆದುಕೊಂಡು ಬೆಂಗಳೂರಿಗೆ ನಿಯೋಗ ಹೋಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಅರೊಗ್ಯ ಸಚಿವ ಶಿವಾನಂದ ಪಾಟೀಲರಿಗೆ
ತಿಳಿಸಿದಾಗ ಅದಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರ ನೇತೃತ್ವದ ತಂಡದವರು ಈ ವಿಷಯ ಮನವರಿಕೆ ಮಾಡಿ, ಶೀಘ್ರವೇ ಬಳೂತಿ ಜಾಕ್‌ವೆಲ್‌ ಮಶೀನರಿ ಕಾಮಗಾರಿ ಪೂರ್ಣಗೊಳಿಸಿ ಫೆಬ್ರವರಿ ಅಂತ್ಯಕ್ಕೆ ನೀರು ಬಿಡುವಂತೆ ಒತ್ತಾಯ ಮಾಡೋಣ. ಅದಕ್ಕೆ
ಬೆಂಗಳೂರಿಗೆ ಆಗಮಿಸವವರು ರೈತ ಮುಖಂಡ ಅರವಿಂದ ಕುಲಕರ್ಣಿ ಅವರನ್ನು ಸಂಪರ್ಕಿಸಲು ತಿಳಿಸಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಬಳೂತಿ ಜಾಕ್‌ವೆಲ್‌ ಬಳಿಯ ಮಶಿನರಿಗಳಿಗೆ ಆಕಸ್ಮಿಕ ಬೆಂಕಿ ತಗಲಿರುವ ಕಾರಣ ಕೆರೆಗಳಿಗೆ ನೀರು ಬರುವುದು ವಿಳಂಬವಾಗುತ್ತದೆ. ಆದರೆ ಪೆಬ್ರವರಿ ಅಂತ್ಯದಲ್ಲಿ ನೀರು ಬಿಡುವಂತೆ ಸರಕಾರಕ್ಕೆ ಒತ್ತಾಯಿಸೋಣ ಎಂದು ಹೇಳಿದರು. ಗ್ರೇಡ್‌-2 ತಹಶೀಲ್ದಾರ್‌ ಪಿ.ಜಿ. ಪವಾರ ಅವರು ಈ ವಿಷಯವನ್ನು ಸರಕಾರದ ಗಮನಕ್ಕೆ ತರಲಾಗುವುದೆಂದು ತಿಳಿಸಿದರು. ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ರೈತ ಸಂಘದ ತಾಲೂಕಾಧ್ಯಕ್ಷ ಸಿದ್ರಾಮ ಅಂಗಡಗೇರಿ, ಉಪ ತಹಶೀಲ್ದಾರ್‌ ಜಗದೀಶ ಹಾರಿವಾಳ, ರೈತ ಮುಖಂಡರಾದ ಗಿರೀಶ ಶಿವಯೋಗಿ, ಸಿದ್ದಲಿಂಗಯ್ಯ ಹಿರೇಮಠ, ಸಿದ್ದು ಹಾದಿಮನಿ, ರಮಜಾನ ಮುಜಾವರ, ಅಶೋಕ ಶಿವಯೋಗಿ, ಪರಮಣ್ಣ ಭಜಂತ್ರಿ, ಪಾವಡೆಪ್ಪ ಹಳೆಗೌಡರ, ಮಲ್ಲಣ್ಣ ಭಜಂತ್ರಿ, ಶರಣಗೌಡ ಪಾಟೀಲ, ಲಾಲ್‌ಸಾಬ ಮುಲ್ಲಾ, ಹಸನಸಾಬ ಮುಲ್ಲಾ, ಸುಭಾಷ್‌ ಐಹೋಳಿ, ಎಂ.ಎ. ಪೂಜಾರಿ, ಅರವಿಂದ ಬ್ಯಾಕೋಡ
ಇದ್ದರು.

ಧರಣಿ ಅಂತ್ಯ: ಕಳೆದ ನಾಲ್ಕು ದಿನಗಳಿಂದ ಹೂವಿನಹಿಪ್ಪರಗಿ ಸೇರಿದಂತೆ ವಿವಿಧ ಗ್ರಾಮದ ಕರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನು ಶುಕ್ರವಾರ ಯರನಾಳ ಶ್ರೀಗಳ ಭರವಸೆ ಮೇರೆಗೆ ಹೋರಾಟ ಅಂತ್ಯಗೊಳಿಸಿ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಲು ರೈತರು ಇದೇ ಸಂದರ್ಭದಲ್ಲಿ ನಿರ್ಧರಿಸಿದರು.

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

court

Vijayapura: ಪೋಕ್ಸೋ ಆರೋಪಿಗೆ 5 ವರ್ಷ, ಗಾಂಜಾ ಬೆಳದವನಿಗೆ 3 ವರ್ಷ ಜೈಲು ಶಿಕ್ಷೆ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.