ಬಿಡಾಡಿ ಹೋರಿಗೆ ರೈತರಿಂದ ಆರೈಕೆ


Team Udayavani, Jan 23, 2019, 11:00 AM IST

vij-3.jpg

ಮುದ್ದೇಬಿಹಾಳ: ಮಗಡಾ ಕೊರೆದು ಮುಖದಲ್ಲಿ ಭಾರಿ ಗಾಯವಾಗಿ ಹುಳ ಬಿದ್ದು ಸಂಕಟಪಡುತ್ತಿದ್ದ ಬಿಡಾಡಿ ಹೋರಿಯೊಂದನ್ನು ಹಿಡಿದು ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ಕಾಂಗ್ರೆಸ್‌ ಕಾರ್ಮಿಕ ಘಟಕದ ಅಧ್ಯಕ್ಷ ಇಬ್ರಾಹಿಂ ಮುಲ್ಲಾ ಅವರು ಹೊಲವೊಂದರಲ್ಲಿ ನೋವಿನಿಂದ ಒದ್ದಾಡುತ್ತ ಮಲಗಿದ್ದ ಈ ಹೋರಿಯನ್ನು ನೋಡಿದ್ದರು. ಪುರಸಭೆ ಮಾಜಿ ಅಧ್ಯಕ್ಷ ಶೃಂಗಾರಗೌಡ ಪಾಟೀಲ, ಮುತ್ತು ವಡವಡಗಿ ಮತ್ತು ತಮ್ಮ ಮಕ್ಕಳೊಂದಿಗೆ ಹೋರಿಗಾಗಿ ಹುಡುಕಾಟ ನಡೆಸಿದರೂ ಹೋರಿ ಸಿಕ್ಕಿರಲಿಲ್ಲ. ಕೊನೆಗೆ ಮಂಗಳವಾರ ಮಧ್ಯಾಹ್ನ ಹೋರಿ ಹಿಡಿದು ಬಿಇಒ ಕಚೇರಿ ಹತ್ತಿರ ಕಟ್ಟಿ ಹಾಕಲಾಗಿತ್ತು.

ರೈತರೂ ಆಗಿರುವ ಪುರಸಭೆ ಸದಸ್ಯ ಬಸಪ್ಪ ತಟ್ಟಿ, ಗುಂಡಪ್ಪ ತಟ್ಟಿ, ಈರಪ್ಪ ಸಣಗೇರಿ, ಲಾಲಸಾ ಗುರಿಕಾರ ಮತ್ತಿತರರು ಹೋರಿಯನ್ನು ನೆಲಕ್ಕೆ ಕೆಡವಿ ಅದರ ಮುಖಕ್ಕೆ ಹಾಕಿದ್ದ ಮಗಡಾ ತುಂಡರಿಸಿ ಗಾಯಕ್ಕೆ ಔಷಧೋಪಚಾರ ಮಾಡಿ ಅದರ ನೋವು ನಿವಾರಣೆಗೆ ಹರಸಾಹಸ ಪಟ್ಟರು. ಈ ವೇಳೆ ಹೋರಿಗೆ ಚಿಕಿತ್ಸೆ ನೀಡಿದ ರೈತರನ್ನು ಇಬ್ರಾಹಿಂ ಮುಲ್ಲಾ ಹೂಮಾಲೆ ಹಾಕಿ ಮಾನವೀಯತೆಯನ್ನು ಕೊಂಡಾಡಿದರು.

ಈ ವೇಳೆ ಮಾತನಾಡಿದ ಇಬ್ರಾಹಿಂ, ಹೋರಿ ಸಣ್ಣದಿದ್ದಾಗಲೇ ಮಗಡಾ ಹಾಕಲಾಗಿದೆ. ಹೋರಿ ಬೆಳೆದಂತೆ ಮಗಡಾ ಸಣ್ಣದಾಗಿ ಮುಖದ ಚರ್ಮ ಸೀಳಿಕೊಂಡು ದೊಡ್ಡ ಗಾಯ ಮಾಡಿದೆ. ಗಾಯಕ್ಕೆ ಸೂಕ್ತ ಚಿಕಿತೆ ಇಲ್ಲದ್ದರಿಂದ ಹುಳ ಬಿದ್ದು ಸಂಕಟಪಡುತ್ತಿತ್ತು. ಇನ್ನೂ ಕೆಲ ದಿನ ಹಾಗೆ ಬಿಟ್ಟಿದ್ದರೆ ಅದು ಅನಾಥವಾಗಿ ಸಾವನ್ನಪ್ಪುವ ಸಂಭವ ಇತ್ತು. ತಟ್ಟಿ ಮತ್ತು ಸಣಗೇರಿ ಅವರು ಪ್ರಯತ್ನಪಟ್ಟು ಹೋರಿಯ ಮಗಡಾ ಕತ್ತರಿಸಿ ಔಷಧ ಹಾಕಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಹೋರಿಯನ್ನು ಪುರಸಭೆ ಸದಸ್ಯ ಬಸಪ್ಪ ಅವರ ಮನೆಯಲ್ಲಿ ಕಟ್ಟಿ ಹಾಕಿ ಮೇಯಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ವಾರಸುದಾರರು ಬಂದಲ್ಲಿ ಮಾಲೀಕತ್ವ ಖಚಿತಪಡಿಸಿಕೊಂಡು ಹೋರಿ ಹಸ್ತಾಂತರಿಸಲಾಗುತ್ತದೆ. ಇಲ್ಲವಾದಲ್ಲಿ ತಟ್ಟಿ ಅವರೇ ಅದನ್ನು ಸಾಕಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.