ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ


Team Udayavani, Jan 14, 2019, 11:01 AM IST

vij-1.jpg

ವಿಜಯಪುರ: ಕರ್ನಾಟಕದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳೆದು ಬಳಸುತ್ತಿರುವ ರಾಗಿ ಕೂಡ ದಕ್ಷಿಣ ಆಫ್ರಿಕಾ ಮೂಲದ್ದು. ಆಫ್ರಿಕಾ ದೇಶದಲ್ಲಿ ಇಂದಿಗೂ ರಾಗಿ ಸೇರಿದಂತೆ ಇತರೆ ಸಿರಿಧಾನ್ಯಗಳನ್ನು ಯಥೇಚ್ಛವಾಗಿ ಬೆಳೆಯುವ ಜೊತೆಗೆ, ಬಳಕೆಯನ್ನೂ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಮೂಲದ ಸಿರಿಧಾನ್ಯ ಹಾಗೂ ದೇಶಿ ಬೀಜ ಸಂರಕ್ಷಕ ಈಶ್ವರನ್‌ ಹೇಳಿದರು.

ರವಿವಾರ ನಗರದ ಎಸ್‌.ಎಸ್‌. ಮೈದಾನದಲ್ಲಿ ಹಮ್ಮಿಕೊಂಡಿರುವ ಸಾವಯವ ಕೃಷಿ ಮತ್ತು ಸಿರಿಧಾನ್ಯ ಮೇಳದಲ್ಲಿ ರೈತರ ಸಂವಾದದಲ್ಲಿ ಅವರು ಮಾತನಾಡಿದರು.

ಸಿರಿಧಾನ್ಯಗಳಿಗೆ ಪ್ರಾಚೀನ‌ ಇತಿಹಾಸವಿದ್ದು, ಚೀನಿ ಯಾತ್ರಿಕ ಹ್ಯೂಯಾನ್ಸ್‌ ತ್ಸಾಂಗ್‌ ಭೇಟಿ ನೀಡಿದ ಸಂದರ್ಭದಲ್ಲಿ ಸಿರಿಧಾನ್ಯಗಳ ಸಂಗ್ರಹಣೆಗೆ ದೊಡ್ಡ ಉಗ್ರಾಣಗಳಿರುವ ಬಗ್ಗೆ ಉಲ್ಲೇಖೀಸಿದ್ದಾರೆ. ಎರಡು ಸಾವಿರ ವರ್ಷಗಳ ಹಿಂದೆ ಅಲೆಕ್ಸಾಂಡರ್‌ ಭಾರತಕ್ಕೆ ಬಂದಿದ್ದ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಬಾರ್ಲಿ ಅಕ್ಕಿ, ದಕ್ಷಿಣ ಭಾರತದಲ್ಲಿ ರಾಗಿ, ನವಣೆ ಬಳಕೆಯಲ್ಲಿದ್ದ ಮಾಹಿತಿ ಸಂಗ್ರಹಿಸಿ ಇದರಲ್ಲೇ ಭಾರತೀಯರ ಆರೋಗ್ಯದ ಗುಟ್ಟು ಅಡಗಿದೆ ಎಂದು ಮನಗಂಡಿದ್ದ. ಬಸವಾದಿ ಶರಣರ ಕಾಲದಲ್ಲಿ ಕೂಡ ಸಿರಿಧಾನ್ಯ ಸಮೃದ್ಧ ಬಳಕೆಯಲ್ಲಿತ್ತು ಎಂಬುದು ಸೊನ್ನಲಿಗೆ ಸಿದ್ದರಾಮ ಸೇರಿದಂತೆ ಇತರೆ ಶರಣರ ವಚನಗಳಲ್ಲಿ ಉಲ್ಲೇಖವಿದೆ. ಸರ್ವಜ್ಞನ ವಚನಗಳಲ್ಲಿ ಕೂಡ ಸಿರಿಧಾನ್ಯಗಳ ಕುರಿತು ಉಲ್ಲೇಖ ಮಾಡಿರುವುದು ಸಿರಿಧಾನ್ಯಗಳ ಮಹತ್ವವನ್ನು ಸಾರುತ್ತದೆ ಎಂದರು.

