ನಾಳೆ ಅಕ್ಕಮಹಾದೇವಿ ವಿವಿ ಘಟಿಕೋತ್ಸವ


Team Udayavani, Feb 12, 2019, 11:49 AM IST

vij-1.jpg

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಫೆ.13ರಂದು ನಡೆಯಲಿದ್ದು, ಧಾರವಾಡದ ಸಂಗೀತ ಸಾಧಕಿ ನಂದಾ ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿವಿ ಉಪ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜರುಗಲಿರುವ ಘಟಿಕೋತ್ಸವದಲ್ಲಿ ಎಚ್ಎಎಲ್‌ ಪ್ರಧಾನ ವ್ಯವಸ್ಥಾಪಕಿ ನೇಮಿಚಂದ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಫೆ.13ರಂದು ಬೆ.11 ಗಂಟೆಗೆ ವಿಶ್ವವಿದ್ಯಾಲಯದ ಆವರಣದ ಕ್ರೀಡಾಂಗಣದಲ್ಲಿ ಮಹಿಳಾ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ನಂದಾ ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದರು.

46 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ. ಮತ್ತು 10 ವಿದ್ಯಾರ್ಥಿನಿಯರಿಗೆ ಎಂ.ಫಿಲ್‌ ಹಾಗೂ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕ ಪಡೆದ 56 ವಿದ್ಯಾರ್ಥಿನಿಯರಿಗೆ 67 ಚಿನ್ನದ ಪದಕ ಸಹಿತ ಪದವಿ ಪ್ರದಾನ ನಡೆಯಲಿದೆ. ಸ್ನಾತಕ, ಸ್ನಾತಕೋತ್ತರ ಮತ್ತು ಪಿಜಿ ಡಿಪ್ಲೊಮಾ ಸೇರಿ ಒಟ್ಟು 10,873 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 1293 ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳವಾಗಿದೆ ಎಂದರು.

ವಿವಿ ಪರ್ಯಾಯ ಇಂಧನ ಬಳಕೆ ಉತ್ತೇಜಿಸುತ್ತಿದ್ದು, ಕೇಂದ್ರ ಸರ್ಕಾರದ ಎಸ್‌ಸಿಐ-ಬೂಟ ಯೋಜನೆ ಅಡಿಯಲ್ಲಿ 170 ಕೆವಿ ವಿದ್ಯುತ್‌ ಉತ್ಪಾದಿಸುವ 2 ಸೌರ ಘಟಕ ಸ್ಥಾಪಿಸಲಾಗಿದೆ. ಇದರಿಂದ ವಿವಿಗೆ ಮಾಸಿಕ 1 ಲಕ್ಷ ರೂ. ಉಳಿತಾಯವಾಗುತ್ತಿದೆ. ಇದಲ್ಲದೇ ದೇಶದಲ್ಲೇ ಮೊಟ್ಟ ಮೊದಲು ಬಾರಿ ಮಹಿಳಾ ಅಸ್ಮಿತೆ-ಮಹಿಳಾ ಅನನ್ಯತೆ ಪ್ರತಿಬಿಂಬಿಸುವ ಮಹಿಳಾ ವಸ್ತುಸಂಗ್ರಹಾಲಯ ಸ್ಥಾಪನೆ ಯೋಜನೆ ರೂಪಿಸಿದ್ದು, 10 ಕೋಟಿ ವೆಚ್ಚದ ಯೋಜನೆಯ ಪ್ರಸ್ತಾವನೆ ಕೇಂದ್ರದ ಸಂಸ್ಕೃತಿ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತ್ಯೇಕವಾಗಿ ಸಲ್ಲಿಸಲಾಗಿದೆ ಎಂದರು.

ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿಗಾಗಿ ಅಲ್ಪಾವಧಿ-ಮಧ್ಯಮಾವಧಿ ಕೋರ್ಸ್‌ ಆರಂಭಿಸಲು ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ. ಬೋಧನೆಯಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕೆ ಮಾಹಿತಿ ತಂತ್ರಜ್ಞಾನ ಆಧಾರದಲ್ಲಿ ಮಾ.8ರಂದು ಮಹಿಳಾ ದಿನಾಚರಣೆ ದಿನ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಟೆಲಿ ಎಜ್ಯುಕೇಶನ್‌ ಕಾರ್ಯಕ್ರಮ ಪ್ರಸಾರಕ್ಕೆ ಯೋಜಿಸಿದ್ದೇವೆ. ವಿಶ್ವವಿದ್ಯಾನಿಲಯದಲ್ಲಿ ಹಸಿರೀಕರಣ ಹೆಚ್ಚಳಕ್ಕಾಗಿ ವಿವಿಧ 987 ಬಗೆಯ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದ್ದು, ಓರ್ವ ವಿದ್ಯಾರ್ಥಿನಿ ಒಂದು ಸಸಿ ದತ್ತು ಯೋಜನೆ ಆರಂಭಿಸಲಾಗಿದೆ ಎಂದರು.

ಪತ್ರಿಕೋದ್ಯಮ ವಿಭಾಗದಲ್ಲಿ ಡಾ.ಎಸ್‌.ಎಸ್‌.ಸಿದರೆಡ್ಡಿ ಟ್ರಸ್ಟ್‌ನಿಂದ ಪ್ರಥಮ ಮಹಿಳಾ ಕಾರ್ಯಪಡೆಯ ಅಧ್ಯಕ್ಷರಾಗಿದ್ದ ಗುರಮ್ಮ ಸಿದರೆಡ್ಡಿ ದತ್ತಿ ಹಾಗೂ ಎ.ಕೆ. ಬರಡೋಲ ಹೆಸರಿನಲ್ಲಿ ಗ್ರಂಥಾಲಯ ವಿಭಾಗದಲ್ಲಿ ದತ್ತಿ ಉಪನ್ಯಾಸ ಸ್ಥಾಪಿಸಲಾಗಿದೆ. ಪ್ರಸಕ್ತ ವರ್ಷ ಕನ್ನಡ, ಮಹಿಳಾ ಅಧ್ಯಯನ, ಗ್ರಂಥಾಲಯ ಹಾಗೂ ಪತ್ರಿಕೋದ್ಯಮ ವಿಭಾಗಗಳಲ್ಲಿ ತಲಾ ಒಂದೊಂದು ಚಿನ್ನದ ಪದಕ ನೀಡಲಾಗುತ್ತಿದೆ. ಸಾವಿತ್ರಿ ಪಂಚಗಟ್ಟಿ ಹೆಸರಿನಲ್ಲಿ ವಿವಿಧ ಪದವಿ ಕೋರ್ಸ್‌ಗಳಲ್ಲಿ ಓದುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸಲು 4 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ನೀಡಲು ನಿಧಿ ಸ್ಥಾಪಿಸಲಾಗಿದೆ ಎಂದರು. ಕುಲಸಚಿವೆ ಪ್ರೊ.ಆರ್‌.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪಿ.ಜಿ.ತಡಸದ, 10ನೇ ಘಟಿಕೋತ್ಸವದ ಸಂಯೋಜನಾಧಿಕಾರಿ ಡಿ.ಎಂ.ಜ್ಯೋತಿ, ಮಾಧ್ಯಮ ಸಂಯೋಜನಾಧಿಕಾರಿ ಓಂಕಾರ ಕಾಕಡೆ ಇದ್ದರು.

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.