ಹಿಂದುಳಿದ‌ ವರ್ಗಕ್ಕೆ ಮೀಸಲು-ಬಿಜೆಪಿ ಸಂಭ್ರಮಾಚರಣೆ


Team Udayavani, Jan 12, 2019, 11:38 AM IST

bid-4.jpg

ವಿಜಯಪುರ: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದೇಶ್ವರ ದೇವಸ್ಥಾನದ ಎದುರು ಸಿಹಿ ಹಂಚಿ ಸಂಭ್ರಮ ಅಚರಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ದೇಶದಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಪರಿಣಾಮ ಹಲವು ವರ್ಷಗಳಿಂದ ದೇಶದ ಅರ್ಥಿಕ ಹಿಂದುಳಿದ ವರ್ಗಗಳ ಬಡ ಯುವಕರು ಮೀಸಲಾತಿ ಸೌಲಭ್ಯ ಇಲ್ಲದೇ ಆವಕಾಶ ವಂಚಿತರಾಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಹಿಂದುಳಿದ ವರ್ಗಗಳ ಜನರ ಸಂಕಷ್ಟ ಅರಿತು ಪ್ರಸಕ್ತ ಸಂಸತ್‌ ಅಧಿವೇಶನದಲ್ಲೇ ಹಿಂದುಳಿದ ವರ್ಗಗಳಿಗೆ ಶೇ. 10 ಮೀಸಲಾತಿ ಮಸೂದೆ ಮಂಡಿಸಿ ಆನುಮೋದನೆ ಪಡೆಯುವ ಮೂಲಕ ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ. ಅ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನರ ಆಭಿನಂದನೆಗೆ ಪಾತ್ರರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ವಾಲಿ ಮಾತನಾಡಿ, 1947ರ ನಂತರ ದೇಶದಲ್ಲಿ ಬಹುಪಾಲು ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸಿದ್ದರೂ ಸ್ವಾತಂತ್ರ್ಯ ನಂತರದ 72 ವರ್ಷಗಳಾದರು ಅರ್ಥಿಕ ಹಿಂದುಳಿದ ವರ್ಗಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ. ತಮ್ಮ ಓಟ್ ಬ್ಯಾಂಕ್‌ ರಾಜಕಾರಣಕ್ಕಾಗಿ ಕೆಲವು ಜಾತಿಗಳಿಗೆ ಮಾತ್ರ ಮೀಸಲಾತಿ ನೀಡಿ ತುಷ್ಟೀಕರಣ ರಾಜಕಾರಣ ಮಾಡುತ್ತಿತ್ತು. ಅ ಮೂಲಕ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಸಮಾಜ, ಜಾತಿಗಳನ್ನು ಒಡೆದಾಳುವ ನೀತಿ ಅನುಸರಿಸುತ್ತಿತ್ತು.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಇರುವ ಮೀಸಲಾತಿ ಪದ್ಧತಿ ಮತ್ತು ಜಾತಿ ಸಮೀಕರಣ ಬದಲಿಸದೆ, ಈಗಿರುವ ಯಾವ ಮೀಸಲು ಸಮುದಾಯಕ್ಕೂ ಆನ್ಯಾಯವಾಗದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿ ಇತಿಹಾಸ ಬರೆದಿದ್ದಾರೆ ಎಂದು ಬಣ್ಣಿಸಿದರು.

ಯಾವ ಜಾತಿ ಹಾಗೂ ರಾಜಕೀಯ ಪಕ್ಷಗಳು ವಿರೋಧ ಮಾಡದ ಮೀಸಲಾತಿ ಪದ್ಧತಿ ಇದಾಗಿದ್ದು, ಲೋಕಸಭೆ, ರಾಜ್ಯಸಭೆ ಎರಡರಲ್ಲೂ ಅಂಗೀಕಾರ ಪಡೆದಿದೆ. ಇದರಿಂದ ದೇಶದ ಬಹುಪಾಲು ಜನರಿಗೆ ಸಂತಸವಾಗಿದ್ದು, ಸಾಮಾನ್ಯ ವರ್ಗದಲ್ಲಿ ಬರುವ ಅರ್ಥಿಕ ಹಿಂದುಳಿದ ಜಾತಿಗಳಿಗೆ ಯುವ ಸಮೂಹಕ್ಕೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಅನುಕೂಲವಾಗಲಿದೆ. ಐತಿಹಾಸಿಕವಾದ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ದೇಶದ ಜನರ ಹಲವು ದಶಕಗಳ ಕನಸು ನನಸಾಗಿದ್ದಾರೆ ಎಂದು ಶ್ಲಾ ಸಿದರು.

ಯುವ ಮೋರ್ಚಾ ಪದಾಧಿಕಾರಿಗಳಾದ ಕಾಂತು ಶಿಂಧೆ, ಮಹೇಳ ಒಡೆಯರ್‌, ರಾಜು ಹುನ್ನೂರ, ಸಚೀನ ಪಾಟೀಲ, ಪ್ರಶಾಂತ ಅಗಸರ, ಅನೀಲ ಉಪ್ಪಾರ, ಬಸಯ್ನಾ ಗೊಳಸಂಗಿಮಠ, ಕೃಷ್ಣಾ ಗುನ್ನಾಳಕರ, ಗುರುರಾಜ ರಾವ್‌, ಸತೀಶ ಪೀರನಾಯಕ್‌, ವಿನಾಯಕ ದಹಿಂದೆ, ಶಿವಾಜಿ ಪಾಟೀಲ, ಸನ್ನಿ ಗವಿಮಠ, ಶರಣು ಲಾಳಸಂಗಿ, ಶರತಸಿಂಗ್‌ ರಜಪೂತ, ವಿಜಯ ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.