ಸಿರಿಧಾನ್ಯ ಆಹಾರೋತ್ಪನ್ನಗಳ ಉದ್ಯಮಿ ಮಲ್ಲಿಕಾರ್ಜುನ ಹಟ್ಟಿ ಮಾತನಾಡಿ, ರೈತರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಶ್ರೀಮಂತರಾಗುವ ದಿನಗಳು ದೂರವಿಲ್ಲ. ಸಿರಿಧಾನ್ಯಗಳನ್ನು ಬೆಳೆಯುವುದನ್ನು ಕೈ ಬಿಟ್ಟ ಪರಿಣಾಮವಾಗಿಯೇ ಸಿರಿಧಾನ್ಯಗಳ ಬೆಲೆ ಏರಿಕೆಯಾಗಿದೆ. ಸಿರಿಧಾನ್ಯಗಳನ್ನೇ ಬಳಸಿದ ನಮ್ಮ ಪೂರ್ವಜರು ರಕ್ತದೊತ್ತಡ, ಸಕ್ಕರೆ ಕಾಯಿಲೆಗಳಂಥ ರೋಗಗಳಿಂದ ಮುಕ್ತರಾಗಿದ್ದರು. ನಮ್ಮ ಹಿರಿಯರ ದೀರ್ಘಾಯುಷ್ಯದ ಗುಟ್ಟು ಕೂಡ ಸಿರಿಧಾನ್ಯಗಳ ಬಳಕೆಯಲ್ಲೇ ಅಡಗಿತ್ತು. ಆದರೆ ಸಿರಿಧಾನ್ಯಗಳ ಹೊರತಾದ ವಿಷಯುಕ್ತ ಆಹಾರ ಸೇವಿಸಿ ನಮ್ಮ ಬಾಧಿಸುವ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆ ಹೆಚ್ಚುವುದನ್ನು ಅಭಿವೃದ್ಧಿ ಎನ್ನುತ್ತಿದ್ದೇನೆ ವಿಶ್ಲೇಷಣೆ ಮಾಡುತ್ತಿರುವುದು ವ್ಯವಸ್ಥೆಯ ವಿಪರ್ಯಾಸ ಎಂದರು.

ಅಮೆರಿಕ ಮೊದಲಾದ ರಾಷ್ಟ್ರಗಳಲ್ಲಿ ರೈತರಿಗೆ ಒಂದು-ಎರಡು ಎಕರೆ ಜಮೀನು ಸಹ ಇಲ್ಲ, ಅಲ್ಲಿ ಕೇವಲ ಹಿಮ, ಇಲ್ಲವೇ ಬರಡು. ನೀರಿನ ಸಂಪನ್ಮೂಲ ಸಹ ಕಡಿಮೆ. ಆದರೆ ನಮ್ಮಲ್ಲಿ ಯಥೇಚ್ಛವಾದ ಭೂಮಿ, ಜಲ, ಬಿಸಿಲು ಸೇರದಂತೆ ಹಲವು ನೈಸರ್ಗಿಕ ಸಂಪನ್ಮೂಲಗಳಿದ್ದರೂ ಸದ್ಭಳಕೆಯಲ್ಲಿ ವಿಫಲರಾಗಿದ್ದೇವೆ. ಪರಿಣಾಮ ಕೃಷಿ ಕ್ಷೇತ್ರಕ್ಕೆ ಪ್ರಸಕ್ತ ಸಂದರ್ಭದಲ್ಲಿ ಹೆಚ್ಚಿನ ಸವಾಲು ಎದುರಿಸುವಂತಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿದಾಗ ಮಾತ್ರ ಕೃಷಿಯಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದರು.

ಸಿರಿಧಾನ್ಯಗಳು ನರದೌರ್ಬಲ್ಯ ನಿವಾರಣೆ, ಶ್ವಾಸಕೋಶ ತೊಂದರೆ, ಮಧುಮೇಹ, ಸಂಧಿವಾತ, ಮುಷ್ಠಿರೋಗ, ಕಾಮಾಲೆ ಸೇರಿದಂತೆ ನೂರಾರು ರೋಗಗಳಿಗೆ ರಾಮಬಾಣವಾಗಿವೆ, ಸಿರಿಧಾನ್ಯಗಳಲ್ಲಿ ನಾರಿನಾಂಶವೇ ಅಧಿಕವಾಗಿರುವುದರಿಂದ ದೇಹಕ್ಕೆ ಅತ್ಯಂತ ಅನುಕೂಲ ಎಂದು ಪಿಪಿಪಿ ಮೂಲಕ ವಿವರಣೆ ನೀಡಿದರು.

ಪ್ರಗತಿಪರ ರೈತ ಬಸನಗೌಡ ಕನಕರೆಡ್ಡಿ ಮಾತನಾಡಿ, ಸಾವಯವ ಕೃಷಿಯ ತಮ್ಮ ಅನುಭವವನ್ನು ಹಂಚಿಕೊಂಡರು. ಮುಂದಿನ ಪೀಳಿಗೆಗೆ ಸತ್ವಯುತ ಭೂಮಿಯನ್ನು ಬಿಟ್ಟು ಕೊಡಬೇಕಾಗಿರುವುದು ಅನಿವಾರ್ಯವಾಗಿದೆ. ಜಮೀನಿನ ಅರ್ಧ ಭಾಗದಲ್ಲಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಿ, ಆರೋಗ್ಯವನ್ನು ಕಾಪಾಡಿಕೊಂಡು ಅಂಗೈಯಲ್ಲಿ ಆರೋಗ್ಯ ಎಂಬ ಸೂತ್ರವನ್ನು ಅನುಷ್ಠಾನಕ್ಕೆ ತರಬೇಕು ಎಂದು ಕರೆ ನೀಡಿದರು.

ಪ್ರಗತಿಪರ ರೈತರಾದ ಸಿದ್ದಣ್ಣ ಬಾಲಗೊಂಡ, ರಾಜಶೇಖರ ನಿಂಬರಗಿ, ಮಲ್ಲಿಕಾರ್ಜುನ ಹಟ್ಟಿ, ಭೂಸಗೊಂಡ ಮಾತನಾಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ| ಶಿವಕುಮಾರ ಪ್ರಾಸ್ತಾವಿಕ ಮಾತನಾಡಿದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.