ಅಗಸಬಾಳ ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ


Team Udayavani, Feb 5, 2019, 12:09 PM IST

vij-2.jpg

ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಕೆರೆಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಅಗಸಬಾಳ, ಹಳ್ಳೂರ, ಜಾಯವಾಡಗಿ, ಕಾನ್ಯಾಳ ಗ್ರಾಮ ವ್ಯಾಪ್ತಿಯ ನೂರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದರು.

ಎಪಿಎಂಸಿ ಮೂಲಕ ಹಲಗೆ ಬಾರಿಸುತ್ತ ಅಂಬೇಡ್ಕರ್‌ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳಿದ ರೈತರು ಅಲ್ಲಿ ಬಹಿರಂಗ ಸಭೆ ನಡೆಸಿದರು. ಈ ವೇಳೆ ರೈತರನ್ನುದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ಅರವಿಂದ ಕೊಪ್ಪ, ಸಂಗಣ್ಣ ಬಾಗೇವಾಡಿ, ವೈ.ಎಲ್‌. ಬಿರಾದಾರ ಮಾತನಾಡಿ, ಜನಪ್ರತಿನಿಧಿಗಳ ಮಲತಾಯಿ ಧೋರಣೆ ಖಂಡಿಸಿದರು.

ಮಳೆ ಕೈ ಕೊಟ್ಟಿದ್ದರಿಂದ 10 ವರ್ಷಗಳ ನಿರಂತರ ಬರಗಾಲಕ್ಕೆ ಈ ಭಾಗ ತುತ್ತಾಗಿದೆ. ಬೋರ್‌ವೆಲ್‌, ಬಾವಿ ಮುಂತಾದ ಜಲಮೂಲಗಳಲ್ಲಿ ಅಂತರ್ಜಲವೂ ಕೈಕೊಟ್ಟಿದ್ದರಿಂದ ಪರಿಸ್ಥಿತಿ ಗಂಭಿರವಾಗತೊಡಗಿದೆ. ತಾಲೂಕಿನಲ್ಲೇ ದೊಡ್ಡದಾಗಿರುವ ಈ ಕೆರೆಯಲ್ಲಿ ನೀರಿದ್ದಾಗ ಸುತ್ತಲಿನ ಹಳ್ಳಿಗಳ ಜನರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಬರಗಾಲ ಪರಿಣಾಮ ಕೆರೆ ಬತ್ತಿ ಹೋಗಿ ಬಂಜರು ಭೂಮಿಯಂತಾಗಿದೆ. ಇದೇ ಪರಿಸ್ಥಿತಿ ಸುತ್ತಲಿನ ಜಮೀನುಗಳಲ್ಲೂ ಇದೆ. ಪಕ್ಷಿ, ಪ್ರಾಣಿಗಳು ನೀರಿಲ್ಲದೆ ಸಾಯುತ್ತಿವೆ. ಜನರ ಪರಿಸ್ಥಿತಿಯೂ ಗಂಭಿರವಾಗತೊಡಗಿದೆ. ನೀರಿಗಾಗಿ ಎಲ್ಲ ಕಡೆ ಅಲೆದಾಡುವಂತಾಗಿದೆ ಎಂದು ಮನವಿಯಲ್ಲಿ ಸಮಸ್ಯೆ ಬಿಡಿಸಿಡಲಾಗಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಕೆರೆ ತುಂಬಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಮಧ್ಯ ಚುನಾವಣೆ ಬಂದಿದ್ದರಿಂದ ಯೋಜನೆ ನನೆಗುದಿಗೆ ಬಿತ್ತು. ಆನಂತರ ಜನಪ್ರತಿನಿಧಿಗಳಿಗೆ ಮನವಿ ಕೊಟ್ಟರೂ ಪ್ರಯೋಜನ ಆಗಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು, ಸಚಿವರು ಎಚ್ಚೆತ್ತುಕೊಂಡು 15 ದಿನಗಳಲ್ಲಿ ಈಗಿನ ಮಟ್ಟಿಗಾದರೂ ಕೆರೆ ತುಂಬಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ 3 ಕಿ.ಮೀ. ಅಂತರದಲ್ಲಿರುವ ಆಲಕೊಪ್ಪರ-ಕಣಕಾಲ ಬಳಿ ಕಾಲುವೆ ಪ್ರಯೋಜನ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುತ್ತದೆ. ಆ ವೇಳೆ ಪ್ರಾಣಾಹುತಿ ಆದರೆ ಅದಕ್ಕೆ ಸರ್ಕಾರ, ತಾಲೂಕು, ಜಿಲ್ಲಾ ಆಡಳಿತಗಳೇ ಹೊಣೆಯಾಗಬೆಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ಅರವಿಂದ ಕೊಪ್ಪ, ಎನ್‌.ಆರ್‌. ಮೊಕಾಶಿ, ಅರವಿಂದ ಕಾಶಿನಕುಂಟಿ, ದುಂಡೇಶ ಅರಸುಣಗಿ, ಆರ್‌.ಎಸ್‌. ಪಾಟೀಲ, ಬಸನಗೌಡ ಪಾಟೀಲ, ರಾಜು ಕಾಶಿನಕುಂಟಿ, ರಾಮಣ್ಣ ಕುಂಬಾರ, ಹನುಮಂತ್ರಾಯ ಕುಂಬಾರ, ಹನುಮಂತ್ರಾಯ ಬಿಸನಾಳ, ಶಶಿಧರ ಕಾಶಿನಕುಂಟಿ ಸೇರಿದಂತೆ ನೂರಾರು ರೈತರು, ರೈತ ಮಹಿಳೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.