ನೀರಾವರಿ ವಂಚಿತ ಗ್ರಾಮಗಳಿಗೆ ನೀರಾವರಿ ಕಲ್ಪಿಸಿ


Team Udayavani, Jan 12, 2019, 11:45 AM IST

vij-1.jpg

ಆಲಮಟ್ಟಿ: ವಿಜಯಪುರ ಜಿಲ್ಲೆಯ ವಿವಿಧ ಗ್ರಾಮಗಳ ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನೀರಾವರಿ ವಂಚಿತ ಗ್ರಾಮಗಳಿಗೆ ಮುಳವಾಡ ಏತ ನೀರಾವರಿ ಹಂತ-3ರಲ್ಲಿ ನೀರಾವರಿಗೊಳಪಡಿಸಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘ ರಾಜ್ಯ ಘಟಕದ ವತಿಯಿಂದ ರೈತರು ಕೃಷ್ಣಾಭಾಗ್ಯಜಲ ನಿಗಮದ ಮುಖ್ಯ ಅಭಿಯಂತರರಿಗೆ ಮನವಿ ಹಾಗೂ ಜಾಲನಕ್ಷೆ ಸಲ್ಲಿಸಿದರು.

ಶುಕ್ರವಾರ ಮಧ್ಯಾಹ್ನ ಮನವಿ ಸಲ್ಲಿಸಿ ಮಾತನಾಡಿದ ಉತ್ತರ ಕರ್ನಾಟಕ ಪ್ರಾಂತ ಅಧ್ಯಕ್ಷ ಜಿ.ಎಸ್‌. ಬಗಲಿ ಅವರು, ಜಿಲ್ಲೆಯ ಆಲಮಟ್ಟಿಯಲ್ಲಿ ಬೃಹತ್‌ ಜಲಾಶಯ ನಿರ್ಮಿಸಿದ್ದರೂ ಕೂಡ ವಿಜಯಪುರ ಜಿಲ್ಲೆಯ ವಿಜಯಪುರ, ಬಬಲೇಶ್ವರ ಹಾಗೂ ಇಂಡಿ ತಾಲೂಕಿನ ಸುಮಾರು 62 ಗ್ರಾಮಗಳು ನೀರಾವರಿಯಿಂದ ವಂಚಿತಗೊಂಡಿದ್ದು ಅವುಗಳಿಗೆ ಮುಳವಾಡ ಏತ ನೀರಾವರಿ ಹಂತ-3ರಲ್ಲಿ ಕೂಡಲೇ ನೀರಾವರಿಗೊಳಪಡಿಸಿ ಕಾಲುವೆ ನಿರ್ಮಿಸಿ ರೈತರ ಜಮೀನುಗಳಿಗೆ ನೀರು ಕೊಡುವಂತಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ರೈತರ ಜಮೀನುಗಳಿಗೆ ಹಾಗೂ ವ್ಯಾಪ್ತಿಯ ಕೆರೆ ಹಾಗೂ ಬಾಂದಾರ್‌ ತುಂಬಲು ಅನುಕೂಲವಾಗುವಂತೆ ಯೋಜನೆ ಹಾಕಿಕೊಳ್ಳಬೇಕು. ಈ ಕುರಿತು ಹಲವಾರು ಬಾರಿ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರುಗಳಿಗೆ ಮನವಿ ಸಲ್ಲಿಸಿ ಈ ಯೋಜನೆಯಿಂದ ರೈತರಿಗಾಗುವ ಉಪಯೋಗದ ಕುರಿತು ಮನವರಿಕೆ ಮಾಡಲಾಗಿತ್ತು.

ಇದರಿಂದ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆದರೆ ಜಲ ಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿಗಳು ತಮ್ಮ ಇಲಾಖೆ ಕೆಳಹಂತದ ಅಧಿಕಾರಿಗಳಿಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಿದ್ದರೂ ಕೂಡ ಮುಖ್ಯ ಅಭಿಯಂತರುಗಳು ಸಂಬಂಧಿಸಿದ ಗ್ರಾಮಗಳಿಗೆ ಭೇಟಿ ನೀಡದೇ ಸತಾಯಿಸುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯ ಅಭಿಯಂತರರು, ನೀರಾವರಿಯಿಂದ ವಂಚಿತಗೊಂಡಿರುವ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಈ ಕುರಿತು ಗೊಂದಲಬೇಡ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಮುದ್ದುಗೌಡ ಪಾಟೀಲ, ಎಸ್‌.ಟಿ. ತೆಲಸಂಗ, ಬೀರಪ್ಪ ಪೂಜಾರಿ, ಬಸವರಾಜ ಕುಂಬಾರ (ಕನಕನಾಳ), ಅಪ್ಪುಗೌಡ ಬಿರಾದಾರ, ರಾಜಶೇಖರ ದೊಡಮನಿ, ರಾಮಚಂದ್ರ ಮಹಿಂದ್ರಕರ, ಹಸನಸಾಬ ಇನಾಮದಾರ, ಕೆ.ಡಿ. ಅಗಸರ, ಶಿವರಾಯ ಕುಂಬಾರ ಹಾಗೂ ಜಿಗಜೇವಣಿ, ಕಾತ್ರಾಳ, ಕನಕನಾಳ, ಹಳಗುಣಕಿ, ಕಪನಿಂಬರಗಿ, ಕೋಳೂರಗಿ, ಗುಂದವಾನ, ಅತಾಲಟ್ಟಿ, ಇಂಚಗೇರಿ, ನಂದರಗಿ ಸೇರಿದಂತೆ 62 ಗ್ರಾಮಗಳಿಂದ ಆಗಮಿಸಿದ್ದ ರೈತರು ಇದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.